ಸರ್ಕಾರಿ ಸಿಬ್ಬಂದಿ ಕಾವಲಿಗೆ ಬರಲಿದೆ ಜಿಪಿಎಸ್
ಬೆಂಗಳೂರು, ಮಾರ್ಚ್ 24: ಸರ್ಕಾರಿ ನೌಕರರ ಕೆಲಸದ ಮೇಲೆ ನಿಗಾ ಇಡಲು ಜಿಪಿಎಸ್ ಟ್ರ್ಯಾಕಿಂಗ್ ಪದ್ಧತಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಚೇರಿ ಸಮಯದಲ್ಲಿ ಕೆಲಸ ಮಾಡದೆ ಕಳ್ಳಾಟ ಆಡುವ ಸರ್ಕಾರಿ ನೌಕರರಿಗೆ ಕಡಿವಾಣ ಬೀಳಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ತಂತ್ರಜ್ಞಾನದ ಮೂಲಕ ಕೆಲಸದಲ್ಲಿ ಪಾರದರ್ಶಕತೆ ತರುವ ಜತೆಯಲ್ಲೇ ಆಡಳಿತಕ್ಕೆ ಚುರುಕು ಮುಟ್ಟಿಸುವುದು ಸರ್ಕಾರದ ಉದ್ದೇಶವಾಗಿದೆ. ಕಿಯೋನಿಕ್ಸ್ ಗೆ ಹೊಣೆ: ಐಟಿಬಿಟಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ಟ್ರ್ಯಾಂಕಿಂಗ್ ಸಿಸ್ಟಂ ಅನುಷ್ಠಾನದ ಹೊಣೆ ಹೊತ್ತಿದೆ.
ಏಪ್ರಿಲ್ನಲ್ಲಿ ಯೋಜನೆ ಶುರುವಾಗಲಿದೆ. ನೌಕರರ ಮೊಬೈಲ್ ಮೂಲಕವೇ ಪ್ರತಿಯೊಂದು ಚಲನವಲನದ ಸಂದೇಶ ರವಾನೆಯಾಗಲಿದ್ದು, ಪ್ರಾಯೋಗಿಕವಾಗಿ ಕೆಲವು ಉದ್ಯೋಗಿಗಳು ಟ್ರ್ಯಾಂಕಿಗ್ ಸಿಸ್ಟಂಗೆ ಒಳಪಡಲಿದ್ದಾರೆ.

ಹಂತಹಂತವಾಗಿ ಎಲ್ಲ ಉದ್ಯೋಗಿಗಳು ಇದರ ವ್ಯಾಪ್ತಿಗೆ ಒಳಪಡಲಿದ್ದಾರೆ. ಮೊಬೈಲ್ ಅಪ್ಲಿಕೇಷನ್ ಮೂಲಕ ಇದರ ನಿರ್ವಹಣೆ ಮಾಡುವುದರಿಂದ ಖರ್ಚು ಕಡಿಮೆ ಆಗಿರಲಿದೆ. ಇಂಟರ್ನೆಟ್ ಸಂಪರ್ಕವಿಲ್ಲದೆಯೂ ಟ್ರ್ಯಾಕಿಂಗ್ ಸಿಸ್ಟಂ ಕಾರ್ಯನಿರ್ವಹಿಸುವುದು ವಿಶೇಷವಾಗಿದೆ.
ಜಿಪಿಎಸ್ ಸಿಸ್ಟಂ ಉದ್ಯೋಗಿಗಳಿಗೂ ಉಪಯೋಗಕಾರಿ. ಗುರುತಿನ ಚೀಟಿಯಲ್ಲಿ ಇರುವ ಎಸ್ಒಎಸ್ ಬಟನ್ ಅನ್ನು ತುರ್ತು ಸಂದರ್ಭದಲ್ಲಿ ಒತ್ತದರೆ ನಿಯಂತ್ರಣಾಧಿಕಾರಿಗೆ ಸಂದೇಶ ರವಾನೆಯಾಗಲಿದೆ. ಇದರಿಂದ ಅಪ್ಲಿಕೇಷನ್ ಮೂಲಕವೇ ಸಂಕಷ್ಟ ಸಿಲುಕಿದ ವ್ಯಕ್ತಿಗೆ ಕರೆ ಮಾಡಿ, ಸ್ಥಳದಲ್ಲಿನ ವಸ್ತುಸ್ಥಿತಿ ಗ್ರಹಿಸಬಹುದಾಗಿದೆ.
ಐಡಿ ಕಾರ್ಡ್ನಲ್ಲಿ ಚಿಪ್: ಕಿಯೋನಿಕ್ಸ್ ಟ್ರ್ಯಾಕಿಂಗ್ ಸಿಸ್ಟಂ ಅಭಿವೃದ್ಧಿಪಡಿಸಲು ಆಡ್ ಟೆಕ್ನಾಲಜೀಸ್ ಇಂಡಿಯಾ ಲಿ.ಗೆ ಟೆಂಡರ್ ನೀಡಿದೆ. ಉದ್ಯೋಗಿಗಳ ಗುರುತಿನ ಚೀಟಿಗೆ ಜಿಪಿಎಸ್ ಚಿಪ್ ಅಳವಡಿಕೆ ಮಾಡಲಾಗುತ್ತದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications