72ನೇ ಗಣರಾಜ್ಯೋತ್ಸವ: ರಾಜ್ಯಪಾಲ ವಿಆರ್ ವಾಲಾರ ಮಾತುಗಳು
ಬೆಂಗಳೂರು,ಜನವರಿ 26: 72ನೇ ಗಣರಾಜ್ಯೋತ್ಸವವನ್ನು ಇಂದು ದೇಶಾದ್ಯಂತ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯಪಾಲ ವಿಆರ್ ವಾಲಾ ಕೂಡ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಕೊರೊನಾ ಅಲೆ ತಗ್ಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಅದಕ್ಕೆ ಜನರ ಸಹಕಾರವೇ ಪ್ರಮುಖ ಕಾರಣವಾಗಿದೆ ಎಂದರು.
ಕೊರೊನಾ ಬಿಕ್ಕಟ್ಟಿನ ಅವಕಾಶವನ್ನು ತಮ್ಮ ಸಾಮರ್ಥ್ಯ ವೃದ್ಧಿಸಲು ಮತ್ತು ಆರೋಗ್ಯ ಮೂಲಸೌಕರ್ಯ ಹಾಗೂ ಪಿಪಿಇ ಕಿಟ್ , ವೆಂಟಿಲೇಟರ್ ಉತ್ಪಾದನೆ ಹೆಚ್ಚಿಸಲು ಬಳಸಿಕೊಂಡಿದ್ದೇವೆ. ಇದು ಪ್ರಧಾನಿ ಮೋದಿ ಅವರ ದೂರದರ್ಶಿತ್ವ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ದಿಸೆಯಲ್ಲಿ ಉತ್ತಮ ಹೆಜ್ಜೆಯಾಗಿದೆ ಎಂದು ಹೇಳಿದರು.

ಕೊರೊನಾ ಕೊನೆಯ ಹಂತಕ್ಕೆ ತಲುಪಿದ್ದೇವೆ, ಆದರೆ ನಿರ್ಲಕ್ಷ್ಯ ಮಾಡಬೇಡಿ, ದೈಹಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿರಲಿದೆ.
ಈ ಬಾರಿ ಮಹಿಳಾ ಕೇಂದ್ರಿತ ಬಜೆಟ್ಗೆ ಆದ್ಯತೆ ನೀಡಲಾಗುವುದು, ಅಂಗನವಾಡಿಗಳು, ಸಂತಾನೋತ್ಪತ್ತಿ ಮತ್ತು ಮಹಿಳಾ ಆರೋಗ್ಯ ಕಾರ್ಯಕರ್ತರ ಮೂಲಕ ಗರ್ಭಿಣಿಯರಿಗೆ ಸೇವೆ ನೀಡಲು ಪ್ರಯತ್ನ ಮಾಡಲಾಗುತ್ತಿದೆ.
72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ
ಬೆಂಗಳೂರಿನಲ್ಲಿ 8015 ಕೋಟಿ ಅನುಮೋದಿತ ಮೊತ್ತದಲ್ಲಿ ಕೆರೆಗಳ ಸಂರಕ್ಷಣೆ ಮಾಡಿದ್ದೇವೆ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ರೂಪವನ್ನೇ ಬದಲಾಯಿಸಲಾಗುತ್ತಿದೆ ಎಂದು ಹೇಳಿದರು.
ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಈ ಗಣರಾಜ್ಯೋತ್ಸವವನ್ನು ಅರ್ಪಿಸುತ್ತೇನೆ, ಇದೊಂದು ಶತ್ರುವಿನ ವಿರುದ್ಧ ಪಡೆದ ಜಯವಾಗಿದೆ. 2020ರಲ್ಲಿ ಹಿಂದೆಂದೂ ಕಂಡರಿಯದ ಕೊರೊನಾ ಸವಾಲನ್ನು ಜಗತ್ತು ಎದುರಿಸುತ್ತಿರುವಾಗ, ನಾವು ನವ ಚೈತನ್ಯ ಮತ್ತು ಆಶೋತ್ತರದೊಂದಿಗೆ ಹೊಸ ವರ್ಷ 2021ಕ್ಕೆ ಹೆಜ್ಜೆ ಇರಸಿದ್ದೇವೆ ಎಂದು ವಿಆರ್ ವಾಲಾ ಹೇಳಿದರು.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications