ಖಾಸಗಿ ಲ್ಯಾಬ್ಗಳಲ್ಲಿ ಕೊವಿಡ್ ಪರೀಕ್ಷೆಗೆ ಶುಲ್ಕ ಘೋಷಿಸಿದ ಸರ್ಕಾರ
ಬೆಂಗಳೂರು, ಏಪ್ರಿಲ್ 17: ಖಾಸಗಿ ಲ್ಯಾಬ್ಗಳಲ್ಲಿ ಕೊರೊನಾ ಪರೀಕ್ಷೆಗೆ ನಿಗದಿತ ಶುಲ್ಕವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಖಾಸಗಿ ಲ್ಯಾಬ್ಗಳಲ್ಲಿ ಒಬ್ಬ ವ್ಯಕ್ತಿಗೆ ಕೊವಿಡ್ ಪರೀಕ್ಷೆ ಮಾಡಿಸಲು 2,250 ರೂಪಾಯಿ ನೀಡಬೇಕು ಎಂದು ಸರ್ಕಾರ ಸೂಚಿಸಿದೆ.
ಖಾಸಗಿ ಲ್ಯಾಬ್ಗಳ ಜೊತೆ ಕೊವಿಡ್ ಪರೀಕ್ಷೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ, ಎಲ್ಲ ರೀತಿಯಲ್ಲೂ ಆಲೋಚಿಸಿ ಶುಲ್ಕವನ್ನು 2,250 ರೂಪಾಯಿಗೆ ನಿಗದಿ ಪಡಿಸಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ.

ಐಸಿಎಂಆರ್ ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಲ್ಯಾಬ್ಗಳು ಕಾರ್ಯನಿರ್ವಹಿಸಬೇಕಿದೆ. ಸಮಯಕ್ಕೆ ತಕ್ಕಂತೆ ಕೊವಿಡ್ ಪರೀಕ್ಷೆಯ ಫಲಿತಾಂಶವನ್ನು ರಾಜ್ಯಸರ್ಕಾರಕ್ಕೆ ಮತ್ತು ಐಸಿಎಂಆರ್ಗೆ ತಿಳಿಸಬೇಕು. ಈ ಮಾಹಿತಿಯನ್ನು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
The Govt of Karnataka has fixed Rs 2,250 as charges for #COVID19 testing in private labs.
— B.H.Anil Kumar,IAS (@BBMPCOMM) April 17, 2020
ರಾಜ್ಯ ಸರ್ಕಾರವು ಖಾಸಗಿ ಆರೋಗ್ಯ ಪರೀಕ್ಷಾ ಲ್ಯಾಬ್ ಗಳಲ್ಲಿ #ಕೋವಿಡ್19 ಪರೀಕ್ಷೆಗೆ 2.250 ರೂ ನಿಗದಿ ಮಾಡಿ ಆದೇಶಿಸಿದೆ.#BBMPFightsCovid19 #BreakTheChain #StayHomeStaySafe #ಮನೆಯಲ್ಲೇಇರಿ #CoronaFighters pic.twitter.com/WNw8XlraxY
ಖಾಸಗಿ ಲ್ಯಾಬ್ಗಳಿಗೆ ರಾಜ್ಯ ಸರ್ಕಾರವೂ ಯಾವುದೇ ರೀತಿ ಟೆಸ್ಟಿಂಗ್ ಕಿಟ್ಗಳನ್ನು ನೀಡುವುದಿಲ್ಲ ಎಂಬುದು ಕೂಡ ಈ ಒಪ್ಪಂದಲ್ಲಿದೆ.
ಅಂದ್ಹಾಗೆ, ಕರ್ನಾಟಕದಲ್ಲಿ ಒಟ್ಟು 16 ಕೊವಿಡ್ ಪರೀಕ್ಷೆ ಲ್ಯಾಬ್ಗಳಿವೆ. ಅದರಲ್ಲಿ 11 ಲ್ಯಾಬ್ಗಳು ಸರ್ಕಾರದ್ದು ಮತ್ತು 5 ಲ್ಯಾಬ್ಗಳು ಖಾಸಗಿಯದ್ದು. ಈ ಎಲ್ಲ ಲ್ಯಾಬ್ಗಳು ಐಸಿಎಂಆರ್ ಅಡಿಯಲ್ಲಿ ಕಾರ್ಯನಿರ್ವಹಿಸಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications