ಒಂದು ತಿಂಗಳ ಹಸುಗೂಸನ್ನು ಕೊಲೆ ಮಾಡಿದ್ದು ಅಜ್ಜಿಯೇ
ಬೆಂಗಳೂರು, ಡಿಸೆಂಬರ್ 26: ಒಂದೂವರೆ ತಿಂಗಳ ಮಗುವಿನ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಮಗುವನ್ನು ಕೊಂದಿದ್ದು ಅಜ್ಜಿ ಎನ್ನುವುದು ತಿಳಿದುಬಂದಿದೆ.
ನೀಲಸಂದ್ರ ನಿವಾಸಿ ಮೃತ ಮಗುವಿನ ಅಜ್ಜಿ ವಿಜಯಲಕ್ಷ್ಮೀ(52) ಬಂಧಿತೆ, ಪುತ್ರ ಕಾರ್ತಿಕ್ ಮತ್ತು ಸೊಸೆ ಸ್ಟೆಲ್ಲಾ ಮೇಲಿನ ದ್ವೇಷಕ್ಕ ಮಗುವನ್ನು ಹತ್ಯೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಆರೋಪಿ ಮಹಿಳೆಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ತಿಕ್ ಮತ್ತು ಸ್ಟೆಲ್ಲಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಪರಸ್ಪರ ಪ್ರೀತಿಸಿ ವಿವಾಹವಾಗಲು ನಿರ್ಧರಿಸಿದ್ದರು. ಅಂತರ್ ಧರ್ಮೀಯ ವಿವಾಹಕ್ಕೆ ಕಾರ್ತಿಕ್ ಪೋಷಕರ ವಿರೋಧವಿತ್ತು. ಪೋಷಕರ ವಿರೋಧದ ನಡುವೆಯೂ ಅವರು ಮದುವೆಯಾಗಿದ್ದರು. ಕಾರ್ತಿಕ್ ಕಳೆದ ಫೆಬ್ರವರಿಯಲ್ಲಿ ಸ್ಟೆಲ್ಲಾ ಅವರನ್ನು ವಿವಾಹವಾಗಿದ್ದ, ಬಳಿಕ ಕಾರ್ತಿಕ್ ಪೋಷಕರೊಂದಿಗೆ ನೆಲೆಸಿದ್ದರು.

ಕಾರ್ತಿಕ್ ಕೂಡ ಕೆಲಸಕ್ಕೆ ಹೋಗದೆ ಮನೆಗೆ ಕುಡಿದು ಬರುತ್ತಿದ್ದ ಸಾಲವನ್ನೂ ಮಾಡಿದ್ದ, ಇದೇ ವಿಚಾರಕ್ಕೆ ಕಾರ್ತಿಕ್ನೊಂದಿಗೆ ಕೂಡ ಪೋಷಕರು ನಿತ್ಯ ಜಗಳವಾಡುತ್ತಿದ್ದರು. ಕೌಟುಂಬಿಕ ಕಲಹ ಹೆಚ್ಚಾದ ಬಳಿಕ ಕಾರ್ತಿಕ್ ಪೋಷಕರು ಪ್ರತ್ಯೇಕವಾಗಿ ನೆಲೆಸಿದ್ದರು. ಈ ನಡುವೆ ಸ್ಟೆಲ್ಲಾ ಅವರಿಗೆ ನ.22ರಂದು ಅವಳಿ ಗಂಡು ಮಕ್ಕಳು ಜನಿಸಿದ್ದವು.
ಡಿ.21ರಂದು ಕಾರ್ತಿಕ್ ಅವರ ಎರಡನೇ ಮಗುವಿಗೆ ಅನಾರೋಗ್ಯ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಮೊದಲ ಮಗುವನ್ನು ತನ್ನ ತಾಯಿಯ ಬಳಿ ಬಿಟ್ಟು, ಪತ್ನಿ ಜೊತೆ ಎರಡನೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.
ಮನೆಗೆ ವಾಪಸ್ ಬಂದಾಗ ಮಗುವಿಗೆ ಹಾಲುಣಿಸಬೇಕೆಂದು ಹೇಳಿದ್ದರು. ಸ್ಟೆಲ್ಲಾ ಹಾಲು ಬಿಸಿ ಮಾಡಿ ಶೌಚಾಲಯಕ್ಕೆ ಹೋಗಿಬರುವಷ್ಟರಲ್ಲಿ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿ ಮಂಚದ ಕೆಳಗೆ ಆಟಿಕೆಗಳ ಮಧ್ಯೆ ಯಾರಿಗೂ ಗೊತ್ತಾಗದಂತೆ ಇರಿಸಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications