ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರ್ನಾಡ್, ಬರಗೂರು ಸೇರಿ 17 ಸಾಹಿತಿ, ಚಿಂತಕರಿಗೆ ಬಿಗಿಭದ್ರತೆ

|
Google Oneindia Kannada News

Recommended Video

Karnataka state government decide 17 literature's to give police security | Oneindia Kannada

ಬೆಂಗಳೂರು, ಸೆಪ್ಟೆಂಬರ್ 9: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ನಾಡಿನ 17 ಅಗ್ರ ಚಿಂತಕರು ಹಾಗೂ ಸಾಹಿತಿಗಳಿಗೆ ಭದ್ರತೆ ಒದಗಿಸಿದೆ.

ಇದು ನನ್ನ ದೇಶವಲ್ಲ, ಗೌರಿ ಹತ್ಯೆಗೆ ರಹಮಾನ್ ಕಂಬನಿಇದು ನನ್ನ ದೇಶವಲ್ಲ, ಗೌರಿ ಹತ್ಯೆಗೆ ರಹಮಾನ್ ಕಂಬನಿ

ಇವರಲ್ಲಿ, ಕೇಂದ್ರ ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್, ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಪಾಟೀಲ್ ಪುಟ್ಟಪ್ಪ, ಚೆನ್ನವೀರ ಕಣವಿ, ಕುಂ. ವೀರಭದ್ರಪ್ಪ ಅವರು ಭದ್ರತೆ ಪಡೆದ ಸಾಹಿತಿಗಳಲ್ಲಿ ಪ್ರಮುಖರಾಗಿದ್ದಾರೆ.

Gowri Murder Impact: Karnad, Baraguru get govt security

ಸರ್ಕಾರಿ ಭದ್ರತೆ ಪಡೆದ ಸಾಲಿನಲ್ಲಿ ಪ್ರೊ. ಭಗವಾನ್ ಅವರು ಪ್ರಮುಖರು. ಇದರ ಜತೆಗೆ, ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಆಗ್ರಹಿಸುತ್ತಿರುವ ವಿನಯ್ ಕುಲಕರ್ಣಿ, ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ. ಜಾಮ್ ಧಾರ್, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಚಿವ ಎಂ.ಬಿ. ಪಾಟೀಲ್ ಅವರಿಗೂ ಭದ್ರತೆ ನೀಡಲಾಗಿದೆ.

ಸೆಪ್ಟೆಂಬರ್ 5ರ ರಾತ್ರಿ ಸುಮಾರು 8 ಗಂಟೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಗೌರಿ ಲಂಕೇಶ್ ಅವರ ನಿವಾಸದ ಮುಂದೆಯೇ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಹಿಂದುತ್ವ ಉಗ್ರವಾದಿಗಳ ಗುಂಪೇ ಈ ಕೃತ್ಯ ಮಾಡಿದ್ದಾರೆಂಬ ಗುಮಾನಿ ಹರಿದಾಡಿರುವ ಹಿನ್ನೆಲೆಯಲ್ಲಿ, ನಾಡಿನ ಪ್ರಮುಖ ಚಿಂತಕರು, ಸಾಹಿತಿಗಳಿಗೆ ಬಿಗಿ ಭದ್ರತೆ ವಹಿಸಲಾಗಿದೆ.

English summary
After veteran journalist Gauri Lankesh's murder, state government decides to give security to 17 high profile litterateurs and think tanks of Karnataka. This include noted writers Girish Karnad, Baraguru Ramachandrappa, Patil Puttappa etc.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X