72ನೇ ಗಣರಾಜ್ಯೋತ್ಸವ: ರಾಜ್ಯಪಾಲ ವಿಆರ್ ವಾಲಾರ ಮಾತುಗಳು
ಬೆಂಗಳೂರು,ಜನವರಿ 26: 72ನೇ ಗಣರಾಜ್ಯೋತ್ಸವವನ್ನು ಇಂದು ದೇಶಾದ್ಯಂತ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯಪಾಲ ವಿಆರ್ ವಾಲಾ ಕೂಡ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಕೊರೊನಾ ಅಲೆ ತಗ್ಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಅದಕ್ಕೆ ಜನರ ಸಹಕಾರವೇ ಪ್ರಮುಖ ಕಾರಣವಾಗಿದೆ ಎಂದರು.
ಕೊರೊನಾ ಬಿಕ್ಕಟ್ಟಿನ ಅವಕಾಶವನ್ನು ತಮ್ಮ ಸಾಮರ್ಥ್ಯ ವೃದ್ಧಿಸಲು ಮತ್ತು ಆರೋಗ್ಯ ಮೂಲಸೌಕರ್ಯ ಹಾಗೂ ಪಿಪಿಇ ಕಿಟ್ , ವೆಂಟಿಲೇಟರ್ ಉತ್ಪಾದನೆ ಹೆಚ್ಚಿಸಲು ಬಳಸಿಕೊಂಡಿದ್ದೇವೆ. ಇದು ಪ್ರಧಾನಿ ಮೋದಿ ಅವರ ದೂರದರ್ಶಿತ್ವ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ದಿಸೆಯಲ್ಲಿ ಉತ್ತಮ ಹೆಜ್ಜೆಯಾಗಿದೆ ಎಂದು ಹೇಳಿದರು.

ಕೊರೊನಾ ಕೊನೆಯ ಹಂತಕ್ಕೆ ತಲುಪಿದ್ದೇವೆ, ಆದರೆ ನಿರ್ಲಕ್ಷ್ಯ ಮಾಡಬೇಡಿ, ದೈಹಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿರಲಿದೆ.
ಈ ಬಾರಿ ಮಹಿಳಾ ಕೇಂದ್ರಿತ ಬಜೆಟ್ಗೆ ಆದ್ಯತೆ ನೀಡಲಾಗುವುದು, ಅಂಗನವಾಡಿಗಳು, ಸಂತಾನೋತ್ಪತ್ತಿ ಮತ್ತು ಮಹಿಳಾ ಆರೋಗ್ಯ ಕಾರ್ಯಕರ್ತರ ಮೂಲಕ ಗರ್ಭಿಣಿಯರಿಗೆ ಸೇವೆ ನೀಡಲು ಪ್ರಯತ್ನ ಮಾಡಲಾಗುತ್ತಿದೆ.
72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ
ಬೆಂಗಳೂರಿನಲ್ಲಿ 8015 ಕೋಟಿ ಅನುಮೋದಿತ ಮೊತ್ತದಲ್ಲಿ ಕೆರೆಗಳ ಸಂರಕ್ಷಣೆ ಮಾಡಿದ್ದೇವೆ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ರೂಪವನ್ನೇ ಬದಲಾಯಿಸಲಾಗುತ್ತಿದೆ ಎಂದು ಹೇಳಿದರು.
ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಈ ಗಣರಾಜ್ಯೋತ್ಸವವನ್ನು ಅರ್ಪಿಸುತ್ತೇನೆ, ಇದೊಂದು ಶತ್ರುವಿನ ವಿರುದ್ಧ ಪಡೆದ ಜಯವಾಗಿದೆ. 2020ರಲ್ಲಿ ಹಿಂದೆಂದೂ ಕಂಡರಿಯದ ಕೊರೊನಾ ಸವಾಲನ್ನು ಜಗತ್ತು ಎದುರಿಸುತ್ತಿರುವಾಗ, ನಾವು ನವ ಚೈತನ್ಯ ಮತ್ತು ಆಶೋತ್ತರದೊಂದಿಗೆ ಹೊಸ ವರ್ಷ 2021ಕ್ಕೆ ಹೆಜ್ಜೆ ಇರಸಿದ್ದೇವೆ ಎಂದು ವಿಆರ್ ವಾಲಾ ಹೇಳಿದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ












Click it and Unblock the Notifications