ಪೊಲೀಸರ ಎಲೆಕ್ಷನ್ ಡ್ಯೂಟಿಗೆ ಹೊಸ ಮಾರ್ಗಸೂಚಿ ರೆಡಿ!
ಬೆಂಗಳೂರು, ಏಪ್ರಿಲ್ 19: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ, ಅಭ್ಯರ್ಥಿಗಳು, ಟಿಕೆಟ್ ಆಕಾಂಕ್ಷಿಗಳು ನಾಗರಿಕರಿಗೆ ಆಮಿಷಗಳನ್ನೊಡ್ಡಲು ಪ್ರಾರಂಭಿದ್ದಾರೆ. ಶಸ್ತ್ರಾಸ್ತ್ರ, ಹಣ, ಮದ್ಯ ಸಾಗಾಟವನ್ನು ನಿಲ್ಇಸುವಂತೆ ಎಲ್ಲೆಂದರಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.
ಇದು ಸಾರ್ವಜನಿಕರ ಜೀವ ಹಾಗೂ ಜೀವನಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ತವ್ಯನಿರತ ಪೊಲೀಸರು ಏನು ಮಾಡಬೇಕು, ಏನು ಮಾಡಬಾರದು ಎಂಬುದರ ಕುರಿತು ಪೊಲೀಸ್ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ರಾಜಕೀಯ ಮುಖಂಡರು ಮತದಾರರ ಓಲೈಕೆಗಾಗಿ ಹಣ, ಮದ್ಯ, ಸೀರೆ, ಕುಕ್ಕರ್, ಚಿನ್ನಾಭರಣ ಇನ್ನಿತರೆ ವಸ್ತುಗಳ ಸಾಗಾಟ ತಡೆಯಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 6 ತಂಡಗಳನ್ನು ರಚಿಸಿ ನಿಯೋಜಿಸಲಾಗಿದೆ.

ಆದರೆ ಎಲ್ಲೆಂದರಲ್ಲಿ, ಹೇಗೆಂದರೆ ಹಾಗೆ ವಾಹನಗಳನ್ನು ತಡೆದು ತಪಾಸಣೆ ಮಾಡಲಾಗುತ್ತಿದೆ. ಹಠಾತ್ತನೆ ವಾಹನಗಳನ್ನು ತಡೆಯುವುದರಿಂದ ಕೆಲವೆಡೆ ಅಪಘಾತ ಸಂಭವಿಸಿ ಜೀವಹಾನಿಯಾಗಿರುವುದರ ಕುರಿತು ದೂರುಗಳು ವರದಿಯಾಗಿವೆ.
ಈ ಹಿನ್ನೆಲೆಯಲ್ಲಿ ಪೊಲೀಸರ ಕರ್ಯ ನಿರ್ವಹಣೆ ಬಗ್ಗೆ ಮಾರ್ಗಸೂಚಿ ಹೊರಡಿಸಿ, ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಬೆಂಗಳೂರು ಚಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ 400 ಚೆಕ್ ಪೋಸ್ಟ್: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 3ರಂತೆ ಬೆಂಗಳೂರು ವ್ಯಾಪ್ತಿಯಲ್ಲಿ ಒಟ್ಟು 400 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಗಡಿ ಭಾಗದಲ್ಲಿ 20 ಚೆಕ್ ಪೋಸ್ಟ್ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಅನುಮಾನಾಸ್ಪದ ವಾಹನಗಳು ಹಾಗೂ ವ್ಯಕ್ತಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಹೊರಗಿನಿಂದ ನಗರಕ್ಕೆ ಬರುವ ಪ್ರತಿಯೊಂದು ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ಮಾಡಲಾಗುತ್ತದೆ. ಪ್ರತಿ ಕ್ಷೇತ್ರಕ್ಕೂ ಒಬ್ಬ ಎಸಿಪಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ.
ಏನು ಮಾಡಬೇಕು: ವಾಹನ ಚೆಕಿಂಗ್ ಪಾಯಿಂಟ್ ನಲ್ಲಿ ಉತ್ತಮ ಬೆಳಕಿನ ವ್ಯವಸ್ಥೆ ಮಾಡಬೇಕು, ತಪಾಸಣೆ ವೇಳೆ ಸಿಬ್ಬಂದಿಗೆ ಗೊಂದಲವಾದರೆ ಅವರಿಗೆ ಹಿರಿಯ ಅಧಿಕಾರಿಗಳ ನೆರವು ನೀಡಬೇಕು, ವಾಹನ ನಿಧಾನಗತಿ ಚಾಲನೆಗಾಗಿ ಜಿಗ್ ಜಾಗ್ ಬ್ಯಾರಿಕೇಡ್ ವ್ಯವಸ್ಥೆ ಅಳವಡಿಸಬೇಕು.
ಏನು ಮಾಡಬಾರದು: ಬೆಳಕಿನ ವ್ಯವಸ್ಥೆ ಇಲ್ಲದ ಕಡೆ ವಾಹನ ತಪಾಸಣೆ ಸ್ಥಳಗಳನ್ನು ಗುರುತಿಸಬಾರದು, ಹಿರಿಯ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಕಾನ್ ಸ್ಟೆಬಲ್ ಗಳು ವಾಹನ ತಪಾಸಣೆ ಮಾಡುವಂತಿಲ್ಲ, ತಪಾಸಣೆ ಮುಗಿದ ಬಳಿಕ ಬ್ಯಾರಿಕೇಡ್ ಗಳನ್ನು ರಸ್ತೆಯ ಎಡಭಾಗದಲ್ಲೇ ಜೋಡಿಸಬಾರದು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications