ಹುಬ್ಬಳ್ಳಿ ಕೊಲೆ ಪ್ರಕರಣದ ಸಂತ್ರಸ್ತೆಗೆ ಸರ್ಕಾರದಿಂದಲೇ ಪರಿಹಾರ: ಜಿ.ಪರಮೇಶ್ವರ
ಬೆಂಗಳೂರು, ಜುಲೈ 16: ಹುಬ್ಬಳ್ಳಿಯಲ್ಲಿ ತಿಂಗಳುಗಳ ಹಿಂದಷ್ಟೇ ಅಂಜಲಿ ಅಂಬಿಗೇರ ಎಂಬಾಕೆಯನ್ನು ಮನೆಯಲ್ಲಿಯೇ ಪಾಗಲ್ ಪ್ರೇಮಿಯೊಬ್ಬ ಹತ್ಯೆ ಮಾಡಿದ್ದ. ಈ ಪ್ರಕರಣವನ್ನು ವಿಶೇಷ ಪ್ರಕರಣವಾಗಿ ಪರಿಷಣಿಸಿರುವ ರಾಜ್ಯ ಸರ್ಕಾರ ಪ್ರಮುಖ ನಿರ್ಧಾರವೊಂದನ್ನು ಘೋಷಣೆ ಮಾಡಿದೆ.
ಹೌದು, ಹುಬ್ಬಳ್ಳಿಯಲ್ಲಿ ನಡೆದ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಕುಟುಂಬಸ್ಥರಿಗೆ ಸರ್ಕಾರದಿಂದ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ವಿಧಾನ ಪರಿಷತ್ನಲ್ಲಿ ಸದಸ್ಯ ತಿಪ್ಪಣ್ಣ ಕಮಕನೂರು ಅವರು ಕೇಳಿದ, 'ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಕುಟುಂಬಕ್ಕೆ ಪರಿಹಾರ ಕಲ್ಪಿಸುವಲ್ಲಿ ವಿಳಂಬ ಮತ್ತು ಪ್ರಕರಣದ ವಿಚಾರಣಗೆ ಫಾಸ್ಟ್ರ್ಯಾಕ್ ಕೋರ್ಟ್' ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು.
ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಿ ನಿರ್ಧಾರ ಪ್ರಕಟ
ಸಾಮಾನ್ಯವಾಗಿ ಕೊಲೆ ಪ್ರಕರಣಗಳಿಗೆ ಸರ್ಕಾರ ಪರಿಹಾರ ನೀಡುವುದಿಲ್ಲ. ಯುವತಿಯ ಕುಟುಂಬದ ಬಡತನವನ್ನು ನೋಡಿದಾಗ ಎಂಥವರಿಗಾದರೂ ಕನಿಕರ, ಅನುಕಂಪ ಬರುತ್ತದೆ. ಹೀಗಾಗಿ ಈ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಖ್ಯಮಂತ್ರಿ ಅವರೊಂದಿಗೆ ಮಾತನಾಡಿ ಪರಿಹಾರ ಕಲ್ಪಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಘಟನೆ ನಡೆದ ಬಳಿಕ ಅವರ ನಿವಾಸಕ್ಕೆ ಭೇಟಿ ನೀಡಿ, ಯುವತಿಯ ಅಜ್ಜಿಯೊಂದಿಗೆ ಮಾತನಾಡಿದ್ದೇನೆ. ಅವರ ಬಡತನ ಮತ್ತು ಜೀವಮ ಶೈಲಿಯನ್ನು ಕಣ್ಣಾರೆ ನೋಡಿದಾಗ ಅನುಕಂಪವಷ್ಟೇ ಅಲ್ಲದೇ ದುಃಖವು ಆಗುತ್ತದೆ. ಸರ್ಕಾರವು ಗಂಭೀರವಾಗಿ ಪರಿಗಣಿಸಿ ಸಹಾಯ ಮಾಡಲಿದೆ ಎಂದು ನಿರ್ಧಾರ ಸ್ಪಷ್ಟಪಡಿಸಿದರು.

ಸಂತ್ರಸ್ತ ಕುಟುಂಬಕ್ಕೆ ಆಶ್ರಯ ಮನೆ
ಸ್ಲಂ ಬೋರ್ಡ್ ಅಥವಾ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ಯುವತಿಯ ಅಜ್ಜಿಗೆ ಭರವಸೆ ನೀಡಿದ್ದೆವು. ಈಗಾಗಲೇ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಆಶ್ರಯ ಯೋಜನೆಯಡಿ ಮನೆ ನೀಡಲು ಒಪ್ಪಿದ್ದಾರೆ. ತಕ್ಷಣ ಮನೆ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಅವರು ವಿವರಿಸಿದರು.
ಪ್ರಕರಣದ ತನಿಖೆಯು ಚಾರ್ಜ್ಶೀಟ್ ಪಟ್ಟಿ ಸಲ್ಲಿಸುವ ಹಂತದಲ್ಲಿದೆ. ಈಗಾಗಲೇ ತ್ವರಿತಗತಿಯಲ್ಲಿ ಆರೋಪಿಯನ್ನು ಬಂಧಿಸಿ, ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು ಫಾಸ್ಟ್ರ್ಯಾಕ್ ಕೋರ್ಟ್ನ ಅಗತ್ಯವಿಲ್ಲ ಎಂದು ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications