ಇದು, ಗೌರಿ ಲಂಕೇಶ್ ಹತ್ಯೆಗೆ ಹಂತಕರು ಬಳಸಿದ 'ಕೋಡ್ ವರ್ಡ್'
ಬೆಂಗಳೂರು, ಜ 10: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳದವರು (SIT) ಜಾರ್ಖಂಡ್ ನಲ್ಲಿ ಇನ್ನೋರ್ವನನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖಾ ದಳದವರು ಸ್ಪಷ್ಟನೆಯನ್ನು ನೀಡಿದ್ದಾರೆ.
ಈ ಪ್ರಕರಣದಲ್ಲಿ ಈತ ಹದಿನೆಂಟನೇ ಆರೋಪಿಯಾಗಿದ್ದು, ಈತನ ಹೆಸರು ರಿಷಿಕೇಶ್ ದೇವಾಡಿಕರ್ ಅಲಿಯಾಸ್ ಮುರಳಿ. 44ವರ್ಷದ ಈತ ಮಹಾರಾಷ್ಟ್ರ ಮೂಲದವನಾಗಿದ್ದಾನೆ. ಸುಮಾರು ಎರಡೂವರೆ ವರ್ಷಗಳಿಂದ ಪೊಲೀಸರು ಈತನ ಹುಡುಕಾಟದಲ್ಲಿದ್ದರು.
ಬಲಪಂಥೀಯ ವಿಚಾರಧಾರೆಯವರನ್ನು ವಿರೋಧಿಸುವವರ ಹತ್ಯೆಗೆ ತಂಡವನ್ನು ಸಂಘಟಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಈತನನ್ನು, ಜಾರ್ಖಂಡ್ ರಾಜ್ಯದ ಧನಾಬಾದ್ ಜಿಲ್ಲೆಯ ಕತ್ರಾಸ್ ಎನ್ನುವಲ್ಲಿ ಪೊಲೀಸರು ಬಂಧಿಸಿದ್ದಾರೆ.

ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಆರೋಪಿಗಳು ಕೋಡ್ ವರ್ಡ್ ಮೂಲಕವೇ ಸಂಭಾಷಣೆ ನಡೆಸುತ್ತಿದ್ದರು ಎನ್ನುವ ಮಾಹಿತಿಯು ವಿಚಾರಣೆ ವೇಳೆ ಲಭ್ಯವಾಗಿದೆ. ಬಂಧಿತ ಮುರಳಿ, ಗೌರಿ ಮತ್ತು ಎಂ.ಎಂ. ಕಲ್ಬುರ್ಗಿ ಅವರ ಹತ್ಯೆಯಲ್ಲಿಯೂ ಪ್ರಮುಖ ಆರೋಪಿಯಾಗಿದ್ದ.
ಗೌರಿ ಲಂಕೇಶ್ ಅವರ ಹೆಸರನ್ನು ಈ ಆರೋಪಿಗಳು 'ಅಮ್ಮ' ಎನ್ನುವ ಕೋಡ್ ವರ್ಡ್ ಮೂಲಕ ಬಳಸುತ್ತಿದ್ದರು. ದೂರವಾಣಿಯಲ್ಲಿ ಮಾತನಾಡಿಕೊಳ್ಳುತ್ತಿದ್ದ ಹಂತಕರು, ಗೌರಿ ಅವರ ಹತ್ಯೆಯಾಗುವವರೆಗೂ ಇದೇ ಪದವನ್ನು ಬಳಸಿಕೊಂಡಿದ್ದರು.
ಆಪರೇಷನ್ ಅಮ್ಮ ಎಂಬ ಹೆಸರಿನಲ್ಲಿ ನಡೆದ ಈ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಈ ಕೋಡ್ ವರ್ಡ್ ಚೆನ್ನಾಗಿ ತಿಳಿದಿತ್ತು ಎನ್ನುವ ವಿಷಯವನ್ನು ಬಂಧಿತ ಮುರಳಿ, ವಿಚಾರಣೆಯ ವೇಳೆ ಬಾಯಿಬಿಟ್ಟಿದ್ದಾನೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications