Govt employees strike: ಸರ್ಕಾರಿ ನೌಕರರ ಮುಷ್ಕರದಿಂದ ಶಾಲಾ- ಕಾಲೇಜು ಬಾಗಿಲಿಗೆ ಬೀಗ!
ವೈದ್ಯಕೀಯ ಚಿಕಿತ್ಸೆಗೆ ಬಂದಿದ್ದ ರೋಗಿಗಳು ಒಪಿಡಿಯಲ್ಲಿ (ಹೊರ ರೋಗಿ ವಿಭಾಗ) ವೈದ್ಯರಿಲ್ಲದೆ ಪರದಾಡಿದ್ದಾರೆ.
ಬೆಂಗಳೂರು, ಮಾರ್ಚ್. 01: 7ನೇ ವೇತನ ಆಯೋಗದ ವರದಿ ಜಾರಿ, ಹಳೆಯ ಪಿಂಚಣಿ ಯೋಜನೆಗೆ ಮರುಪಾವತಿ ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ವೈದ್ಯಕೀಯ ಸೇರಿದಂತೆ ಹಲವು ಸೇವೆಗಳು ಸಿಗದೆ, ಸಾರ್ವಜನಿಕರು ಪರದಾಡುವಂತಾಗಿದೆ.
#Karnataka govt employees association strike
— Kiran Parashar (@KiranParashar21) March 1, 2023
Govt schools and colleges in several parts of the state remain shut due to employees strike. @IndianExpress pic.twitter.com/jIVCodBFfa
ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಲ್ಲಿ ಪ್ರಾಧ್ಯಾಪಕರು ಇಲ್ಲದೆ ಬೀಗ ಹಾಕಲಾಗಿದೆ. ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳ ಬಳಿ ಸುಮ್ಮನೆ ತಿರುಗುತ್ತಿರುವ ದೈಶ್ಯಗಳು ಕಂಡು ಬಂದಿವೆ. ಸಿಬ್ಬಂದಿ ಸೇರಿದಂತೆ ಎಲ್ಲಾ ಸರ್ಕಾರಿ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕಾರನ ವಿದ್ಯಾರ್ಥಿಗಳು ಪಾಠವಿಲ್ಲದೆ ಶಾಲಾ, ಕಾಲೇಜುಗಳ ಮುಂದೆ ಓಡಾಡುತ್ತಿದ್ದಾರೆ.

ಇನ್ನು, ವೈದ್ಯಕೀಯ ಚಿಕಿತ್ಸೆಗೆ ಬಂದಿದ್ದ ರೋಗಿಗಳು ಒಪಿಡಿಯಲ್ಲಿ (ಹೊರ ರೋಗಿ ವಿಭಾಗ) ವೈದ್ಯರಿಲ್ಲದೆ ಪರದಾಡಿದ್ದಾರೆ. ತುರ್ತು ಸೇವೆ ಹೊರತುಪಡಿಸಿ ಉಳಿದ ಎಲ್ಲ ಸೇವೆಗಳು ಬಂದ್ ಆಗಿದ್ದು, ತುರ್ತು ಸೇವೆಗಳನ್ನು ನಿರ್ವಹಿಸುತ್ತಿರುವ ನೌಕರರು ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಕೆಲವು ಕಡೆ ಕೆಲಸಕ್ಕೆ ಬಮದಿರುವವರನ್ನು ಮನವೊಲಿಸಿ ಮುಷ್ಕರಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ.
ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾರಾದರೇ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೂ ಆರು ಲಕ್ಷಕ್ಕೂ ಹೆಚ್ಚಿನ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ವಿಷಯ ತಿಳಿಯದೆ ಆಸ್ಪತ್ರೆಗೆ ಬಂದ ಬಡ ರೋಗಿಗಳು ವೈದ್ಯರಿಗಾಗಿ ಕಾದು ಕುಳಿತಿದ್ದಾರೆ. ಹಲವೆಡೆ ವೈದ್ಯರು ಮಾತ್ರ ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಕೊಪ್ಪಳ ಜಿಲ್ಲಾಸ್ಪತ್ರೆಗೆ ರೋಗಿಗಳು ಬಂದಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಕಪ್ಪುಪಟ್ಟಿ ಧರಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಾಗಲಕೋಟೆಯಲ್ಲಿ ಒಪಿಡಿ ಸೇವೆ ಸ್ಥಗಿತಗೊಂಡಿದ್ದು ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಕೆಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕೈಗೆ ಕಪ್ಪು ಪಟ್ಟಿ ಧರಸಿ ಕರ್ತವ್ಯಕ್ಕೆ ಹಾಜರಾಗಿದ್ದು, ಒಪಿಡಿ ಕಾರ್ಯ ನಿರ್ವಹಿಸುತ್ತಿದೆ.

ಈ ನಡುವೆ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಶೇ 17ರಷ್ಟು ವೇತನ ಹೆಚ್ಚಳದ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಆದೇಶ 2023ರ ಏಪ್ರಿಲ್ನಿಂದ ಜಾರಿಗೆ ಬರಲಿದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ










Click it and Unblock the Notifications