ಜುಲೈ 1 ರಿಂದ ವೈನ್ ದರ ಶೇ 177ರಷ್ಟು ಹೆಚ್ಚಳ
ಬೆಂಗಳೂರು, ಜೂನ್ 29: ವೈನ್ ಪ್ರೋತ್ಸಾಹಕ್ಕೆ ಹೆಚ್ಚಿನ ಮಹತ್ವ ನೀಡುವ ಭರವಸೆ ನೀಡಿದ್ದ ಸರಕಾರ, ಇದೀಗ ರಾಜ್ಯದ ದ್ರಾಕ್ಷಿ ಬೆಳೆಗಾರರ ಜೀವನೋಪಾಯಕ್ಕೆ ಹೊಸ ಆಶಾಕಿರಣವನ್ನು ಹುಟ್ಟಿಸಿದ್ದ, ವೈನ್ ಉತ್ಪನ್ನಗಳ ಮೇಲೆ ಶೇಕಡಾ 160 ತೆರಿಗೆಯನ್ನು ಹೆಚ್ಚಿಸುವ ತೀರ್ಮಾನಕ್ಕೆ ಬಂದಿದೆ. ಜೂನ್ 22 ರಂದು ಗೆಜೆಟ್ ಪ್ರಕಟಣೆ ಹೊರಡಿಸಿರುವ ಸರಕಾರ ಕೇವಲ 7 ದಿನಗಳಲ್ಲಿ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ನೀಡಿದ್ದು, ಅಲ್ಲದೆ ಜುಲೈ 1 ರಿಂದ ಈ ತೆರಿಗೆಗಳು ಅನ್ವಯವಾಗಲಿವೆ ಎನ್ನುವ ಎಚ್ಚರಿಕೆಯನ್ನೂ ನೀಡಿದೆ.
ದ್ರಾಕ್ಷಿ ಬೆಳೆಗಾರರು ಹಾಗೂ ವೈನ್ ಉತ್ಪಾದಕರ ಜೊತೆಯಲ್ಲಿ ಯಾವುದೇ ಸಮಾಲೋಚನೆ ನಡೆಸದೆ ಜಾರಿಗೆ ತರಲು ನಿರ್ಧರಿಸಿರುವ ಈ ಅಂಶಕ್ಕೆ ವೈನ್ ಉತ್ಪಾದಕರು ಹಾಗೂ ದ್ರಾಕ್ಷಿ ಬೆಳೆಗಾರರಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ವೈನ್ ಉತ್ಪಾದಕರು ಹಾಗೂ ದ್ರಾಕ್ಷಿ ಬೆಳೆಗಾರರು ರಾಜ್ಯ ಸರಕಾರದ ಈ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಹಾಗೂ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾರೆ. [ಆಹಾರ ಸಂಸ್ಕೃತಿ: ವೈನ್ ಕುಡಿದು ವೈನಾಗಿರಿ!]
ವೈನ್ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ: ಮದ್ಯದ ಅವಲಂಬನೆಯನ್ನು ಕಡಿಮೆ ಮಾಡುವ, ದ್ರಾಕ್ಷಿ ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡುವ ಹಾಗೂ ಮದ್ಯಪಾನಿಗಳ ಆರೋಗ್ಯವನ್ನು ವೃದ್ದಿಸುವ ಮತ್ತು ವೈನ್ ಕುಡಿಯುವ ಸಂಸ್ಕೃತಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಸರಕಾರ ವೈನ್ ನೀತಿಯನ್ನು ಜಾರಿಗೊಳಿಸಿದೆ. [11 ಜಿಲ್ಲೆಗಳಲ್ಲಿ ಸ್ಥಾಪನೆಯಾಗಲಿದೆ ವೈನ್ ಬೋಟಿಕ್]
ಇದುವರೆಗೂ ವೈನ್ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ರಾಜ್ಯದಲ್ಲಿರುವ 11 ವೈನರಿಗಳು ಉತ್ಕೃಷ್ಟ ಗುಣಮಟ್ಟದ ವೈನ್ ತಯಾರಿಸುತ್ತಿದ್ದು ಈ ಮೂಲಕ ರಾಜ್ಯದ ಬಹುತೇಕ ದ್ರಾಕ್ಷಿ ಬೆಳೆಗಾರರಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ.

ಬೆಂಗಳೂರು ದ್ರಾಕ್ಷಿ ಬೆಳೆಗಾರರ ಸಂಘದ ನಾರಾಯಣಸ್ವಾಮಿ: ಯಡಿಯೂರಪ್ಪ ಅವರು, ದ್ರಾಕ್ಷಿ ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ವೈನ್ ಪಾಲಿಸಿಯನ್ನು ಜಾರಿಗೊಳಿಸಿದರು. ಆದರೆ, ಇಂದಿನ ಸರಕಾರ ರೈತರು ಹಾಗೂ ವೈನ್ ಉತ್ಪಾದಕರ ಜೊತೆ ಯಾವುದೇ ಸಮಾಲೋಚನೆ ನಡೆಸದೆ ಒಮ್ಮೆಗೆ ಶೇಕಡಾ 177 ರಷ್ಟು ತೆರಿಗೆಯನ್ನು ಹೆಚ್ಚಿಸಿದ್ದಾರೆ.
ಇದರಿಂದಾಗಿ, ಪ್ರಸ್ತುತ 60,000 ಕೇಸ್ ಗಳಷ್ಟು ಸಾರವರ್ಧಿತ ವೈನ್ ಕರ್ನಾಟಕದಲ್ಲಿ ಮಾರಾಟವಾಗುತ್ತದೆ ಇದು 15,000 ಕೇಸ್ ಗಳಿಗೆ ಕುಸಿಯಲಿದೆ. ಇದು ನೇರವಾಗಿ ಭೌಗೋಳಿಕ ಸ್ಥಾನಮಾನದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವ ಸ್ಥಳೀಯ ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆಗಾರರಿಗೆ ಪರಿಣಾಮ ಬೀರಲಿದೆ.
ಅಂದಾಜು ವಾರ್ಷಿಕ 9,000 ಟನ್ ಗಳಷ್ಟು ಬೆಂಗಳೂರು ಬ್ಲೂ ದ್ರಾಕ್ಷಿ ಬಳಕೆಯಾಗುತ್ತಿದ್ದು, ಇದು 2,250 ಟನ್ ಗಳಿಗೆ ಇಳಿಯಲಿದೆ, ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆಗಾರರು ಸಣ್ಣ ಹಿಡುವಳಿದಾರರಾಗಿದ್ದು, ಇದು ಸಾವಿರಾರು ದ್ರಾಕ್ಷಿ ಬೆಳೆಗಾರರ ಮೇಲೆ ನೇರವಾಗಿ ಪರಿಣಾಮ ಬೀರಲಿದೆ ಎಂದರು. [ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಮದ್ಯ ನಿಷೇಧಿಸಿ!]
ರಾಜ್ಯ ಸರಕಾರದ ಈ ಇಬ್ಬಗೆಯ ನೀತಿಯಿಂದ ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ವೈನ್ ಕುಡಿಯಲು ಪ್ರೋತ್ಸಾಹ ನೀಡಿದ್ದ ಕಾರ್ಯಕ್ರಮಗಳು ಅರ್ಥ ಕಳೆದುಕೊಳ್ಳಲಿವೆ. ವಿಸ್ಕಿ, ಬ್ರಾಂದಿಯಂತಹ ಅನಾರೋಗ್ಯಕೀಡು ಮಾಡುವ ಮದ್ಯಗಳನ್ನು ಕಡಿಮೆ ಮಾಡಬೇಕು ಹಾಗೂ ಆರೋಗ್ಯಕರ ಪೇಯವಾಗಿರುವ ವೈನ್ ಗೆ ಮಹತ್ವ ನೀಡಬೇಕು ಎನ್ನುವ ಉದ್ದೇಶದಿಂದ ಈ ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿತ್ತು.
ಆದರೆ, ತೆರಿಗೆ ಹೆಚ್ಚಳ ಮಾಡುವುದರಿಂದ ಪ್ರತಿ ಬಾಟಲಿನ ಬೆಲೆ ನೂರಾರು ರೂಪಾಯಿಗಳಷ್ಟು ಹೆಚ್ಚಾಗಲಿದ್ದು, ಜನರು ಮತ್ತೆ ತಮ್ಮ ಹಳೆಯ ಅನಾರೋಗ್ಯಕರ ಮದ್ಯದತ್ತ ವಾಲಲಿದ್ದಾರೆ. 6 ತಿಂಗಳ ಹಿಂದೆ ನಡೆದಂತಹ ಸಭೆಯಲ್ಲಿ ಕೇವಲ 20% ರಷ್ಟು ತೆರಿಗೆ ಹೆಚ್ಚಿಸುವ ಭರವಸೆಯನ್ನು ನೀಡಿದ್ದರು. ಆದರೆ, ಯಾವುದೇ ಮುನ್ಸೂಚನೆ ಹಾಗೂ ಸಭೆ ನಡೆಸದೆ ಏಕಾಏಕಿ ನಿರ್ಧಾರವನ್ನು ಪ್ರಕಟಿಸಲಾಗಿರುವುದು ಬಹಳ ಅನ್ಯಾಯ ಎಂದು ವೈನ್ ಉತ್ಪಾದಕರ ಸಂಘದ ಅಧ್ಯಕ್ಷ ಪಿ ಎಲ್ ವೆಂಕಟರಾಮರೆಡ್ಡಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications