RR Nagar: ಅಭಿವೃದ್ಧಿ ಹೆಸರಿನಲ್ಲಿ ನಡೆದ ಅಕ್ರಮಗಳ ತನಿಖೆ: ಡಿಕೆಶಿ
ಬೆಂಗಳೂರು, ಜುಲೈ 24: ಬೆಂಗಳೂರಿನ ರಾಜರಾಜೇಶ್ವರಿ ನಗರವು ಚುನಾವಣೆ ಹೊತ್ತಿನಲ್ಲಿ ಸುದ್ದಿ ಮಾಡಿದಷ್ಟು ಇತರೆ ವಿಧಾನಸಭಾ ಕ್ಷೇತ್ರಗಳು ಸದ್ದು ಮಾಡಿಲ್ಲ. ಕಾರಣ ಇಲ್ಲಿನ ಬಿಜೆಪಿ-ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು, ಪ್ರಚಾರ ಭರಾಟೆಯಿಂದ ಮುನ್ನೆಲೆಗೆ ಬಂದ ಕ್ಷೇತ್ರದಲ್ಲಿ ಇದೀಗ ವ್ಯಾಪಕ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿ ಬಂದಿದೆ. ಈ ಎಲ್ಲ ಅಕ್ರಮಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಮತ್ತಿಕೆರೆಯ ಜೆ.ಪಿ ಪಾರ್ಕ್ ನಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಈ ಕುರಿತು ಮಾಹಿತಿ ನೀಡಿದ ಅವರು, ಆರ್ಆರ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲತ್ತಹಳ್ಳಿ ಕೆರೆ, ಹೊಸಕೆರೆ, ಜೆಪಿ ಪಾರ್ಕ್ ಅಭಿವೃದ್ಧಿ ಹೆಸರಿನಲ್ಲಿ ಕೆರೆ ಕಣ್ಮರೆ ಈಜುಕೊಳ ಮರು ನಿರ್ಮಾಣ ಹಾಗೂ ಕೆಲವು ಉದ್ಯಾನಗಳ ಅಭಿವೃದ್ಧಿ ಮಾಡುವ ನೆಪದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಕ್ರಮಗಳನ್ನು ಜನರಿಗೆ ತಿಳಿಸಲು ಸೂಕ್ತ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ, ಆರ್ಆರ್ ನಗರದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅಕ್ರಮ ನಡೆಸಿರುವ ಬಿಜೆಪಿ ಶಾಸಕರು ಚುನಾವಣೆಯಲ್ಲಿ ಹೇಗೆ ಗೆದ್ದು ಬಂದರು ಎಂಬುದು ಜನರಿಗೆ ಗೊತ್ತಾಗಲಿ. ಈ ಸಂಬಂಧ ಅಕ್ರಮಗಳೆಲ್ಲವನ್ನು ಬಯಲಿಗೆಳೆಯುತ್ತೇವೆ ಎಂದರು.
ಕೆರೆ ಅಭಿವೃದ್ಧಿ ನೆಪದಲ್ಲು ಹಣ ಲೂಟಿ?
ಇನ್ನೂ ಹೊಸಕೆರೆ ಹಳ್ಳಿ ಬಳಿ ಬೇರೊಬ್ಬರ ಹೆಸರಿನಲ್ಲಿ (ಬೇನಾಮಿ) ಶಾಸಕರು ಜಮೀನು ಖರೀದಿ ಮಾಡಿದ್ದಾರೆ ಎಂದು ಹೆಸರು ಹೇಳದೇ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅವರು ಕಿಡಿ ಕಾರಿದರು. ತಾವು ಖರೀದಿಸಿದ ಜಮೀನಿಗೆ ತೆರಳಲು ಕೆರೆ ನಡುವೆ ರಸ್ತೆ ನಿರ್ಮಿಸಿದ್ದಾರೆ. ಹೀಗೆ ಕೆರೆ ಅಭಿವೃದ್ಧಿ ನೆಪದಲ್ಲಿ ಹಣ ಲೂಟಿ ಹೊಡೆಯಲಾಗಿದೆ ಎಂದು ಅವರು ತಿಳಿಸಿದರು.

ಮುಂದಿನ ದಿನಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತ್ತು ಲೋಕಸಭಾ ಚುನಾವಣೆ ಎದುರಾಗಲಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲು ನೀವೆಲ್ಲ ಶ್ರಮಿಸಬೇಕು. ಈ ಮೂಲಕ ಬೆಂಗಳೂರಿನ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಮಾವೇಶದಲ್ಲಿ ಅವರು ಮನವಿ ಮಾಡಿದರು.
ಇದೇ ವೇಳೆ ಕಾಂಗ್ರೆಸ್ ಸಂಸದ ಹಾಗೂ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಮಾತನಾಡಿ, ಆರ್ಆರ್ನಗರ ಕ್ಷೇತ್ರಕ್ಕೆ ಕೆಲವು ಕಳಂಕಗಳು ಅಂಟಿವೆ. ಅದನ್ನು ತೊಳೆಯಲು ವೇಲು ನಾಯಕರ್, ಜಿ.ಮೋಹನ್ ಕುಮಾರ್,ಸಿದ್ದೇಗೌಡ, ಶ್ರೀನಿವಾಸ ಮೂರ್ತಿ ಮತ್ತಿತರರು ಬಂದಿದ್ದಾರೆ. ಕಾಂಗ್ರೆಸ್ನಲ್ಲಿ ಮೂಲ ಮತ್ತು ವಲಸಿಗರು ಎಂಬ ಬೇಧ ಇಲ್ಲದೆ ಎಲ್ಲ ಒಟ್ಟಾಗಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಕ್ರಿಯಾಶೀಲರಾಗಬೇಕು ಎಂದು ಅವರು ತಿಳಿಸಿದರು.
ನಾನು ದ್ವೇಷ ರಾಜಕಾರಣ ಮಾಡಿಲ್ಲ: ಕುಸುಮಾ
ಆರ್ಆರ್ ನಗರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಚ್.ಕುಸುಮಾ ಅವರು, ನಾನು ಕೊಳಚು ಹೋಗಿರುವ ಹಣ್ಣಿಗೆ ಕಲ್ಲು ಹೊಡೆಯುವ ಕೆಲಸ ಮಾಡುವುದಿಲ್ಲ. ಅದೇ ಕೆಳಗೆ ಬೀಳುತ್ತದೆ. ಅಕ್ರಮ, ಮೋಸ, ವಂಚನೆ ಮಾಡಿದವರನ್ನು ದೇವರೇ ನೋಡಿಕೊಳ್ಳುತ್ತಾನೆ ಎಂದ ಅವರು ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಬಿಜೆಪಿ ಶಾಸಕರಿಗೆ ಟಾಂಗ್ ನೀಡಿದರು.
ಮೈತ್ರಿ ಸರ್ಕಾರ ಪತನವಾಗಿ ಉಪಚುನಾವಣೆ ನಡೆದ ವೇಳೆ ಆರ್ಆರ್ ನಗರ ಕ್ಷೇತ್ರದಲ್ಲಿ ನಕಲಿ ಮತದಾರರ ಗುರುತಿನ ಪತ್ತೆಯಾಗಿದ್ದು ಭಾರಿ ಸದ್ದು ಮಾಡಿತ್ತು. ಇತ್ತೀಚಿನ ಚುನಾವಣೆಯಲ್ಲಿ ದ್ವೇಷದ ರಾಜಕಾರಣ, ಮುಸಲ್ಮಾನ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಬಿಜೆಪಿ ಶಾಸಕರು ಮತ ಒಡೆಯಲು ಮುಂದಾಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಕ್ಷೇತ್ರ ವ್ಯಾಪ್ತಿಯಲ್ಲಿ ವ್ಯಾಪಕ ಅಕ್ರಮ, ಭ್ರಷ್ಟಾಚಾರ ನಡೆದಿವೆ ಎನ್ನಲಾಗಿದೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications