ಮಣ್ಣುತಿಂದ ಮೊಮ್ಮಗಳನ್ನು ನೇಣುಹಾಕಿ ಕೊಂದ ಅಜ್ಜಿ
ಬೆಂಗಳೂರು, ಡಿ.16 : ಮಕ್ಕಳು ತುಂಟಾಟವಾಡಿದರೆ ದೊಡ್ಡವರು ಸಹಿಸಿಕೊಳ್ಳುತ್ತಾರೆ. ಆದರೆ, ಮೊಮ್ಮಗಳ ತುಂಟಾಟಕ್ಕೆ ಸಿಟ್ಟಿಗೆದ್ದ ಅಜ್ಜಿ ಬಾಲಕಿಯನ್ನು ಥಳಿಸಿ, ನೇಣು ಬಿಗಿದು ಕೊಲೆ ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬೈಚಾಪುರದಲ್ಲಿ ನಡೆದಿದೆ.
ಅಜ್ಜಿಯಿಂದ ಕೊಲೆಯಾದ ಬಾಲಕಿಯನ್ನು ದಿವ್ಯಾ (7) ಎಂದು ಗುರುತಿಸಲಾಗಿದೆ. ಮೊಮ್ಮಗಳನ್ನೇ ಕೊಂದ ಅಜ್ಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯ ಮುಂದೆ ಆಟವಾಡುವಾಗ ದಿವ್ಯಾ ಮಣ್ಣು ಬಾಯಿಗೆ ಹಾಕಿಕೊಂಡಳು ಎಂಬ ಕಾರಣಕ್ಕೆ ಅಜ್ಜಿ ಆಕೆಯನ್ನು ಥಳಿಸಿ ಕೊಲೆ ಮಾಡಿದ್ದಾರೆ.

ದಿವ್ಯಾ ಚಿಕ್ಕಪ್ಪ ನೀಡಿದ ದೂರಿನ ಅನ್ವಯ ದೇವನಹಳ್ಳಿ ಪೊಲೀಸರು ಕೊಲೆ ಮಾಡಿದ ಆರೋಪಿ ಅಕ್ಕಯ್ಯಮ್ಮನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಕ್ಕಯ್ಯಮ್ಮನಿಗೆ ಕುಡಿತದ ಚಟವಿತ್ತು ಎಂದು ದಿವ್ಯಾ ಚಿಕ್ಕಪ್ಪ ದೂರಿನಲ್ಲಿ ಪೊಲೀಸರಿಗೆ ತಿಳಿಸಿದ್ದಾರೆ. [ದೇವನಹಳ್ಳಿಯಲ್ಲಿ ಹೆಜ್ಜೇನು ದಾಳಿಗೆ ಇಬ್ಬರು ಬಲಿ]
ದಿವ್ಯಾಳನ್ನು ಚಿಕ್ಕಪ್ಪ ಸಾಕುತ್ತಿದ್ದರು : ದಿವ್ಯಾ ತಂದೆ ಮೂರು ವರ್ಷಗಳ ಹಿಂದೆ ತೀರಿಕೊಂಡಿದ್ದರು. ತಾಯಿ ಶಶಿಕಲಾ ಪತಿಯ ಸಾವಿನ ನಂತರ ಮಗುವನ್ನು ಬಿಟ್ಟು ಊರು ತೊರೆದಿದ್ದರು. ನಂತರ ದಿವ್ಯಾ ಚಿಕ್ಕಪ್ಪ ಗಜೇಂದ್ರ ಅವಳನ್ನು ಸಾಕುತ್ತಿದ್ದರು. ಎರಡೂವರೆ ತಿಂಗಳ ಹಿಂದೆ ದಿವ್ಯಾ ಅಜ್ಜಿಯ ಮನಗೆ ಬಂದಿದ್ದರು.
ಭಾನುವಾರ ಸಂಜೆ ಮನೆ ಎದುರು ಆಟವಾಡುವಾಗ ಸ್ವಲ್ಪ ಮಣ್ಣನ್ನು ದಿವ್ಯಾ ಬಾಯಿಗೆ ಹಾಕಿಕೊಂಡಿದ್ದಳು. ಇದನ್ನು ಕಂಡು ಸಿಟ್ಟಿಗೆದ್ದ ಅಜ್ಜಿ ಅಕ್ಕಯ್ಯಮ್ಮ ಬಾಲಕಿಗೆ ಮನ ಬಂದಂತೆ ಥಳಿಸಿದ್ದಾಳೆ. ನಂತರ ಕೈಗೆ ಸಿಕ್ಕ ಹಗ್ಗದಿಂದ ಬಾಲಕಿಯ ಕುತ್ತಿಗೆ ಬಿಗಿದಿದ್ದಾಳೆ. ಗಜೇಂದ್ರ ಅವರು ರಾತ್ರಿ ಮನೆಗೆ ಬಂದಾಗ ಕೊಲೆಯ ವಿಚಾರ ಬೆಳಕಿಗೆ ಬಂದಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications