ಕೈಲಾಗದವರು ಎಂದು ರಾಜ್ಯಪಾಲರು ಹೇಳಿದ್ದು ಯಾರಿಗೆ?
ಬೆಂಗಳೂರು, ಜೂ 6: ಬೆಂಗಳೂರು ನಗರವನ್ನು ಪೆಡಂಭೂತದಂತೆ ಕಾಡುತ್ತಿರುವ ಕಸದ ಸಮಸ್ಯೆಯ ಬಗ್ಗೆ ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಸಿಕ್ಕಾಪಟ್ಟೆ ಸಿಟ್ಟಾಗಿದ್ದಾರೆ. ಕೈಲಾದವರಿಗೆ ಏನು ಮಾಡಲು ಸಾಧ್ಯ ಎಂದು ಬಿಬಿಎಂಪಿ ಅಧಿಕಾರಿಗಳನ್ನು ಸಮಾ ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದಲ್ಲಿ ಶುಕ್ರವಾರ (ಜೂ 6) ಬಿಎಸ್ಎನ್ಎಲ್ ಸಂಸ್ಥೆಯ ' ಪೆಂಟಾ ಭಾರತ್' ಫೋನ್ ಬಿಡುಗಡೆ ಮಾಡಿ ಮಾತನಾಡುತ್ತಿದ್ದ ಭಾರದ್ವಾಜ್, ನಗರದ ಕಸದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಪರ್ಯಾಯ ಮಾರ್ಗವನ್ನು ಹುಡುಕದೇ ಹೀಗೇ ಇರುತ್ತೇವೆ ಎನ್ನುವವರಿಗೆ ಏನು ಮಾಡಲು ಸಾಧ್ಯ ಎಂದು ಕಿಡಿಕಾರಿದ್ದಾರೆ. (ಮಂಡೂರು: ಒನ್ ಇಂಡಿಯಾ ಕನ್ನಡ ರಿಪೋರ್ಟ್)

ಬೆಂಗಳೂರು ಕಸದ ಸಮಸ್ಯೆಗೆ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳು ಸ್ಪಂಧಿಸಬೇಕು, ಕಸವನ್ನು ಹೊರಹಾಕಿ ನಗರವನ್ನು ಸ್ವಚ್ಛಗೊಳಿಸಬೇಕು. ನಾವು ಹಾಗೇ ಮಾಡುವುದಿಲ್ಲ, ಹೀಗೇ ಬದುಕುತ್ತೇವೆ ಎನ್ನುವ ಕೈಲಾಗದವರಿಗೆ ನಾನು ಏನು ಹೇಳಲು ಸಾಧ್ಯವೆಂದು ರಾಜ್ಯಪಾಲರು ಬೇಸರ ವ್ಯಕ್ತ ಪಡಿಸಿದ್ದಾರೆ.
ಕಾವೇರಿ ಸಮಸ್ಯೆಗೆ ಎರಡೂ ರಾಜ್ಯದ ಮುಖ್ಯಮಂತ್ರಿಗಳು ಕೂತು ಚರ್ಚಿಸಿ ಪರಿಹಾರ ಕೊಂಡುಕೊಳ್ಳಬೇಕು. ಆದರೆ ಅದನ್ನೇ ದೊಡ್ಡದು ಮಾಡಿದರೆ ಸಮಸ್ಯೆ ಇನ್ನಷ್ಟು ಉಲ್ಭಣವಾಗುತ್ತದೆ ಎಂದು ರಾಜ್ಯಪಾಲರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ರಾಜ್ಯಪಾಲರು, ಈ ರಾಜ್ಯದ ಜನತೆ ನನಗೆ ಉತ್ತಮ ಸಹಕಾರ ನೀಡಿದ್ದಾರೆ. ರಾಜ್ಯದಲ್ಲಿ ಇದ್ದಷ್ಟು ದಿನ ಚೆನ್ನಾಗಿಯೇ ಇರುತ್ತೇನೆ. ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದಿದ್ದಾರೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications