ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ 5 ಲಕ್ಷದವರೆಗೆ ಸರ್ಕಾರಿ ಸಹಾಯಧನ, ಬಡವರು ಬಳಸಿಕೊಳ್ಳಿ: ಕೃಷ್ಣ ಬೈರೇಗೌಡ
ಬೆಂಗಳೂರು ಜನವರಿ 26: ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ತಮ್ಮ ಕಚೇರಿಯಲ್ಲಿ ನಿಗಮದ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, "ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳು ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳಿಗಾಗಿ ಬ್ಯಾಂಕ್ ನಿಂದ ಸಾಲ ಪಡೆದಿದ್ದಲ್ಲಿ, ಸಾಲದ ಪೈಕಿ ಶೇ. 20 ರಷ್ಟು ಹಣವನ್ನು ಸರ್ಕಾರ "ಸ್ವಾವಲಂಭಿ" ಯೋಜನೆ ಅಡಿಯಲ್ಲಿ ಸಹಾಯಧನ ನೀಡಲಿದೆ.

ಗರಿಷ್ಠ 5 ಲಕ್ಷದ ವರೆಗೆ ಸಹಾಯಧನ ನೀಡಲಾಗುವುದು. ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ತ್ರೀಕೃತ ಬ್ಯಾಂಕ್ ಗಳಿಂದ ಸಾಲ ಪಡೆದವರು ಈ ಯೋಜನೆ ಅರ್ಹರಾಗಿರುತ್ತಾರೆ. ಜನವರಿ 31 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು ಅರ್ಹರು ಇದರ ಉಪಯೋಗ ಪಡೆದುಕೊಳ್ಳಿ" ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಸಾಂದೀಪಿನಿ ಶಿಷ್ಯ ವೇತನ:
ಮೆಟ್ರಿಕ್ ನಂತರದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ 15,000 ರೂ. ವರೆಗೆ "ಸಾಂದೀಪಿನಿ" ಯೋಜನೆ ಅಡಿ ಶಿಷ್ಯ ವೇತನ ನೀಡಲಾಗುವುದು.
ಯುಜಿ/ಪಿಜಿ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಸಿಇಟಿ ಪ್ರವೇಶ ಪರೀಕ್ಷೆ ಮೂಲಕ ತೇರ್ಗಡೆಯಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ, ದಾಖಲಾತಿ ಶುಲ್ಕದ ಮೊತ್ತದ 2/3 ಭಾಗ ಹಾಗೂ ಗರಿಷ್ಠ ರೂ. 1 ಲಕ್ಷದ ವರೆಗೆ ಬ್ರಾಹ್ಮಣ ಅಭಿವೃದ್ಧಿ ನಿಗಮದ ಮೂಲಕ ಸರ್ಕಾರ ಪಾವತಿಸಲಿದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ.31 ಕೊನೆಯ ದಿನವಾಗಿರಲಿದೆ ಎಂದು ಅವರು ತಿಳಿಸಿದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications