ರಾಜ್ಯಪಾಲರು ಆತುರದಿಂದ ಸಿಎಂಗೆ ನೋಟಿಸ್: ವಾಪಸ್ ಪಡೆಯದಿದ್ದರೆ ಕಾನೂನು ಹೋರಾಟ: ಗೃಹ ಸಚಿವ
ಬೆಂಗಳೂರು, ಆಗಸ್ಟ್ 02: ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ಇದು ಆತುರಾತುರದಲ್ಲಿ ನೀಡಲಾಗಿದೆ. ಇದೆಲ್ಲ ನೋಡಿದರೆ ರಾಜ್ಯಪಾಲರ ಮೇಲೆ ಬೇರೆ ಬೇರೆ ರೀತಿಯಲ್ಲಿ ಒತ್ತಡಗಳು ಬಂದಿದೆ ಎಂಬ ಅನುಮಾನ ವ್ಯಕ್ತವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಗೃಹ ಸಚಿವರು, ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿರುವ ನೋಟಿಸ್ ಕುರಿತು ಏನು ಮಾಡಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ನೋಟಿಸ್ ಹಿಂಪಡೆಯುವ ಸಂಪುಟದ ತಿರ್ಮಾನವನ್ನು ನಿನ್ನೆ ರಾತ್ರಿಯೇ ರಾಜ್ಯಪಾಲರಿಗೆ ಕಳುಹಿಸಲು ತೀರ್ಮಾನಿಸಲಾಗಿತ್ತು. ರಾಜ್ಯದಲ್ಲಿ ರಾಜ್ಯಪಾಲರು ಇಲ್ಲ, ರಾಜ್ಯಪಾಲರ ಕಚೇರಿಗೆ ಸರ್ಕಾರದ ನೀರ್ಣಯ ತಲುಪಿಸಿರಬೇಕು ಎಂದು ತಿಳಿಸಿದರು.

ನಾವು ಕಾನೂನಾತ್ಮಕ ಹೋರಾಟಕ್ಕೆ ಸಿದ್ಧ
ಒಂದು ವೇಳೆ ರಾಜ್ಯಪಾಲರು ಏನೇ ನಿರ್ಧಾರ ಕೈಗೊಂಡರು ನಾವು ಎದುರಿಸಲಿದ್ದೇವೆ. ನಾವೆಲ್ಲರು ಕಾನೂನಾತ್ಮಕ ಹೋರಾಟ ಮಾಡಲಿದ್ದೇವೆ. ರಾಜ್ಯಪಾಲರು ಯಾವುದೇ ನಿರ್ಧಾರ ಕೈಗೊಂಡರು ಸಹಿತ ನಮ್ಮ ಸರ್ಕಾರ ನ್ಯಾಯಾಲಯದ ಬಾಗಿಲು ತಟ್ಟಬೇಕಾಗುತ್ತದೆ ಎಂದು ಮುಂದಿನ ನಡೆ ಬಗ್ಗೆ ತಿಳಿಸಿದರು.
ರಾಜ್ಯಪಾಲರಿಗೆ ಶೋಕಾಸ್ ನೊಟೀಸ್ ಕೊಡುವುದು, ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುವ ಅಧಿಕಾರ ಹೊಂದಿದ್ದಾರೆ. ಆದರೆ ಅದನ್ನು ಅವರು ದಾಖಲೆ ಸಮೇತ ಸಮರ್ಥಿಸಿಕೊಳ್ಳಬೇಕಾಗುತ್ತದೆ. ನೋಟಿಸ್ ನೀಡಿದ್ದಕ್ಕೆ ಅವರು ಸ್ಪಷ್ಟನೆ ಕೊಡಬೇಕಾದ ಪ್ರಕ್ರಿಯೆಗಳು ಇರುತ್ತವೆ ಎಂದು ಅವರು ವಿವರಿಸಿದರು.

ದೂರು ದಾಖಲಾದ ದಿನವೇ ರಾಜ್ಯಪಾಲರಿಂದ ನೋಟಿಸ್
ಇನ್ನು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಒತ್ತಾಯಿಸಿದ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರಿಂದ ದೂರು ಪಡೆದ ದಿನವೇ (ಜುಲೈ 26) ರಾಜ್ಯಪಾಲರು ಸಿಎಂಗೆ ನೊಟೀಸ್ ಕೊಟ್ಟಿದ್ದಾರೆ. ಅದೇ ದಿನ ಸಿಎಸ್ ಅವರು ರಾಜ್ಯಪಾಲರ ಪ್ರಶ್ನೆಗಳಿಗೆ ಲಿಖಿತ ರೂಪದಲ್ಲಿ ಕೊಟ್ಟು ಬಂದಿದ್ದಾರೆ. ಇದಾದ ಬಳಿಕ ರಾಜ್ಯಪಾಲರ ಶೋಕಾಸ್ ನೊಟೀಸ್ ಸಿಎಂ ಕೈಸೇರಿದೆ.
ಸದ್ಯ ಶೋಕಾಸ್ ನೋಟಿಸ್ ನೀಡಿರುವ ರಾಜ್ಯಪಾಲರ ಸಂಪುಟ ಸಭೆಯ ಮನವಿ ಸಲಹೆ, ಮನವಿ ಪುರಸ್ಕರಿಸಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವುದಿಲ್ಲ ಎಂಬ ವಿಶ್ವಾಸ ಇದೆ. ಒಂದು ವೇಳೆ ಕಾನೂನು ಪ್ರಕ್ರಿಯೆಗೆ ಅನುಮತಿ ಕೊಟ್ಟರೂ ಅದನ್ನು ಕಾನೂನು ಪ್ರಕಾರ ಎದುರಿಸುತ್ತೇವೆ ಎಂದರು.
ರಾಜ್ಯಪಾಲರ ತಪ್ಪು ಮನವರಿಕೆ ಮಾಡಿಕೊಡುತ್ತೇವೆ
ರಾಜ್ಯಪಾಲರು ಮತ್ತು ಸರ್ಕಾರದ ಮಧ್ಯೆ ಅನೇಕ ಸಂದರ್ಭದಲ್ಲಿ ಇಂಥ ಸಂದರ್ಭಗಳು ಬರುತ್ತವೆ. ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತೇವೆ. ನಿಮ್ಮಿಂದ ತಪ್ಪಾಗಿದೆ ಅಂತ ಮನವರಿಕೆ ಮಾಡಿಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ. ಅವರೇ ಸಂವಿಧಾನಬದ್ಧ ಅಧಿಕಾರ ಸರಿಯಾಗಿ ಉಪಯೋಗಿಸದಿದ್ದರೆ ನಾವು ಕಾನೂನು ಮೊರೆ ಹೋಗಬೇಕಾಗುತ್ತದೆ ಎಂದು ತಿಳಿಸಿದರು.
ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸರ್ಕಾರ ಅಸ್ತು
ಇನ್ನೂ ಬಿಜೆಪಿ-ಜೆಡಿಎಸ್ ನಾಯಕರು ಶಾಂತಿಯುತವಾಗಿ ಪಾದಯಾತ್ರೆಗೆ ನಡೆಸುವುದಾಗಿ ತಿಳಿಸಿದ್ದರಿಂದ ರಾಜ್ಯ ಸರ್ಕಾರ ಅನುಮತಿ ಕೊಡಲು ನಾವು ನಿರ್ಧರಿಸಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.
ಮಹಿಳೆ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ವಿರುದ್ಧ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಜಿ.ಪರಮೇಶ್ವರ್ ಅವರು, ತನಿಖಾಧಿಕಾರಿಗಳು ಎಲ್ಲ ಗಮನಿಸಿ ಚಾರ್ಜ್ಶೀಟ್ ಹಾಕಿದ್ದಾರೆ.
ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದಲ್ಲಿ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ನ್ಯಾಯಾಲಯ ತನ್ನ ತೀರ್ಪು ಕಾಯ್ದಿರಿಸಿದ್ದು, ಮುಂದೆ ನೋಡೋಣ ಎಂದು ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications