ಕ್ಯಾಪ್ಟನ್ ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ
ಬೆಂಗಳೂರು, ಡಿಸೆಂಬರ್ 09: ಸೇನಾ ಹೆಲಿಕಾಪ್ಟರ್ ಪತನದ ಬಳಿಕ ಪವಾಡಸದೃಶದಂತೆ ಬದುಕುಳಿದ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ.
ತಮಿಳುನಾಡಿನ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕೈಕ ಯೋಧ, ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ರನ್ನು ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಅವರ ತಂದೆ ಮಾಹಿತಿ ನೀಡಿದ್ದಾರೆ.
ವರುಣ್ ಸಿಂಗ್ರನ್ನು ಬೆಂಗಳೂರಿಗೆ ಶಿಫ್ಟ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದಿದ್ದಾರೆ. ಹೇಗಿದ್ದಾರೆ ನಿಮ್ಮ ಮಗ ಎಂದು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಈಗಲೇ ಏನೂ ಹೇಳಲಾರೆ. ಯಾವುದೂ ಖಚಿತವಿಲ್ಲ ಎಂದಿದ್ದಾರೆ.

ಘಟನೆ ನಡೆದಾಗ ವರುಣ್ ಸಿಂಗ್ ತಂದೆ ಕೆ.ಪಿ.ಸಿಂಗ್ ಮತ್ತು ಅವರ ಪತ್ನಿ ಇಬ್ಬರೂ ಮುಂಬೈನಲ್ಲಿ, ತಮ್ಮ ಕಿರಿಯ ಮಗ ತನುಜ್ ಮನೆಯಲ್ಲಿ ಇದ್ದರು. ತನುಜ್ ಕೂಡ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿದ್ದಾರೆ.
ನಾನು ಫೋನ್ ಮಾಡಿ ಕೆ.ಪಿ.ಸಿಂಗ್ ಬಳಿ ಮಾತನಾಡಿದ್ದೇನೆ ಎಂದಿದ್ದಾರೆ. ಹಾಗೇ, ಕೆ.ಪಿ.ಸಿಂಗ್ ಅವರಿಗೆ ತಮ್ಮ ಪುತ್ರ ವರುಣ್ ಸಿಂಗ್ ಬಗ್ಗೆ ಹೆಮ್ಮೆಯಿದೆ. ಆತ ಫೈಟರ್ ಮತ್ತು ಈ ಜೀವನ್ಮರಣದ ಹೋರಾಟದಲ್ಲೂ ಗೆದ್ದು ಬರುತ್ತಾನೆ ಎಂಬ ನಂಬಿಕೆಯಿದೆ ಎಂದು ಅವರು ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ತೇಜಸ್ ಏರ್ಕ್ರಾಫ್ಟ್ ಟೆಸ್ಟ್ ಹಾರಾಟ ನಡೆಸುತ್ತಿದ್ದ ವೇಳೆ ಕೂಡ ವರುಣ್ ಸಿಂಗ್ ಜೀವಕ್ಕೆ ಅಪಾಯ ಎದುರಾಗಿತ್ತು. ಅಂದು ಬದುಕಿ ಬಂದಿದ್ದ ಅವರ ಶೌರ್ಯಕ್ಕೆ ತಕ್ಕನಾಗಿ ಶೌರ್ಯಚಕ್ರ ಪ್ರಶಸ್ತಿ ಕೊಟ್ಟು ಪುರಸ್ಕರಿಸಲಾಗಿದೆ.
ತಮಿಳುನಾಡಿನ ಕೂನೂರ್ ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್ ಸಿಂಗ್. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ.
ಪೈಲಟ್ ವರುಣ್ ಅವರು ಶೇ. 45ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿರುವ ಏರ್ಫೋರ್ಸ್ ಕಮಾಂಡ್ ಆಸ್ಪತ್ರೆಗೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆಗಳು ತೀವ್ರವಾಗಿ ನಡೆಯುತ್ತಿವೆ.
ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಹೆಲಿಕಾಪ್ಟರ್ನಲ್ಲಿದ್ದ 14 ಜನರ ಪೈಕಿ CDS ಬಿಪಿನ್ ರಾವತ್ ಸೇರಿ 13 ಜನ ಮೃತಪಟ್ಟಿದ್ದರು.
ಮೃತರ ಹೆಸರುಗಳು:
1. ಸಿಡಿಎಸ್ ಬಿಪಿನ್ ರಾವತ್
2. ಸಿಡಿಎಸ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್
3. ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್
4. ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್
5. ವಿಂಗ್ ಕಮಾಂಡರ್ ಪಿ.ಎಸ್.ಚೌಹಾಣ್
6. ಸ್ಕ್ವಾಡ್ರನ್ ಲೀಡರ್ ಕೆ.ಸಿಂಗ್
7. ಜೂನಿಯರ್ ವಾರಂಟ್ ಆಫೀಸರ್ ದಾಸ್
8. ಜೂನಿಯರ್ ವಾರಂಟ್ ಆಫೀಸರ್ ಪ್ರದೀಪ್ ಎ.
9. ಹವಾಲ್ದಾರ್ ಸತ್ಪಾಲ್ ರೈ,
10. ನಾಯಕ್ ಗುರುಸೇವಕ್ ಸಿಂಗ್
11. ನಾಯಕ್ ಜಿತೇಂದರ್ ಕುಮಾರ್
12. ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್ ಮತ್ತು
13. ಲ್ಯಾನ್ಸ್ ನಾಯಕ್ ಸಾಯಿತೇಜ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications