ಹಿಂದಿನ ಕಾಲದ ಆಹಾರ ಪದ್ಧತಿ ರೂಢಿಸಿಕೊಳ್ಳಿ: ವಜುಭಾಯಿ ವಾಲಾ
ಬೆಂಗಳೂರು ಅಕ್ಟೋಬರ್, 21: ಇಂದಿನ ಪೀಳಿಗೆ ಹಿಂದಿನ ಕಾಲದ ಆಹಾರ ಪದ್ಧತಿಗಳನ್ನು ಕಡೆಗಣಿಸಿ ವಿದೇಶಿ ಆಹಾರ ಪದ್ಧತಿಗಳಿಗೆ ಮಾರುಹೋಗುತ್ತಿದೆ. ಇದರಿಂದ ಕ್ಷಯರೋಗದಂತಹ ಮಹಾಮಾರಿಗೆ ಜನರು ಬಲಿಯಾಗುತ್ತಿದ್ದಾರೆ. ಕ್ಷಯರೋಗ ನಿಯಂತ್ರಣಕ್ಕೆ ಸರ್ಕಾರದ ಜೊತೆ ನಾಗರಿಕರು ಸಹಕರಿಸಬೇಕು ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು.
ನಗರದ ರಾಜಭವದ ಸಭಾಂಗಣದಲ್ಲಿ ಅಕ್ಟೋಬರ್ 20ರ ಮಂಗಳವಾರ ಸಂಜೆ 6 ಗಂಟೆಗೆ ಕರ್ನಾಟಕ ರಾಜ್ಯ ಕ್ಷಯರೋಗ ನಿವಾರಣಾ ಸಂಸ್ಥೆ ಏರ್ಪಡಿಸಿದ್ದ 66ನೇ 'ಕ್ಷಯ ರೋಗ ಮುದ್ರೆಗಳ ಬಿಡುಗಡೆಯ ಅಂದೋಲನ' ಕಾರ್ಯಕ್ರಮವನ್ನು ರಾಜ್ಯಪಾಲ ವಜುಭಾಯಿ ವಾಲಾ ಉದ್ಘಾಟಿಸಿದರು.[ಭಲಾ, ರಾಜಭವನಕ್ಕೆ 4 ಕೋಟಿ ಖರ್ಚು ಮಾಡಿದ ವಾಲಾ!]

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಜುಭಾಯಿ ವಾಲಾ ಅವರು, 'ಹಿಂದಿನ ಕಾಲದ ಜನರು ಉತ್ತಮ ಆಹಾರ ಪದ್ದತಿ ರೂಡಿಸಿಕೊಂಡಿದ್ದರು. ಆದ್ದರಿಂದ ಅವರ ಬದುಕು, ದೇಹ ಆರೋಗ್ಯಯುತವಾಗಿತ್ತು. ಇಂದಿನ ಪೀಳಿಗೆ ಹಿಂದಿನ ಆಹಾರಪದ್ಧತಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಇದರಿಂದ ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಹಾಗಾಗಿ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವ ಅಗತ್ಯತೆ ಇದೆ' ಎಂದು ಕಿವಿಮಾತು ಹೇಳಿದರು.
ಅಲ್ಲದೇ ಕೇವಲ ಸರ್ಕಾರ ಮಾತ್ರವೇ ಕ್ಷಯರೋಗ ನಿಯಂತ್ರಣ ಮಾಡುವುದು ಅಸಾಧ್ಯ. ಸಮಾಜದ ಪ್ರತಿಯೊಬ್ಬರು ಇದರಲ್ಲಿ ಪಾಲ್ಗೊಂಡು ರೋಗವನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡುವಲ್ಲಿ ಸಹಕರಿಸಬೇಕು. ಆಗ ಮಾತ್ರ 'ಮುಕ್ತ ಕ್ಷಯರೋಗ ರಾಜ್ಯ' ನಿರ್ಮಾಣ ಮಾಡಲು ಸಾಧ್ಯ ಎಂದು ಘನತೆವೆತ್ತ ರಾಜ್ಯಪಾಲ ವಜುಭಾಯಿ ವಾಲ ಅವರು ಕರೆ ನೀಡಿದರು.[ರಾಷ್ಟ್ರಗೀತೆ ವೇಳೆ ವೇದಿಕೆ ಬಿಟ್ಟಿಳಿದ ರಾಜ್ಯಪಾಲರು]
ಪ್ರತಿ ರೋಗಿಗೆ ಮನೆ ಸಮೀಪವೇ ಪೂರ್ಣಾವಧಿ ಔಷಧಿ ದೊರೆಯುವ ಸಲುವಾಗಿ ನೇರ ನಿಗಾವಣೆ ಅಲ್ಪಾವಧಿ ಚಿಕಿತ್ಸೆ (ಡಾಟ್ಸ್) ವಿಧಾನವನ್ನು ಅಳವಡಿಸಿ ಸುಮಾರು 40,400 ಡಾಟ್ಸ್ ಕೇಂದ್ರಗಳನ್ನು ತೆರೆಯಲಾಗಿದೆ. ಕ್ಷಯ ರೋಗದ ಔಷಧಿಗಳನ್ನು ಎಲ್ಲಾ ಆರೋಗ್ಯ ಕೇಂದ್ರಗಳಲ್ಲೂ ದೊರೆಯುವ ವ್ಯವಸ್ಥೆ ಮಾಡಲಾಗಿದೆ.
ಒಟ್ಟಿನಲ್ಲಿ ಕ್ಷಯರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾಧರ್ ಹೇಳಿದರು.[ಬೆಂಗಳೂರಿನಲ್ಲಿ ಲಸಿಕೆಯಿಲ್ಲದ ಮಾರಣಾಂತಿಕ ಕ್ಷಯ?]
ಕರ್ನಾಟಕ ರಾಜ್ಯ ಕ್ಷಯರೋಗ ನಿವಾರಣಾ ಸಂಸ್ಥೆ ರಾಜ್ಯ ಕ್ಷಯರೋಗ ನಿಯಂತ್ರಣಾ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಪ್ರತಿಯೊಂದು ಜಿಲ್ಲೆಗಳು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ, ರಾಜ್ಯ ಕ್ಷಯರೋಗ ಸಂಸ್ಥೆಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications