ಲೋಕೋಪಯೋಗಿ ಇಲಾಖೆ ಕಾಮಗಾರಿ ಬೇಗ ಮುಗಿಸಿ: ಕಾರಜೋಳ ಎಚ್ಚರಿಕೆ
ಬೆಂಗಳೂರು,ಫೆಬ್ರವರಿ 15: ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಮಾರ್ಚ್ ಅಂತ್ಯದೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದರು.
ಯಾವುದೇ ಅನುದಾನ ಲ್ಯಾಪ್ಸ್ ಆಗಬಾರದು. ನ್ಯೂನತೆಗಳಾದರೆ ಸಂಬಂಧಿಸಿದ ಅಧಿಕಾರಿಗಳನ್ನು ಜವಾಬ್ದಾರನ್ನಾಗಿ ಮಾಡಲಾಗುತ್ತದೆ.
ವಿಕಾಸಸೌಧದಲ್ಲಿಂದು ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜನವರಿ ಅಂತ್ಯಕ್ಕೆ 6594 ಕೋಟಿ ರೂ.ಬಿಡುಗಡೆ ಮಾಡಿದ್ದು, ಅದರಲ್ಲಿ 4675. ಕೋಟಿ. ರೂ ವೆಚ್ಚ ಮಾಡಲಾಗಿದೆ.

ಪ್ರಗತಿಯು ಡಿಎಸ್ ಎಸ್ ತಂತ್ರಾಂಶಗಳನ್ವಯ ಕೆಡಿಪಿ ಸಭೆಯ ಆರ್ಥಿಕ ಪ್ರಗತಿಯ ವಿಷಯ ಸೂಚಿಯಲ್ಲಿ ಎ (ಶೇ.,93%) ಪ್ರವರ್ಗದಲ್ಲಿದೆ.ರಾಷ್ಟ್ರೀಯ ಹೆದ್ದಾರಿ ಯೋಜನೆ ಘಟಕಕ್ಕೆ 341ಕೋಟಿ ಬಿಡುಗಡೆ ಮಾಡಿದ್ದು, 317 ಕೋಟಿ ವೆಚ್ಚ ಮಾಡಲಾಗಿದೆ.ಕೆಆರ್ ಡಿಸಿಎಲ್ ಗೆ 300 ಕೋ ಬಿಡುಗಡೆ ಮಾಡಲಾಗಿದ್ದು, ಶೇ.100 ರಷ್ಟು ವೆಚ್ಚ ಮಾಡಲಾಗಿದೆ.
ರಾಜ್ಯ ಹೆದ್ದಾರಿ ಘಟಕದಲ್ಲಿ 333 ಕೋಟಿ ರೂ ಬಿಡುಗಡೆಯಾಗಿದ್ದು, 333 ಕೋಟಿ ವೆಚ್ಚಮಾಡಲಾಗಿದೆ. ಎಸ್ ಸಿಪಿ ಮತ್ತು ಟಿಎಸ್ ಪಿ ಯೋಜನೆ , ವಿಶೇಷ ಅಭಿವೃದ್ದಿ ಯೋಜನೆಯಡಿ ಯಾವುದೇ ಅನುದಾನ ಉಳಿಕೆಯಾದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು. ಮುಖ್ಯ ಎಂಜಿನಿಯರಿಂಗ್ ಗಳು ಕಾರ್ಯನಿರ್ವಾಹಕ ಅಭಿಯಂತರರೊಂದಿಗೆ ನಿಯಮಿತವಾಗಿ ಸಭೆ ನಡೆಸಿ, ಸಮಗ್ರವಾಗಿ ಚರ್ಚಿಸಬೇಕು.

ಮುಖ್ಯ ಎಂಜಿನಿಯರ್ ಗಳು ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿ ಪ್ರಗತಿ ಪರಿಶೀಲನೆ ನಡೆಸಬೇಕು. ಯಾವುದೇ ಲೋಪವಾದರೆ ಕಾರ್ಯನಿರ್ವಹಣೆ ವರದಿಯಲ್ಲಿ ನಮೂದಿಸಲಾಗುವುದು ಎಂದು ಸೂಚಿಸಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಬಿ. ಗುರುಪ್ರಸಾದ್, ಮುಖ್ಯ ಇಂಜಿನಿಯರ್ ಗಳು, ಅಧೀಕ್ಷಕ ಎಂಜಿನಿಯರ್ ಗಳು ಹಾಜರಿದ್ದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications