ಸಿಎಎ ಬಗ್ಗೆ ಸೊಲ್ಲೆತ್ತದ ರಾಜ್ಯಪಾಲ, ಕಾಂಗ್ರೆಸ್ ಗೆ ನಿರಾಸೆ, ಬಿಜೆಪಿಗೆ ಅನುಮಾನ
ಬೆಂಗಳೂರು, ಫೆಬ್ರವರಿ 18: ನಿನ್ನೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ಭಾಷಣದ ವೇಳೆ ಪ್ರತಿಭಟನೆ ಮಾಡಲೆಂದು ಸಜ್ಜಾಗಿ ಬಂದಿದ್ದ ವಿಪಕ್ಷಗಳು ಪ್ರತಿಭಟನೆ ಸಂದರ್ಭವೇ ಬರದೆ ನಿರಾಶರಾಗಿದ್ದಾರೆ.
ಹೌದು, ರಾಜ್ಯಪಾಲ ವಜುಭಾಯಿ ವಾಲಾ ಅವರು ತಮ್ಮ ಭಾಷಣದಲ್ಲಿ ಸಿಎಎ-ಎನ್ಆರ್ಸಿ ಕುರಿತು ಉಲ್ಲೇಖ ಮಾಡುತ್ತಾರೆ, ಆಗ ಪ್ರತಿಭಟನೆ ಮಾಡಬೇಕು ಎಂದು ವಿಪಕ್ಷಗಳು ವಿಶೇಷವಾಗಿ ಕಾಂಗ್ರೆಸ್ ಶಾಸಕರು ತಯಾರಾಗಿದ್ದರು. ಆದರೆ ಹಾಗೆ ಆಗಲೇ ಇಲ್ಲ.
ಅಷ್ಟುದ್ದದ ಭಾಷಣ ಮಾಡಿದ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸಿಎಎ ಹಾಗೂ ಎನ್ಆರ್ಸಿ ಬಗ್ಗೆ ಸೊಲ್ಲೆತ್ತಲಿಲ್ಲ. ಪ್ರತಿಭಟನೆ ಮಾಡುವ ಹುಮ್ಮಸ್ಸಿನಲ್ಲಿದ್ದ ಕಾಂಗ್ರೆಸ್ ಶಾಸಕರಿಗೆ ಇದು ಭಾರಿ ನಿರಾಸೆ ತಂದಿದೆ.

ಪರಿಷತ್ ಸದಸ್ಯ ಐವಾಸ್ ಡಿಸೋಜಾ ಅವರು ಸದನದ ಒಳಕ್ಕೆ ಭಿತ್ತಿ ಪತ್ರಗಳನ್ನು ಸಹ ಕೊಂಡೊಯ್ದಿದ್ದರು. ಆದರೆ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸಿಎಎ-ಎನ್ಆರ್ಸಿ ಬಗ್ಗೆ ಉಲ್ಲೇಖವನ್ನೇ ಮಾಡಲಿಲ್ಲ.
ಆದರೆ ರಾಜ್ಯಪಾಲರ ಭಾಷಣದ ನಂತರ ಬಿಜೆಪಿಯವರಿಗೆ ಸಣ್ಣ ಅನುಮಾನವೂ ಉಂಟಾಗಿದೆ. ವಜುಭಾಯಿ ವಾಲಾ ಅವರು ಸಿಎಎ-ಎನ್ಆರ್ಸಿ ಜಾರಿ ಬಗ್ಗೆ ವಿರೋಧ ಹೊಂದಿದ್ದಾರೆಯೇ ಎಂಬ ಅನುಮಾನ ಬಿಜೆಪಿ ಶಾಸಕರಿಗೆ ಕಾಡಲಾರಂಭಿಸಿದೆ.
ಬಿಜೆಪಿಯ ಬಹುತೇಕ ರಾಜ್ಯಪಾಲರುಗಳು ಸಿಎಎ-ಎನ್ಆರ್ಸಿ ಬಗ್ಗೆ ಸಮಯ ಸಿಕ್ಕಾಗೆಲ್ಲಾ ಮಾತನಾಡುತ್ತಿದ್ದಾರೆ. ಅಂತಹುದರಲ್ಲಿ ತಮ್ಮ ಪಕ್ಷದ ಸರ್ಕಾರ ಅಧಿಕಾರದಲ್ಲಿರುವ ರಾಜ್ಯದ ಅಧಿವೇಶನದ ಸಮಯದಲ್ಲಿ ವಜುಭಾಯಿ ವಾಲಾ ಅವರು ಸಿಎಎ-ಎನ್ಆರ್ಸಿ ಬಗ್ಗೆ ಮಾತನಾಡದೇ ಇರುವುದು ಅನುಮಾನಕ್ಕೆ ಕಾರಣವಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications