ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನಗಳ ಮೇಲೆ ಜಿಪಿಎಸ್ ಕಣ್ಗಾವಲು
ಬೆಂಗಳೂರು, ಡಿಸೆಂಬರ್, 20 : ಕಸ ಸಮಸ್ಯೆ ನಿವಾರಣೆಗೆ ಹಲವು ಪ್ರಯತ್ನಗಳನ್ನು ಮಾಡುತ್ತಿರುವ ಬಿಬಿಎಂಪಿ ತ್ಯಾಜ್ಯವಿಲೇವಾರಿ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಮುಂದಾಗಿದೆ.
ಕಸ ಸಂಗ್ರಹಿಸಿ ವಿಲೇವಾರಿ ಮಾಡುವ ಕಾಂಪ್ಯಾಕ್ಟರ್ ಹಾಗೂ ಆಟೋ ಟಿಪ್ಪರ್ ಗಳು ಇನ್ನು ಮುಂದೆ ಅಧಿಕಾರಿಗಳ ಕಣ್ಗಾವಲಿನಲ್ಲಿ ಇರಲಿದೆ. ಎಲ್ಲಿ ಕಸ ಸಂಗ್ರಹಿಸಿವೆ. ಎಲ್ಲಿ ವಿಲೇವಾರಿ ಮಾಡುತ್ತಿವೆ ಎಂಬುದು ಕ್ಷಣಾರ್ಧದಲ್ಲಿ ತಿಳಿಯಲಿದೆ.
ಅದಕ್ಕಾಗಿಯೇ ಗುತ್ತಿಗೆ ಆಧಾರದಲ್ಲಿ ಪಡೆಯುವ ಕಾಂಪ್ಯಾಕ್ಟರ್ ಹಾಗೂ ಆಟೋ ಟಿಪ್ಪರ್ ಗಳಿಗೆ ಜಿಪಿಎಸ್ ಅಳವಡಿಕೆ ಕಡ್ಡಾಯ ಮಾಡಲಾಗುತ್ತಿದೆ. ಬಿಬಿಎಂಪಿ ವ್ಯಾಪ್ರತಿಯಲ್ಲಿ 4 ಸಾವಿರ ಟನ್ ಗೂ ಹೆಚ್ಚಿನ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಮಾಡಲಾಗುತ್ತಿದೆ. ಅದಕ್ಕಾಗಿ 800ರೂ. ಖರ್ಚು ಮಾಡಲಾಗುತ್ತಿದೆ. ಆ ಹಣದಲ್ಲಿ ಕಾಂಪ್ಯಾಕ್ಟರ್ ಮತ್ತು ಆಟೋ ಟಿಪ್ಪರ್ ಪೂರೈಕೆ ಮಾಡುವ ಗುತ್ತಿಗೆದಾರರಿಗೆ ಹಣ ನೀಡಲಾಗುತ್ತದೆ.

ತ್ಯಾಜ್ಯ ವಿಲೇವಾರಿ ಮಾಡುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ
ಹೊಸ ನಿಯಮದಂತೆ 750 ಮನೆಗಳಿಗೆ ಒಂದರಂತೆ ಆಟೋ ಟಿಪ್ಪರ್ ನಿಯೋಜನೆ ಮಾಡಲಾಗುತ್ತಿದೆ. ಇದರಿಂದಾಗಿ ಬಿಬಿಎಂಪಿ ವ್ಯಾಪ್ತಿಯ ಎಲ್ಲ 198 ವಾರ್ಡ್ ಗಳಲ್ಲಿ ಕಸ ಅಂಗ್ರಹಿಸಲು ಅಂದಾಜು ೫ ಸಾವಿರ ಆಟೋ ಟಿಪ್ಪರ್ ಗಳು ಬೇಕಾಗಿವೆ. ಅಲ್ಲದೆ, ಆ ಆಟೋ ಟಿಪ್ಪರ್ ಗಳಿಂದ ಕಸ ಪಡೆದು ಕಸ ಸಂಗ್ರಹಣಾ ಘಟಕಗಳಿಗೆ ಸರಬರಾಜು ಮಾಡಲು ೫೦೦ ಕಾಂಪ್ಯಾಕ್ಟರ್ ಗಳ ಅವಶ್ಯಕತೆ ಇದೆ. ಇಷ್ಟು ಪ್ರಮಾಣದ ವಾಹನಗಳಿಗಾಗಿ ಶೀಘ್ರದಲ್ಲಿ ಟೆಂಡರ್ ಆಹ್ವಾನಿಸಲಾಗುತ್ತಿದೆ.

ವಾಹನಗಳಿಗೆ ಜಿಪಿಎಸ್ ಅಳವಡಿಸಲು ಬಿಬಿಎಂಪಿ ಟೆಂಡರ್ ಕರೆದಿದೆ
ಇದೀಗ ಕಸದ ಸಮಸ್ಯೆ ನಿವಾರಣೆಗೆ ತಂತ್ರಜ್ಞಾನದ ಟಚ್ ನೀಡಲಿದ್ದಾರೆ. ಅದರಂತೆ ಕಾಂಪ್ಯಾಕ್ಟರ್ ಮತ್ತು ಆಟೋ ಟಿಪ್ಪರ್ ಗಳಿಗೆ ಜಿಪಿಎಸ್ ಅಳವಡಿಸಲಾಗುತ್ತಿದ್ದು, ಬಿಬಿಎಂಪಿ ಅಧಿಕಾರಿಗಳಿಗೆ ಅವುಗಳ ಮೇಲ್ವಿಚಾರಣೆ ನೀಡಲಾಗುತ್ತಿದೆ. ಆ ಮೂಲಕ ಕಸ ಸಂಗ್ರಹ ಮತ್ತು ವಿಲೇವಾರಿಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪಕ್ಕೆ ತಡೆ ಹಾಕಲು ನಿರ್ಧರಿಸಲಾಗಿದೆ. ಈ ಕುರಿತು ಶೀಘ್ರದಲ್ಲಿ ಕಾಂಪ್ಯಾಕ್ಟರ್ ಮತ್ತು ಆಟೋ ಟಿಪ್ಪರ್ ಗಳಿಗಾಗಿ ಟೆಂಡರ್ ಆಹ್ವಾನಿಸಲಾಗುತ್ತಿದ್ದು, ಆ ವಾಹನಗಳನ್ನು ಒದಗಿಸುವ ಗುತ್ತಿಗೆದಾರರು ಕಡ್ಡಾಯವಾಗಿ ಜಿಪಿಎಸ್ ಅಳವಡಿಸಿರಬೇಕು ಎಂದು ಸೂಚಿಸಲಾಗುತ್ತಿದೆ.

ಕಸ ವಿಲೇವಾರಿಯಲ್ಲಿನ ಅಕ್ರಮ ತಡೆಗೆ ಜಿಪಿಎಸ್
ಇನ್ನು, ಈ ಹಿಂದಿನ ಅಡಿಟ್ ವರದಿಯಲ್ಲಿ ಕಸ ಸಂಗ್ರಹ ಮತ್ತು ವಿಲೇವಾರಿ ಕುರಿತಂತೆ, ಆಕ್ಷೇಪವಾಗಿತ್ತು. ಕಸ ಸಂಗ್ರಹಿಸಿ ಎಲ್ಲೆಂದರಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಜತೆಗೆ, ಕೆಲವರು ಕಸ ಸಂಗ್ರಹಿಸುವುದು ಮತ್ತು ವಿಲೇವಾರಿ ಕಾರ್ಯಗಳನ್ನು ಮಾಡದೆಯೇ ಬಿಲ್ ಪಡೆದಿದ್ದಾರೆ ಎಂದೂ ಆಡಿಟ್ ವರದಿಯಲ್ಲಿ ತಿಳಿಸಲಾಗಿತ್ತು.
ಈ ಅಕ್ರಮಗಳನ್ನು ತಡೆಯಲು ಕಾಂಪ್ಯಾಕ್ಟರ್ ಮತ್ತು ಆಟೋ ಟಿಪ್ಪರ್ ಗಳಿಗೆ ಜಿಪಿಎಸ್ ಅಳವಡಿಸಲಾಗುತ್ತಿದ್ದು ಅದರಿಂದ ವಾಹನಗಳು ಎಷ್ಟು ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿವೆ. ಎಲ್ಲೆಲ್ಲಿ ಕಸ ಸಂಗ್ರಹಿವೆ ಮತ್ತು ಎಲ್ಲಿ ವಿಲೇವಾರಿ ಮಾಡಿವೆ ಎಂಬುದನ್ನುಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.

ಜಿಪಿಎಸ್ ಅಳವಡಿಕೆಗೆ ಸಾಫ್ಟ್ ವೇರ್ ಸಿದ್ಧಗೊಂಡಿದೆ
ವಾಹನಗಳಲ್ಲಿನ ಜಿಪಿಎಸ್ ನ ಸಿಗ್ನಲ್ ಪಡೆಯುವುದು ಹಾಗೂ ಅದರ ಮೇಲೆ ನಿಗಾ ಇಡಲು ಹೊಸ ತಂತ್ರಾಂಶ ಸಿದ್ಧಪಡಿಸಲಾಗಿದೆ. ಅದರ ನಿಯಂತ್ರಣವನ್ನು ಸ್ಥಳೀಯ ಅಧಿಕಾರಿಗಳಿಗೆ ನೀಡಲಾಗುತ್ತದೆ. ಅಲ್ಲದೆ, ಒಟ್ಟು ನಿಯಂತ್ರಣ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಿದ್ಧ ಪಡೆಇಸಲಾಗುತ್ತಿರುವ ಕಂಟ್ರೋಲ್ ರೂಂ ನಲ್ಲಿ ಮಾಡಲಾಗುತ್ತದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications