Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ!
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಕಟ್ಟಡ ಉಪವಿಧಿಗಳ ತಿದ್ದುಪಡಿಗಾಗಿ ಕರಡು ಅಧಿಸೂಚನೆ ಪ್ರಕಟಿಸಿದೆ. ಮುಂದಿನ 30 ದಿನಗಳಲ್ಲಿ ಆಯಾ ನಗರ ಪಾಲಿಕೆಗಳಲ್ಲಿ ಆಕ್ಷೇಪಣೆ ಹಾಗೂ ಸಲಹೆಗಳನ್ನು ಅವಕಾಶ ಕಲ್ಪಿಸಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಿರುವ ಹಲವಾರು ಕಟ್ಟಡ ನಿರ್ಮಾಣದಾರರ ಸಂಕಷ್ಟವನ್ನು ಪರಿಗಣಿಸಿದೆ. ಕಟ್ಟಡ ನಿರ್ಮಾಣಗಳಲ್ಲಿನ ಉಲ್ಲಂಘನೆ ಮಿತಿಯನ್ನು ಹಾಲಿ ಇರುವ ಶೇ. 5 ರಿಂದ ಶೇ.15ಕ್ಕೆ ಹೆಚ್ಚಿಸಲು ಸರ್ಕಾರವು ಮಹತ್ವಪೂರ್ಣವಾದ ಮತ್ತು ಜನಪರವಾದ ನಿರ್ಧಾರವನ್ನು ಕೈಗೊಂಡಿದೆ.

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಭೂಮಿಯ ಅತೀವವಾದ ಬೆಲೆಯಿಂದ ಮತ್ತು ಹಲವು ಅನಿವಾರ್ಯ ಕಾರಣಗಳಿಂದ ನಿವೇಶನ ಮಾಲೀಕರು ಮಂಜೂರಾತಿ ನಕ್ಷೆಗೆ ವ್ಯತಿರಿಕ್ತವಾಗಿ ಕೆಲವೊಂದು ಬದಲಾವಣೆಗಳೊಂದಿಗೆ ಕಡಿಮೆ ನಡುಜಾಗಗಳನ್ನು ಬಿಟ್ಟು ಹೆಚ್ಚುವರಿ ಕಟ್ಟಡ ನಿರ್ಮಾಣ ಮಾಡಿ ಸಂಕಷ್ಟ ಅನುಭವಿಸುತ್ತಿರುವುದು ಕಂಡು ಬಂದಿರುತ್ತದೆ. ಕಾರಣ ಹಾಲಿ ನಿಯಮಗಳಲ್ಲಿ ಶೇ.5 ರಷ್ಟು ಉಲ್ಲಂಘನೆಗಳನ್ನು ಮಾತ್ರ ಸಕ್ರಮಗೊಳಿಸಲು ಅವಕಾಶ ಇದೆ ಎಂದು ಜಿಬಿಎ ತಿಳಿಸಿದೆ.
ಕಟ್ಟಡ ಉಲ್ಲಂಘನೆ ಪ್ರಮಾಣ ಹೆಚ್ಚಳ
ಬಹುತೇಕ ಕಟ್ಟಡಗಳಲ್ಲಿ ಉಲ್ಲಂಘನೆ ಪ್ರಮಾಣವು ಶೇ.5 ಕ್ಕಿಂತ ಹೆಚ್ಚಾಗಿರುತ್ತದೆ. ಈ ರೀತಿ ನಿರ್ಮಾಣವಾಗಿರುವ ಹಲವಾರು ಕಟ್ಟಡಗಳಿಗೆ ನಗರ ಪಾಲಿಕೆಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ ದೊರೆಯದೇ ಕಟ್ಟಡಗಳಿಗೆ ನೀರು ಸರಬರಾಜು ಹಾಗೂ ವಿದ್ಯುತ್ ಸಂಪರ್ಕ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ, ವಾಸ್ತವಿಕ ಅಂಶಗಳನ್ನು ಮನಗಂಡು ಜನರ ಸಂಕಷ್ಟಕ್ಕೆ ಪರಿಹಾರ ನೀಡಲು ಕಟ್ಟಡ ಉಪವಿಧಿಗಳು 2003ರ ಉಪವಿಧಿ 6ಕ್ಕೆ ತಿದ್ದುಪಡಿ ತಂದು, ಕಟ್ಟಡಗಳ ಉಲ್ಲಂಘನೆ ಮಿತಿಯನ್ನು ಶೇ.5 ರ ಬದಲಾಗಿ ಶೇ.15 ರ ವರೆಗೆ ಹೆಚ್ಚಿಸಲಾಗಿದೆ. ಅದಕ್ಕೆ ದಂಡ ಪಾವತಿಸಿಕೊಂಡು ಕ್ರಮಬದ್ದಗೊಳಿಸಲು ಸರ್ಕಾರವು ತೀರ್ಮಾನಲಾಗಿದೆ.
ನಗರದ ಕಟ್ಟಡ ಉಪವಿಧಿಗಳಿಗೆ ತಿದ್ದುಪಡಿ ತಿದ್ದುಪಡಿಯು ಬೆಂಗಳೂರು ನಗರದ ಕಟ್ಟಡ ನಿರ್ಮಾಣ ಕ್ಷೇತ್ರಕ್ಕೆ ಸರ್ಕಾರವು ಕೈಗೊಂಡಿರುವ ಒಂದು ಮಹತ್ವಪೂರ್ಣವಾದ ಮತ್ತು ಜನಪರ ಕಾಳಜಿಯ ನಿರ್ಧಾರವಾಗಿದೆ. ಇದರ ಹೊರತಾದ ಹೆಚ್ಚುವರಿ ಉಲ್ಲಂಘನೆಗಳ ವಿಚಾರದಲ್ಲಿ ಇನ್ನೂ ಹೆಚ್ಚಿನ ಕಠಿಣ ಅನುಷ್ಠಾನ ಕ್ರಮಗಳನ್ನು ಜಾರಿಗೊಳಿಸುವ ಚಿಂತನೆ ಇದೆ.
ಆನ್ಲೈನ್, ಆಫ್ಲೈನ್ ಸಲಹೆ ನೀಡಲು ಅವಕಾಶ
ಬೆಂಗಳೂರು ನಾಗರಿಕರ ಸಂಕಷ್ಟಗಳನ್ನು ಪರಿಹರಿಸಲು ಕೈಗೊಂಡಿರುವ ನಿರ್ಧಾರ ಇದಾಗಿದೆ. ಈ ತಿದ್ದುಪಡಿ ಉಪವಿಧಿಗಳಲ್ಲಿ ಈಗ ಪ್ರಸ್ತಾಪಿಸಿರುವ ಶೇ.15 ರ ಉಲ್ಲಂಘನೆ ಪ್ರಮಾಣದ ವಿನಾಯಿತಿಯನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಈ ಉಪವಿಧಿಗಳ ಬಗ್ಗೆ ಸಂಬಂಧಪಟ್ಟ ನಗರ ಪಾಲಿಕೆಗಳ ಆಯುಕ್ತರಿಗೆ ಸಲಹೆಗಳು ಇದ್ದಲ್ಲಿ ಏಪ್ರಿಲ್ 30ರೊಳಗೆ ಆಯಾ ಹತ್ತಿರದ ಪಾಲಿಕೆ ಕಚೇರಿಯಲ್ಲಿ ಸಲ್ಲಿಸಬಹುದು.
ಆನ್ಲೈನ್ ಮೂಲಕ ಜಿಬಿಎ ಅಧಿಕೃತ ಜಾಲತಾಣ https://updates.bbmpgov.in/public ಮೂಲಕವು ಸಾರ್ವಜನಿಕರು ಕರಡು ಕಟ್ಟಡ ಉಪವಿಧಿಗಳ ಬಗ್ಗೆ ರಚನಾತ್ಮಕವಾದ ಸಲಹೆ ಸೂಚನೆ ನೀಡುವಂತೆ ಕೋರಿದೆ. ನಿಮ್ಮ ಸಲಹೆ ಸೂಚನೆಗಳನ್ನು ಧನಾತ್ಮಕವಾಗಿ ಪರಿಗಣಿಸಲಾಗುವುದು. ಬಳಿಕ ತೀರ್ಮಾನ ಕೈಗೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ಉಪವಿಧಿಗಳನ್ನು ಅಂತಿಮವಾಗಿ ಹೊರಡಿಸಲಾಗುವುದು ಎಂದು ಜಿಬಿಎ ಪ್ರಕಟಣೆಯಲ್ಲಿ ಗುರುವಾರ ತಿಳಿಸಿದೆ.
-
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Bengaluru: ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲು ಮುಂದಾದ ಜಿಬಿಎ -
Property: ಆಸ್ತಿದಾರರಿಗೆ 2026 ವರ್ಷ ಅದೃಷ್ಟ: ರಿಯಲ್ ಎಸ್ಟೇಟ್ನಲ್ಲಿ ಹೊಸ ಸಂಚಲನ, ಮನೆ ಮಾರಾಟ ಭರ್ಜರಿ ಹೆಚ್ಚಳ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications