ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಲು ಸಿಎಂ ಆದೇಶ
ಬೆಂಗಳೂರು, ಅ.8 : ಸರ್ಕಾರಿ ಭೂಮಿಯನ್ನು ಕಬಳಿಕೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ರಸ್ತೆ, ಉದ್ಯಾನವನ, ರಾಜಾಕಾಲುವೆ ಮುಂತಾದವುಗಳಿಗೆ ಮೀಸಲಿಟ್ಟ ಜಾಗವನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿದ್ದರೆ, ಅವುಗಳನ್ನು ತಕ್ಷಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಆಗಿರುವ ಭೂ ಕಬಳಿಕೆ ಕುರಿತು ಚರ್ಚಿಸಲು ಉನ್ನತ ಮಟ್ಟದ ಸಭೆ ನಡೆಯಿತು. ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡವರು ಎಷ್ಟು ಪ್ರಭಾವಿಗಳಾಗಿದ್ದರೂ ಅದನ್ನು ತೆರವುಗೊಳಿಸಿ, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯಿರಿ ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. [ಭೂಗಳ್ಳರ ವಿರುದ್ಧ ಆಪ್ ಆಮರಣಾಂತ ಉಪವಾಸ]

ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ಅವರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚು ಭೂ ಕಬಳಿಕೆ ಆದ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ 34 ಸಾವಿರ ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದ್ದು, ಅದನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದರು. [ಡಿಸೆಂಬರ್ ನಂತರ ಮಂಡೂರಲ್ಲಿ ಕಸ ಹಾಕಲ್ಲ]
ಮೂವರು ಜಿಲ್ಲಾಧಿಕಾರಿಗಳು : ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಇಬ್ಬರು ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ. ಪ್ರಸ್ತುತ ಇರುವ ಒಬ್ಬರು ಜಿಲ್ಲಾಧಿಕಾರಿಗಳಿಂದ ಒತ್ತುವರಿ ತೆರವು ಅಸಾಧ್ಯ. ಆದ್ದರಿಂದ, ಇಬ್ಬರನ್ನು ನೇಮಕ ಮಾಡಲಾಗುವುದು. ಎರಡು ದಿನದಲ್ಲಿ ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದು ಜಯಚಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳಿಗೆ ನೆರವಾಗಲು ಹಿಂದೆಯೂ ವಿಶೇಷ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿತ್ತು. ಒಟ್ಟು ಮೂವರು ಜಿಲ್ಲಾಧಿಕಾರಿಗಳಿಗೂ ಪ್ರದೇಶಗಳ ವ್ಯಾಪ್ತಿಯನ್ನು ನೀಡಲಾಗುವುದು. 50 ಎಕರೆಗಿಂತ ಹೆಚ್ಚಿನ ಭೂಮಿ ಒತ್ತುವರಿಯಾಗಿರುವುದನ್ನು ಮೊದಲು ತೆರವುಗೊಳಿಸುವಂತೆ ಸೂಚನೆ ನೀಡಲಾಗುವುದು ಎಂದು ಸಚಿವರು ಹೇಳಿದರು.
ವಿಶೇಷ ಕೋರ್ಟ್ ಸ್ಥಾಪನೆ : ಭೂ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ವಿಶೇಷ ನ್ಯಾಯಾಲಯ ಸ್ಥಾಪಿಸುವ ಕುರಿತು ಪ್ರಸ್ತಾವನೆ ರಚಿಸಿ ಅದನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಲಾಗಿದೆ. ಅವರ ಒಪ್ಪಿಗೆ ದೊರೆತ ಬಳಿಕ ಕೋರ್ಟ್ ಸ್ಥಾಪನೆಯಾಗಲಿದೆ. ಭೂ ಒತ್ತುವರಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನಡೆಸುತ್ತಿರುವ ಧರಣಿಯನ್ನು ಕೈಬಿಡುವಂತೆ ಸಚಿವರು ಮನವಿ ಮಾಡಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
School Land Bill: ಸರ್ಕಾರಿ ಶಾಲೆಗಳ ಭೂರಕ್ಷಣ ವಿಧೇಯಕ ಜಾರಿ; ಕನ್ನಡದ ಹಿತದೃಷ್ಠಿಯಿಂದ ಮಹತ್ವದ ಹೆಜ್ಜೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications