ಒಂದು ತಿಂಗಳ ಹಸುಗೂಸನ್ನು ಕೊಲೆ ಮಾಡಿದ್ದು ಅಜ್ಜಿಯೇ
ಬೆಂಗಳೂರು, ಡಿಸೆಂಬರ್ 26: ಒಂದೂವರೆ ತಿಂಗಳ ಮಗುವಿನ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಮಗುವನ್ನು ಕೊಂದಿದ್ದು ಅಜ್ಜಿ ಎನ್ನುವುದು ತಿಳಿದುಬಂದಿದೆ.
ನೀಲಸಂದ್ರ ನಿವಾಸಿ ಮೃತ ಮಗುವಿನ ಅಜ್ಜಿ ವಿಜಯಲಕ್ಷ್ಮೀ(52) ಬಂಧಿತೆ, ಪುತ್ರ ಕಾರ್ತಿಕ್ ಮತ್ತು ಸೊಸೆ ಸ್ಟೆಲ್ಲಾ ಮೇಲಿನ ದ್ವೇಷಕ್ಕ ಮಗುವನ್ನು ಹತ್ಯೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಆರೋಪಿ ಮಹಿಳೆಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ತಿಕ್ ಮತ್ತು ಸ್ಟೆಲ್ಲಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಪರಸ್ಪರ ಪ್ರೀತಿಸಿ ವಿವಾಹವಾಗಲು ನಿರ್ಧರಿಸಿದ್ದರು. ಅಂತರ್ ಧರ್ಮೀಯ ವಿವಾಹಕ್ಕೆ ಕಾರ್ತಿಕ್ ಪೋಷಕರ ವಿರೋಧವಿತ್ತು. ಪೋಷಕರ ವಿರೋಧದ ನಡುವೆಯೂ ಅವರು ಮದುವೆಯಾಗಿದ್ದರು. ಕಾರ್ತಿಕ್ ಕಳೆದ ಫೆಬ್ರವರಿಯಲ್ಲಿ ಸ್ಟೆಲ್ಲಾ ಅವರನ್ನು ವಿವಾಹವಾಗಿದ್ದ, ಬಳಿಕ ಕಾರ್ತಿಕ್ ಪೋಷಕರೊಂದಿಗೆ ನೆಲೆಸಿದ್ದರು.

ಕಾರ್ತಿಕ್ ಕೂಡ ಕೆಲಸಕ್ಕೆ ಹೋಗದೆ ಮನೆಗೆ ಕುಡಿದು ಬರುತ್ತಿದ್ದ ಸಾಲವನ್ನೂ ಮಾಡಿದ್ದ, ಇದೇ ವಿಚಾರಕ್ಕೆ ಕಾರ್ತಿಕ್ನೊಂದಿಗೆ ಕೂಡ ಪೋಷಕರು ನಿತ್ಯ ಜಗಳವಾಡುತ್ತಿದ್ದರು. ಕೌಟುಂಬಿಕ ಕಲಹ ಹೆಚ್ಚಾದ ಬಳಿಕ ಕಾರ್ತಿಕ್ ಪೋಷಕರು ಪ್ರತ್ಯೇಕವಾಗಿ ನೆಲೆಸಿದ್ದರು. ಈ ನಡುವೆ ಸ್ಟೆಲ್ಲಾ ಅವರಿಗೆ ನ.22ರಂದು ಅವಳಿ ಗಂಡು ಮಕ್ಕಳು ಜನಿಸಿದ್ದವು.
ಡಿ.21ರಂದು ಕಾರ್ತಿಕ್ ಅವರ ಎರಡನೇ ಮಗುವಿಗೆ ಅನಾರೋಗ್ಯ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಮೊದಲ ಮಗುವನ್ನು ತನ್ನ ತಾಯಿಯ ಬಳಿ ಬಿಟ್ಟು, ಪತ್ನಿ ಜೊತೆ ಎರಡನೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.
ಮನೆಗೆ ವಾಪಸ್ ಬಂದಾಗ ಮಗುವಿಗೆ ಹಾಲುಣಿಸಬೇಕೆಂದು ಹೇಳಿದ್ದರು. ಸ್ಟೆಲ್ಲಾ ಹಾಲು ಬಿಸಿ ಮಾಡಿ ಶೌಚಾಲಯಕ್ಕೆ ಹೋಗಿಬರುವಷ್ಟರಲ್ಲಿ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿ ಮಂಚದ ಕೆಳಗೆ ಆಟಿಕೆಗಳ ಮಧ್ಯೆ ಯಾರಿಗೂ ಗೊತ್ತಾಗದಂತೆ ಇರಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications