ತೇಜಸ್ ಲಘು ಯುದ್ಧ ವಿಮಾನಗಳ ಖರೀದಿಗೆ ಎಚ್ಎಎಲ್ ಜತೆ ಕೇಂದ್ರ ಒಪ್ಪಂದ
ಬೆಂಗಳೂರು,ಫೆಬ್ರವರಿ 03: ಒಟ್ಟು 83 ತೇಜಸ್ ಲಘು ಯುದ್ಧ ವಿಮಾನಗಳ ಖರೀದಿಗೆ ಎಚ್ಎಎಲ್ ಜತೆ ಕೇಂದ್ರ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ಕೇಂದ್ರ ಸರ್ಕಾರ-ಹೆಚ್ಎಲ್ಎಲ್ 83 ತೇಜಸ್ ಲಘು ಯುದ್ಧ ವಿಮಾನಗಳ ಖರೀದಿಯ ಒಪ್ಪಂದಕ್ಕೆ ಫೆ.03 ರಂದು ಸಹಿ ಹಾಕಿವೆ.
48,000 ಕೋಟಿ ರೂಪಾಯಿಗಳ ಯೋಜನೆ ಇದಾಗಿದ್ದು, ಏರೋ ಇಂಡಿಯಾ ಶೋ-2021 ರ ಮೊದಲ ದಿನ ಈ ಒಪ್ಪಂದ ನಡೆದಿದೆ.ಎಚ್ಎ ಎಲ್ ನಿರ್ಮಿತ ತೇಜಸ್ ಯುದ್ಧವಿಮಾನ ಏಕ ಇಂಜಿನ್ ಬಹು ಉಪಯೋಗಿ, ಸೂಪರ್ ಸೋನಿಕ್ ಫೈಟರ್ ವಿಮಾನವಾಗಿದ್ದು, ಪ್ರತಿಕೂಲ ವಾತಾವರಣದಲ್ಲೂ ಕಾರ್ಯಾಚರಣೆ ನಡೆಸುವ ಸಾಮರ್ಥ್ಯವನ್ನು ಹೊಂದಿದೆ.
ರಕ್ಷಣಾ ಸಚಿವಾಲಯದ ಪ್ರಧಾನ ನಿರ್ದೇಶಕ (ಖರೀದಿ ವಿಭಾಗ) ವಿಎಲ್ ಕಾಂತ ರಾವ್ ಎಚ್ಎಎಲ್ ನ ವ್ಯವಸ್ಥಾಪಕ ನಿರ್ದೇಶಕ ಹಗೂ ಅಧ್ಯಕ್ಷ ಆರ್ ಮಾಧವನ್ ಏರೋ ಇಂಡಿಯಾ-2021 ರ ಉದ್ಘಾಟನೆ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಸಂಸದೀಯ ಸಭೆ ಒಪ್ಪಿಗೆ ನೀಡಿತ್ತು
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆಗೆ ಸಂಬಂಧಿಸಿದ ಸಂಸದೀಯ ಸಮಿತಿ (ಸಿಸಿಎಸ್) 73 ತೇಜಸ್ Mk-IA ಆವೃತ್ತಿ ಹಾಗೂ 10 ಎಲ್ ಸಿಎ ತೇಜಸ್ Mk-I ಆವೃತ್ತಿಯ ತರಬೇತಿ ಯುದ್ಧ ವಿಮಾನಗಳನ್ನು ಎಚ್ಎಎಲ್ ನಿಂದ ಖರೀದಿಸಲು ಕಳೆದ ತಿಂಗಳು ಒಪ್ಪಿಗೆ ನೀಡಿತ್ತು.

48 ಸಾವಿರ ಕೋಟಿ ವೆಚ್ಚದಲ್ಲಿ ಖರೀದಿಸಲು ಒಪ್ಪಿಗೆ ದೊರೆತಿತ್ತು
ಭಾರತೀಯ ವಾಯುಪಡೆ(ಐಎಎಫ್)ಗೆ ಎಚ್ಎಎಲ್ ಅಭಿವೃದ್ಧಿಪಡಿಸಿರುವ 83 ಲಘು ಯುದ್ಧ ವಿಮಾನ 'ತೇಜಸ್' ಅನ್ನು 48,000 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

3 ವರ್ಷಗಳ ಹಿಂದೆ ಆರಂಭಿಕ ಟೆಂಡರ್
ಸುಮಾರು ಮೂರು ವರ್ಷಗಳ ಹಿಂದೆ, ಐಎಎಫ್ 83 ತೇಜಸ್ ವಿಮಾನಗಳನ್ನು ಖರೀದಿಸಲು ಆರಂಭಿಕ ಟೆಂಡರ್ ನೀಡಿತ್ತು. ತೇಜಸ್ ನಾಲ್ಕೂವರೆ ತಲೆಮಾರಿನ ಯುದ್ಧ ಜೆಟ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತಾ ಸಂಪುಟ ಸಮಿತಿ(ಸಿಸಿಎಸ್) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತದಲ್ಲಿ ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆಗಾಗಿ ಈ ಒಪ್ಪಂದವು 'ಗೇಮ್ ಚೇಂಜರ್' ಆಗಲಿದೆ. ಮುಂದಿನ ವರ್ಷಗಳಲ್ಲಿ ತೇಜಸ್ ಭಾರತೀಯ ವಾಯುಪಡೆಯ ಫೈಟರ್ ಫ್ಲೀಟ್ನ ಬೆನ್ನೆಲುಬಾಗಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

73 ವಿಮಾನಗಳನ್ನು ಯುದ್ಧದ ಸಮಯದಲ್ಲಿ ಬಳಕೆ
ಇದರಲ್ಲಿ 73 ವಿಮಾನಗಳನ್ನು ಯುದ್ಧ ಸಮಯಗಳಲ್ಲಿ ಬಳಸಲಾಗುವುದು. ಇನ್ನುಳಿಂದ 10 ವಿಮಾನಗಳನ್ನು ತರಬೇತಿ ನೀಡಲು ಬಳಸಲಾಗುತ್ತದೆ. ವಿಮಾನ ತಯಾರಕ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್) ಈಗಾಗಲೇ ನಾಸಿಕ್ ಮತ್ತು ಬೆಂಗಳೂರು ವಿಭಾಗಗಳಲ್ಲಿ ಎರಡನೇ ಸಾಲಿನ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಿದೆ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications