ಇದು, ಗೌರಿ ಲಂಕೇಶ್ ಹತ್ಯೆಗೆ ಹಂತಕರು ಬಳಸಿದ 'ಕೋಡ್ ವರ್ಡ್'
ಬೆಂಗಳೂರು, ಜ 10: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳದವರು (SIT) ಜಾರ್ಖಂಡ್ ನಲ್ಲಿ ಇನ್ನೋರ್ವನನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖಾ ದಳದವರು ಸ್ಪಷ್ಟನೆಯನ್ನು ನೀಡಿದ್ದಾರೆ.
ಈ ಪ್ರಕರಣದಲ್ಲಿ ಈತ ಹದಿನೆಂಟನೇ ಆರೋಪಿಯಾಗಿದ್ದು, ಈತನ ಹೆಸರು ರಿಷಿಕೇಶ್ ದೇವಾಡಿಕರ್ ಅಲಿಯಾಸ್ ಮುರಳಿ. 44ವರ್ಷದ ಈತ ಮಹಾರಾಷ್ಟ್ರ ಮೂಲದವನಾಗಿದ್ದಾನೆ. ಸುಮಾರು ಎರಡೂವರೆ ವರ್ಷಗಳಿಂದ ಪೊಲೀಸರು ಈತನ ಹುಡುಕಾಟದಲ್ಲಿದ್ದರು.
ಬಲಪಂಥೀಯ ವಿಚಾರಧಾರೆಯವರನ್ನು ವಿರೋಧಿಸುವವರ ಹತ್ಯೆಗೆ ತಂಡವನ್ನು ಸಂಘಟಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಈತನನ್ನು, ಜಾರ್ಖಂಡ್ ರಾಜ್ಯದ ಧನಾಬಾದ್ ಜಿಲ್ಲೆಯ ಕತ್ರಾಸ್ ಎನ್ನುವಲ್ಲಿ ಪೊಲೀಸರು ಬಂಧಿಸಿದ್ದಾರೆ.

ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಆರೋಪಿಗಳು ಕೋಡ್ ವರ್ಡ್ ಮೂಲಕವೇ ಸಂಭಾಷಣೆ ನಡೆಸುತ್ತಿದ್ದರು ಎನ್ನುವ ಮಾಹಿತಿಯು ವಿಚಾರಣೆ ವೇಳೆ ಲಭ್ಯವಾಗಿದೆ. ಬಂಧಿತ ಮುರಳಿ, ಗೌರಿ ಮತ್ತು ಎಂ.ಎಂ. ಕಲ್ಬುರ್ಗಿ ಅವರ ಹತ್ಯೆಯಲ್ಲಿಯೂ ಪ್ರಮುಖ ಆರೋಪಿಯಾಗಿದ್ದ.
ಗೌರಿ ಲಂಕೇಶ್ ಅವರ ಹೆಸರನ್ನು ಈ ಆರೋಪಿಗಳು 'ಅಮ್ಮ' ಎನ್ನುವ ಕೋಡ್ ವರ್ಡ್ ಮೂಲಕ ಬಳಸುತ್ತಿದ್ದರು. ದೂರವಾಣಿಯಲ್ಲಿ ಮಾತನಾಡಿಕೊಳ್ಳುತ್ತಿದ್ದ ಹಂತಕರು, ಗೌರಿ ಅವರ ಹತ್ಯೆಯಾಗುವವರೆಗೂ ಇದೇ ಪದವನ್ನು ಬಳಸಿಕೊಂಡಿದ್ದರು.
ಆಪರೇಷನ್ ಅಮ್ಮ ಎಂಬ ಹೆಸರಿನಲ್ಲಿ ನಡೆದ ಈ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಈ ಕೋಡ್ ವರ್ಡ್ ಚೆನ್ನಾಗಿ ತಿಳಿದಿತ್ತು ಎನ್ನುವ ವಿಷಯವನ್ನು ಬಂಧಿತ ಮುರಳಿ, ವಿಚಾರಣೆಯ ವೇಳೆ ಬಾಯಿಬಿಟ್ಟಿದ್ದಾನೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications