ಪರಿಷತ್ ನಾಮನಿರ್ದೇಶನಕ್ಕೆ ಗೌರ್ನರ್ ಗರಂ
ಬೆಂಗಳೂರು, ಜೂ. 17 : ವಿಧಾನಪರಿಷತ್ತಿನ ಐದು ಸ್ಥಾನಗಳಿಗೆ ಹೊಸ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಸರ್ಕಾರ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಟ್ಟಿಯನ್ನು ಮರು ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನಪರಿಷತ್ತಿನ ಐದು ಸ್ಥಾನಗಳಿಗೆ ಹೊಸ ಸದಸ್ಯರನ್ನು ಅಂತಿಮಗೊಳಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ರಾಜ್ಯಪಾಲರಿಗೆ ಪಟ್ಟಿಯನ್ನು ಸಲ್ಲಿಸಿದ್ದರು. ಆದರೆ, ರಾಜ್ಯಪಾಲರು ಪಟ್ಟಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಪಟ್ಟಿಯನ್ನು ಮರು ಪರಿಶೀಲಿಸಿ, ಇಲ್ಲವೇ ನಾಮ ನಿರ್ದೇಶಿತರ ಆಯ್ಕೆಗೆ ತೆಗೆದುಕೊಂಡ ಮಾನದಂಡಗಳ ಬಗ್ಗೆ ಹೆಚ್ಚಿನ ವಿವರಣೆಯನ್ನು ಕೇಳಿದ್ದಾರೆ.

ರಾಜ್ಯಪಾಲರ ಕೈ ಸೇರಿದ ಪಟ್ಟಿಯಲ್ಲಿ ವಿ.ಎಸ್.ಉಗ್ರಪ್ಪ, ಅಬ್ದುಲ್ ಜಬ್ಬಾರ್, ಇಕ್ಬಾಲ್ ಅಹಮ್ಮದ್ ಸರಡಗಿ, ಇಂಟೆಕ್ ಮುಖಂಡ ಶಾಂತಕುಮಾರ್ ಮತ್ತು ಚಿತ್ರನಟಿ ಡಾ.ಜಯಮಾಲಾ ಅವರ ಹೆಸರುಗಳಿದ್ದವು. ಇವುಗಳಲ್ಲಿ ಜಯಮಾಲಾ ಅವರ ಹೆಸರು ಹೊರತುಪಡಿಸಿ ಉಳಿದ ನಾಮನಿರ್ದೇಶಗಳ ಬಗ್ಗೆ ರಾಜ್ಯಪಾಲರು ಅಸಮಧಾನಗೊಂಡಿದ್ದಾರೆ. [ಮುಖ್ಯಮಂತ್ರಿಗಳು ಸಲ್ಲಿಸಿದ ಅಂತಿಮ ಪಟ್ಟಿ]
ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಮೇಲ್ಮನೆಗೆ ನಾಮನಿರ್ದೇಶನ ಮಾಡಲಾಗುತ್ತದೆ. ಆದರೆ, ಜಯಮಾಲಾ ಹೊರತು ಪಡಿಸಿ ಉಳಿದವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಅವರನ್ನು ಯಾವ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ ಎಂಬ ಕುರಿತು ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ.
ಒತ್ತಡವಿತ್ತು : ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಲಿಂಗಾಯತರಿಗೆ ಅವಕಾಶ ನೀಡಿಲ್ಲ. ಆದ್ದರಿಂದ ನಾಮಕರಣದಲ್ಲಿ ಅವಕಾಶ ನೀಡಬೇಕು ಎಂದು ಲಿಂಗಾಯತ ಮುಖಂಡರು ಮುಖ್ಯಮಂತ್ರಿ ಮೇಲೆ ಒತ್ತಡ ಹೇರುತ್ತಿದ್ದರು. ಹಲವು ಕಾಂಗ್ರೆಸ್ ಮುಖಂಡರು ತಮಗೆ ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಿದ್ದರು. ಈ ಬೆಳವಣಿಗೆಗಳ ನಡುವೆಯೇ ಸಿಎಂ ಸೋಮವಾರ ಸಂಜೆ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿದ್ದರು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications