ಪರಿಶಿಷ್ಟ ಪಿಯು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ
ಬೆಂಗಳೂರು, ಜನವರಿ 12: ಪರಿಶಿಷ್ಟ ಜಾತಿ ಮತ್ತು ಪಂಗಡದ ಪದವಿಪೂರ್ವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಕೊಡಲು ನಿರ್ಧರಿಸಲಾಗಿದ್ದು, ಬಡ ವಿದ್ಯಾರ್ಥಿಗಳಿಗೂ ಮುಂದಿನ ವರ್ಷದಿಂದ ಉಚಿತ ಲ್ಯಾಪ್ ಟಾಪನ್ನು ನೀಡಲು ಚಿಂತಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ತಿಳಿಸಿದರು.
ಆಧುನಿಕ ಯುಗದಲ್ಲಿ ಅಂತರ್ಜಾಲ ಬಳಕೆ ಹಾಗೂ ಕಂಪ್ಯೂಟರ್ ಬಳಕೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಹಾಗಾಗಿ ಈ ವರ್ಷದಿಂದಲೇ ಮೊದಲ ವರ್ಷದ ಪದವಿಪೂರ್ವ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲಾಗುವುದು. ಜಾತಿಭೇದವಿಲ್ಲದೆ 3 ಲಕ್ಷಕ್ಕಿಂತ ಕಡಿಮೆ ಆದಾಯವಿರುವ ಕುಟುಂಬದ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ನೀಡುವ ಚಿಂತನೆ ಇದೆ. ಇದನ್ನು ಮುಂದಿನ ವರ್ಷದಿಂದ ಜಾರಿಗೆ ತರಲಾಗುವುದು ಎಂದು ತಿಳಿಸಿದರು.[ಪರಿಶಿಷ್ಟ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಭಾಗ್ಯ]

ರಾಜ್ಯದಲ್ಲಿರುವ 412 ಸರ್ಕಾರಿ ಪದವಿ ಕಾಲೇಜುಗಳ ಪೈಕಿ 90 ಕಾಲೇಜುಗಳಲ್ಲಿ ಉಚಿತ ವೈ-ಫೈ ಸೌಲಭ್ಯ ಒದಗಿಸಲಾಗಿದೆ. ಮುಂದಿನ ವರ್ಷದಿಂದ ಎಲ್ಲ ಕಾಲೇಜುಗಳಿಗೂ ಉಚಿತ ವೈ-ಫೈ ಸೌಲಭ್ಯ ನೀಡಲಾಗುವುದು ಎಂದರು. ಉನ್ನತ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದ್ದು, ಎಲ್ಲ ವಿಶ್ವವಿದ್ಯಾಲಯಗಳಿಗೂ ಅನ್ವಯವಾಗುವಂತೆ ಏಕರೂಪ ಕಾಯ್ದೆಯನ್ನು ಜಾರಿಗೆ ತರುವ ಸಿದ್ಧತೆ ನಡೆದಿದೆ. ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಹೊಸ ಕಾಯ್ದೆ ಮಂಡನೆಯಾಗಲಿದೆ ಎಂದರು.
ವ್ಯಾಸಂಗದ ಜೊತೆ ಕೌಶಲಾಭಿವೃದ್ಧಿಗಾಗಿ ಪ್ರತ್ಯೇಕ ಕೌಶಲ್ಯ ವಿವಿ ಮಾಡುವ ಚಿಂತನೆಯಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಉನ್ನತ ಶಿಕ್ಷಣಕ್ಕೆ ಒತ್ತು ನೀಡಲು ಮುಖ್ಯಮಂತ್ರಿಗಳು ಗಮನ ಹರಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಪ್ರಥಮವಾಗಿ ಮಹಾರಾಣಿ ಕಾಲೇಜನ್ನು ಕ್ಲಸ್ಟರ್ ವಿವಿಯಾಗಿ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಸವಲತ್ತುಗಳನ್ನು ಒದಗಿಸಲಾಗುವುದು ಎಂದರು.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications