ಹೊಸಕೋಟೆ; ಪಂಚಾಯಿತಿ ಸಭೆಗೆ ಕರೆಯಲಿಲ್ಲ ಎಂದು ಲಾಂಗ್ನಿಂದ ಹಲ್ಲೆ!
ಬೆಂಗಳೂರು, ಫೆಬ್ರವರಿ 11: ಗ್ರಾಮ ಪಂಚಾಯಿತಿ ಸಭೆಗೆ ಕರೆಯಲಿಲ್ಲ ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಆತನ ಬೆಂಬಲಿಗರು ಲಾಂಗ್ ನಿಂದ ವಾಟರ್ ಮ್ಯಾನ್ ಮೇಲೆ ಹಲ್ಲೆ ನಡೆಸಿದ ಘಟನೆ ಹೊಸಕೋಟೆಯಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಬೈಲನರಸಾಪುರ ಗ್ರಾಮ ಪಂಚಾಯತಿ ಸಭೆ ನಡೆಯುವ ಸಂದರ್ಭದಲ್ಲಿ ಲಾಂಗ್, ಮಚ್ಚುಗಳನ್ನು ಝಳಪಿಸಲಾಗಿದೆ. ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳನ್ನು ಸಭೆಗೆ ಕರೆಯಲಿಲ್ಲ ಎಂದು ರೊಚ್ಚಿಗೆದ್ದ ಕೆಲವರು ಲಾಂಗ್ ನಿಂದ ಹಲ್ಲೆ ಮಾಡಿದ್ದು, ದೂರು, ಪ್ರತಿ ದೂರು ದಾಖಲಾಗಿದೆ.
ಬೈಲನರಸಾಪುರ ಗ್ರಾಮ ಪಂಚಾಯತಿ ಸದಸ್ಯರುಗಳು ಯಾವಾಗ ಸಭೆ ಮಾಡಬೇಕು?, ಯಾವ ಕೆಲಸಗಳನ್ನು ಮಾಡಬೇಕು ಎಂದು ಚರ್ಚಿಸುತ್ತಿದ್ದರು. ಈ ಸಂದರ್ಭದಲ್ಲಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ನಮ್ಮನ್ನು ಕರೆಯದೆ ಮೀಟಿಂಗ್ ಮಾಡುತ್ತಿದ್ದೀರಾ? ಎಂದು ಗಲಾಟೆ ಮಾಡಿದ್ದಾರೆ.

ಈ ವೇಳೆ ಪಿಡಿಓ ಅವರು ಗಲಾಟೆ ಮಾಡುವವರನ್ನು ಹೊರಗೆ ಕಳುಹಿಸಿದ್ದಾರೆ. ಬಳಿಕ ನೀರಿನ ಬಾಟಲ್ ತರಲೆಂದು ವಾಟರ್ ಮ್ಯಾನ್ ಪಂಚಾಯತಿ ಕಚೇರಿಯಿಂದ ಹೊರಗೆ ಹೋದಾಗ ಕೆಲವರು ಲಾಂಗ್ ಹಿಡಿದುಕೊಂಡು ಬಂದಿದ್ದಾರೆ.
ವಾಟರ್ ಮ್ಯಾನ್ ಪಾಜೀಲ್ ಅಹ್ಮದ್ ಅವರ ತಲೆಗೆ ಲಾಂಗ್ ನಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕೈ ಅಡ್ಡಿ ಮಾಡಿದಾಗ ಪಾಜೀಲ್ ಕೈಗೆ ಗಾಯವಾಗಿದೆ. ಹಲ್ಲೆ ಮಾಡಿದ್ದನ್ನು ಪಾಜೀಲ್ ಅಣ್ಣ ಆಗಮಿಸಿ ಪ್ರಶ್ನಿಸಿದಾಗ ಆತನ ಮೇಲೂ ಹಲ್ಲೆ ಮಾಡಲಾಗಿದೆ. ನಂತರ ಇಬ್ಬರೂ ಪಂಚಾಯತಿ ಕಚೇರಿಗೆ ಹೋಗಿ ಪೊಲೀಸರಿಗೆ ಕರೆ ಮಾಡಿದ್ದಾರೆ.
ಹಲ್ಲೆ ನಡೆದ ಬಗ್ಗೆ ಪಾಜೀಲ್ ನಂದಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ದೂರು, ಪ್ರತಿ ದೂರು ದಾಖಲಾಗಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಲಾಂಗ್ ಹಿಡಿದು ಹೋದ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ನಂದಗುಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications