ಸರ್ಕಾರಿ ಸಿಬ್ಬಂದಿ ಕಾವಲಿಗೆ ಬರಲಿದೆ ಜಿಪಿಎಸ್
ಬೆಂಗಳೂರು, ಮಾರ್ಚ್ 24: ಸರ್ಕಾರಿ ನೌಕರರ ಕೆಲಸದ ಮೇಲೆ ನಿಗಾ ಇಡಲು ಜಿಪಿಎಸ್ ಟ್ರ್ಯಾಕಿಂಗ್ ಪದ್ಧತಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಚೇರಿ ಸಮಯದಲ್ಲಿ ಕೆಲಸ ಮಾಡದೆ ಕಳ್ಳಾಟ ಆಡುವ ಸರ್ಕಾರಿ ನೌಕರರಿಗೆ ಕಡಿವಾಣ ಬೀಳಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ತಂತ್ರಜ್ಞಾನದ ಮೂಲಕ ಕೆಲಸದಲ್ಲಿ ಪಾರದರ್ಶಕತೆ ತರುವ ಜತೆಯಲ್ಲೇ ಆಡಳಿತಕ್ಕೆ ಚುರುಕು ಮುಟ್ಟಿಸುವುದು ಸರ್ಕಾರದ ಉದ್ದೇಶವಾಗಿದೆ. ಕಿಯೋನಿಕ್ಸ್ ಗೆ ಹೊಣೆ: ಐಟಿಬಿಟಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ಟ್ರ್ಯಾಂಕಿಂಗ್ ಸಿಸ್ಟಂ ಅನುಷ್ಠಾನದ ಹೊಣೆ ಹೊತ್ತಿದೆ.
ಏಪ್ರಿಲ್ನಲ್ಲಿ ಯೋಜನೆ ಶುರುವಾಗಲಿದೆ. ನೌಕರರ ಮೊಬೈಲ್ ಮೂಲಕವೇ ಪ್ರತಿಯೊಂದು ಚಲನವಲನದ ಸಂದೇಶ ರವಾನೆಯಾಗಲಿದ್ದು, ಪ್ರಾಯೋಗಿಕವಾಗಿ ಕೆಲವು ಉದ್ಯೋಗಿಗಳು ಟ್ರ್ಯಾಂಕಿಗ್ ಸಿಸ್ಟಂಗೆ ಒಳಪಡಲಿದ್ದಾರೆ.

ಹಂತಹಂತವಾಗಿ ಎಲ್ಲ ಉದ್ಯೋಗಿಗಳು ಇದರ ವ್ಯಾಪ್ತಿಗೆ ಒಳಪಡಲಿದ್ದಾರೆ. ಮೊಬೈಲ್ ಅಪ್ಲಿಕೇಷನ್ ಮೂಲಕ ಇದರ ನಿರ್ವಹಣೆ ಮಾಡುವುದರಿಂದ ಖರ್ಚು ಕಡಿಮೆ ಆಗಿರಲಿದೆ. ಇಂಟರ್ನೆಟ್ ಸಂಪರ್ಕವಿಲ್ಲದೆಯೂ ಟ್ರ್ಯಾಕಿಂಗ್ ಸಿಸ್ಟಂ ಕಾರ್ಯನಿರ್ವಹಿಸುವುದು ವಿಶೇಷವಾಗಿದೆ.
ಜಿಪಿಎಸ್ ಸಿಸ್ಟಂ ಉದ್ಯೋಗಿಗಳಿಗೂ ಉಪಯೋಗಕಾರಿ. ಗುರುತಿನ ಚೀಟಿಯಲ್ಲಿ ಇರುವ ಎಸ್ಒಎಸ್ ಬಟನ್ ಅನ್ನು ತುರ್ತು ಸಂದರ್ಭದಲ್ಲಿ ಒತ್ತದರೆ ನಿಯಂತ್ರಣಾಧಿಕಾರಿಗೆ ಸಂದೇಶ ರವಾನೆಯಾಗಲಿದೆ. ಇದರಿಂದ ಅಪ್ಲಿಕೇಷನ್ ಮೂಲಕವೇ ಸಂಕಷ್ಟ ಸಿಲುಕಿದ ವ್ಯಕ್ತಿಗೆ ಕರೆ ಮಾಡಿ, ಸ್ಥಳದಲ್ಲಿನ ವಸ್ತುಸ್ಥಿತಿ ಗ್ರಹಿಸಬಹುದಾಗಿದೆ.
ಐಡಿ ಕಾರ್ಡ್ನಲ್ಲಿ ಚಿಪ್: ಕಿಯೋನಿಕ್ಸ್ ಟ್ರ್ಯಾಕಿಂಗ್ ಸಿಸ್ಟಂ ಅಭಿವೃದ್ಧಿಪಡಿಸಲು ಆಡ್ ಟೆಕ್ನಾಲಜೀಸ್ ಇಂಡಿಯಾ ಲಿ.ಗೆ ಟೆಂಡರ್ ನೀಡಿದೆ. ಉದ್ಯೋಗಿಗಳ ಗುರುತಿನ ಚೀಟಿಗೆ ಜಿಪಿಎಸ್ ಚಿಪ್ ಅಳವಡಿಕೆ ಮಾಡಲಾಗುತ್ತದೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications