Get Updates
Get notified of breaking news, exclusive insights, and must-see stories!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಸರ್ಕಾರದ ಸಹಕಾರ: ಸುರೇಶ್ ಕುಮಾರ್

ಬೆಂಗಳೂರು, ಜನವರಿ 06: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವ ಬ್ರಾಹ್ಮಣರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಬುಧವಾರ ವಿಧಾನ ಸೌಧದದಲ್ಲಿ ನಡೆದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಕಳೆದ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಬ್ರಾಹ್ಮಣ ವಿದ್ಯಾರ್ಥಿಗಳನ್ನು ಗೌರವಿಸಿ ಮತ್ತು ಮಂಡಳಿಯ 'ಅರುಂಧತಿ' ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಮುಂದೆ ಓದಿ...

"ಮಕ್ಕಳ ಪ್ರತಿಭೆ ಅನಾವರಣಕ್ಕೆ ಅವಕಾಶವಾಯಿತು"

ಕಳೆದ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ರಾಜ್ಯಗಳು ಮಂಡಳಿ ಪರೀಕ್ಷೆ ಕೈಬಿಟ್ಟಾಗ ಮಕ್ಕಳ ಹಿತದೃಷ್ಟಿಯಿಂದ ನಮ್ಮ ಸರ್ಕಾರ ಮಂಡಳಿ ಪರೀಕ್ಷೆಯನ್ನು ನಡೆಸಿದ್ದರಿಂದ ಇಂತಹ ಅನೇಕ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರತಿಭೆಗಳ ಅನಾವರಣಕ್ಕೆ ಅವಕಾಶವಾಯಿತು ಎಂದರು. ಕಳೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪೂರ್ಣ 625 ಅಂಕಗಳನ್ನು ಪಡೆದ ವಿದ್ಯಾರ್ಥಿನಿ ಸೇರಿದಂತೆ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಮಕ್ಕಳು ವೇದಿಕೆಯಲ್ಲಿ ಗೌರವಕ್ಕೆ ಪಾತ್ರರಾದದ್ದನ್ನು ನೋಡಿದ ಸಚಿವರು, ಪರೀಕ್ಷೆ ನಡೆಸದೇ ಹೋಗಿದ್ದರೆ ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತಿತ್ತು ಎಂದು ಹೇಳಿದರು.

"ಎಷ್ಟೇ ಕಷ್ಟವೆನಿಸಿದರೂ ಪರೀಕ್ಷೆ ನಡೆಸಿದೆವು"

ಪ್ರತಿಭಾವಂತರಿಗೆ ಅನ್ಯಾಯವಾಗುವುದನ್ನು ತಪ್ಪಿಸುವ ಕಾರಣದಿಂದಲೇ ಎಷ್ಟೇ ಕಷ್ಟವಾದರೂ ನಮ್ಮ ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಿತು. ಅಂದು ನಡೆದ ಪರೀಕ್ಷೆಯ ಯಶಸ್ಸು ಅಂದು ಮನೆಯಿಂದ ಧೈರ್ಯವಾಗಿ ಹೊರಬಂದು ಪರೀಕ್ಷೆ ಬರೆದ 8.5 ಲಕ್ಷ ಮಕ್ಕಳಿಗೆ ಸಲ್ಲಬೇಕಿದೆ ಎಂದರು.

"ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಪಠ್ಯಗಳಿಲ್ಲ"

ಕಳೆದ ತಿಂಗಳು ಆರನೇ ತರಗತಿ ಪುಸ್ತಕದಲ್ಲಿ ವಿಪ್ರ ಸಮಾಜಕ್ಕೆ ಅವಹೇಳನವಾಗುವಂತಹ ಪಠ್ಯವೊಂದಿರುವ ಕುರಿತು ಮಂತ್ರಾಲಯ ಶ್ರೀಮಠದ ಪೂಜ್ಯರು ನನ್ನ ಗಮನಕ್ಕೆ ತಂದಿದ್ದಲ್ಲದೇ ಪಠ್ಯಗಳಲ್ಲಿ ಯಾವುದೇ ಸಮಾಜದ ಇಲ್ಲವೇ ಯಾವುದೇ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಪಠ್ಯಗಳಿರಬಾರದು ಎಂದರು. ತಕ್ಷಣವೇ ಅವರಿಗೆ ಮಾತು ಕೊಟ್ಟಂತೆ ತಾವು ಅದನ್ನು ಸರಿಪಡಿಸಿದೆವು. ಈ ಪಠ್ಯ ನಮ್ಮ ಸರ್ಕಾರದ ಅವಧಿಯಲ್ಲಿ ಪರಿಷ್ಕರಿಸಿದ್ದಾಗಿರಲಿಲ್ಲ ಎಂಬುದನ್ನು ನಾನು ಮಂತ್ರಾಲಯದ ಶ್ರೀಗಳ ಗಮನಕ್ಕೆ ತಂದು ಯಾವುದೇ ಸಮಾಜದ ಭಾವನೆಗಳಿಗೆ ಧಕ್ಕೆಯಾಗುವಂತಹ ಪಠ್ಯಗಳಿದ್ದರೆ ಅವುಗಳನ್ನು ಪಠ್ಯದಿಂದ ಕೈಬಿಡುವ ಕುರಿತು ಗಮನ ಹರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದರು.

Recommended Video

    IPL ಮಿನಿ ಹರಾಜು ಪ್ರಕ್ರಿಯೆಗೆ ಆಟಗಾರರು ಸಿದ್ದ | Oneindia Kannada

    "ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಸರ್ಕಾರದ ಸಹಕಾರ"

    ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿಯವರು ತಮಗೆ ದೊರೆತ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು ಸಮಾಜದ ಬಡವರ ಆರ್ಥಿಕಾಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆಂದು ಕೃತಜ್ಞತೆ ವ್ಯಕ್ತಪಡಿಸಿದರು. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವ ಬ್ರಾಹ್ಮಣರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು ಎಂದು ಹೇಳಿದರು.

    ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಆರ್. ಅಶೋಕ್, ಕೆ. ಗೋಪಾಲಯ್ಯ, ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಶಾಸಕರಾದ ಎಸ್.ಆರ್. ಶ್ರೀನಿವಾಸ್, ಎಸ್.ಎ. ರಾಮದಾಸ್, ಉದಯಗರುಡಾಚಾರ್, ಪೂರ್ಣಿಮಾ ಶ್ರೀನಿವಾಸ್, ನಿವೃತ್ತ ನ್ಯಾಯಮೂರ್ತಿ ಎನ್. ಕುಮಾರ್, ಹಿಂದಿನ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ ಮತ್ತಿತರರು ಭಾಗವಹಿಸಿದ್ದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸಿದ್ದರು.

    More From
    Prev
    Next
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+