HD Revanna: ಜೈಲು ಪಾಲಾಗಿದ್ದ ಎಚ್.ಡಿ.ರೇವಣ್ಣಗೆ ಜಾಮೀನು ಮಂಜೂರು
HD Revanna: ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಮೇ 13) ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ 5 ಲಕ್ಷ ಬಾಂಡ್, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಳಗ್ಗೆಯಿಂದ ಸಂಜೆಯವರೆಗೆ ಕೋರ್ಟ್ ಸುಧೀರ್ಘವಾಗಿ ವಿಚಾರಣೆ ನಡೆಸಿದ್ದು, ವಿಶೇಷ ತನಿಖಾ ತಂಡ ಪರ ವಕೀಲರು ರೇವಣ್ಣ ಪ್ರಭಾವಿ ಆಗಿದ್ದು, ಸಾಕ್ಷ್ಯ ನಾಶ ಮಾಡುವ ಆತಂಕವಿದೆ. ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡಬಾರದು ಎಂದು ವಾದಿಸಿದ್ದರು.
ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆ ವಿಧಿಸುವ ಅಪರಾಧ ಇದ್ದರೆ ಜಾಮೀನು ತಿರಸ್ಕರಿಸಬಹುದು. ಆದರೆ ನನ್ನ ಕಕ್ಷಿದಾರ ಎಚ್.ಡಿ.ರೇವಣ್ಣ ಪ್ರಕರಣದಲ್ಲಿ ಇಲ್ಲಿ ಯಾವುದೇ ಸತ್ಯ ಮತ್ತು ಸಂದರ್ಭಿಕ ಸಾಕ್ಷಿಗಳು ಇಲ್ಲ. ಇನ್ನು ರೇವಣ್ಣ ಅವರ ಮನೆಯಲ್ಲಿ ಮಹಿಳೆ 10 ವರ್ಷ ಕೆಲಸ ಮಾಡಿದ್ದಾರೆ. ಆದ್ದರಿಂದ ಯಾವುದೇ ಅಪಹರಣ ಮಾಡಿಲ್ಲ. ಜಾಮೀನು ನೀಡಬಹುದು ಎಂದು ವಕೀಲ ನಾಗೇಶ್ ವಾದ ಮಂಡಿಸಿದ್ದರು.
ಜಿ.ಟಿ.ದೇವೇಗೌಡ ಹೇಳಿದ್ಮದೇನು?: ತ್ಪತೊಂದೆಡೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡ ಅವರು, ಜೈಲಿಗೆ ಬಂದು ಎಚ್.ಡಿ.ರೇವಣ್ಣ ಅವರ ಆರೋಗ್ಯವನ್ನು ವಿಚಾರಿಸಬೇಕೆಂದು ಮೂರು ದಿನಗಳಿಂದ ಅಂದುಕೊಂಡಿದ್ದೆ. ಭಾನುವಾರ ಬಿಡಲ್ಲ ಎಂದು ಹೇಳಿದ್ದರು.
ಆದ್ದರಿಂದ ಇಂದು ಅನುಮತಿ ಪಡೆದುಕೊಂಡು ರೇವಣ್ಣ ಅವರನ್ನು ಭೇಟಿಯಾದೆ. ಇಬ್ಬರು ಚಹಾ ಕುಡಿದು, ಸ್ಮಾಲ್ಪ ಹೊತ್ತು ಮಾತನಾಡಿದೆವು. ಈ ವೇಳೆ ಅವರು ಹಳೆಯ ಕಥೆಯೆಲ್ಲ ಹೇಳಿದರು. ಇವತ್ತು ಕೂಡ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆಯೇ ಚಿಂತೆ ಮಾಡುತ್ತಿದ್ದಾರೆ ಅಂತಾ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications