Get Updates
Get notified of breaking news, exclusive insights, and must-see stories!

ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ 5 ಲಕ್ಷದವರೆಗೆ ಸರ್ಕಾರಿ ಸಹಾಯಧನ, ಬಡವರು ಬಳಸಿಕೊಳ್ಳಿ: ಕೃಷ್ಣ ಬೈರೇಗೌಡ

ಬೆಂಗಳೂರು ಜನವರಿ 26: ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ತಮ್ಮ ಕಚೇರಿಯಲ್ಲಿ ನಿಗಮದ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, "ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳು ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳಿಗಾಗಿ ಬ್ಯಾಂಕ್ ನಿಂದ ಸಾಲ ಪಡೆದಿದ್ದಲ್ಲಿ, ಸಾಲದ ಪೈಕಿ ಶೇ. 20 ರಷ್ಟು ಹಣವನ್ನು ಸರ್ಕಾರ "ಸ್ವಾವಲಂಭಿ" ಯೋಜನೆ ಅಡಿಯಲ್ಲಿ ಸಹಾಯಧನ ನೀಡಲಿದೆ.

Govt subsidy up to 5 lakhs for self-employed Brahmins, use by poor: Krishna Byre gowda

ಗರಿಷ್ಠ 5 ಲಕ್ಷದ ವರೆಗೆ ಸಹಾಯಧನ ನೀಡಲಾಗುವುದು. ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ತ್ರೀಕೃತ ಬ್ಯಾಂಕ್ ಗಳಿ‌ಂದ ಸಾಲ ಪಡೆದವರು ಈ ಯೋಜನೆ ಅರ್ಹರಾಗಿರುತ್ತಾರೆ. ಜನವರಿ 31 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು ಅರ್ಹರು ಇದರ ಉಪಯೋಗ ಪಡೆದುಕೊಳ್ಳಿ" ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸಾಂದೀಪಿನಿ ಶಿಷ್ಯ ವೇತನ:

ಮೆಟ್ರಿಕ್ ನಂತರದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ 15,000 ರೂ. ವರೆಗೆ "ಸಾಂದೀಪಿನಿ" ಯೋಜನೆ ಅಡಿ ಶಿಷ್ಯ ವೇತನ ನೀಡಲಾಗುವುದು.

ಯುಜಿ/ಪಿಜಿ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಸಿಇಟಿ ಪ್ರವೇಶ ಪರೀಕ್ಷೆ ಮೂಲಕ ತೇರ್ಗಡೆಯಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ, ದಾಖಲಾತಿ ಶುಲ್ಕದ ಮೊತ್ತದ 2/3 ಭಾಗ ಹಾಗೂ ಗರಿಷ್ಠ ರೂ. 1 ಲಕ್ಷದ ವರೆಗೆ ಬ್ರಾಹ್ಮಣ ಅಭಿವೃದ್ಧಿ ನಿಗಮದ ಮೂಲಕ ಸರ್ಕಾರ ಪಾವತಿಸಲಿದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ.31 ಕೊನೆಯ ದಿನವಾಗಿರಲಿದೆ ಎಂದು ಅವರು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+