ಪೊಲೀಸರ ಎಲೆಕ್ಷನ್ ಡ್ಯೂಟಿಗೆ ಹೊಸ ಮಾರ್ಗಸೂಚಿ ರೆಡಿ!
ಬೆಂಗಳೂರು, ಏಪ್ರಿಲ್ 19: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ, ಅಭ್ಯರ್ಥಿಗಳು, ಟಿಕೆಟ್ ಆಕಾಂಕ್ಷಿಗಳು ನಾಗರಿಕರಿಗೆ ಆಮಿಷಗಳನ್ನೊಡ್ಡಲು ಪ್ರಾರಂಭಿದ್ದಾರೆ. ಶಸ್ತ್ರಾಸ್ತ್ರ, ಹಣ, ಮದ್ಯ ಸಾಗಾಟವನ್ನು ನಿಲ್ಇಸುವಂತೆ ಎಲ್ಲೆಂದರಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.
ಇದು ಸಾರ್ವಜನಿಕರ ಜೀವ ಹಾಗೂ ಜೀವನಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ತವ್ಯನಿರತ ಪೊಲೀಸರು ಏನು ಮಾಡಬೇಕು, ಏನು ಮಾಡಬಾರದು ಎಂಬುದರ ಕುರಿತು ಪೊಲೀಸ್ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ರಾಜಕೀಯ ಮುಖಂಡರು ಮತದಾರರ ಓಲೈಕೆಗಾಗಿ ಹಣ, ಮದ್ಯ, ಸೀರೆ, ಕುಕ್ಕರ್, ಚಿನ್ನಾಭರಣ ಇನ್ನಿತರೆ ವಸ್ತುಗಳ ಸಾಗಾಟ ತಡೆಯಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 6 ತಂಡಗಳನ್ನು ರಚಿಸಿ ನಿಯೋಜಿಸಲಾಗಿದೆ.

ಆದರೆ ಎಲ್ಲೆಂದರಲ್ಲಿ, ಹೇಗೆಂದರೆ ಹಾಗೆ ವಾಹನಗಳನ್ನು ತಡೆದು ತಪಾಸಣೆ ಮಾಡಲಾಗುತ್ತಿದೆ. ಹಠಾತ್ತನೆ ವಾಹನಗಳನ್ನು ತಡೆಯುವುದರಿಂದ ಕೆಲವೆಡೆ ಅಪಘಾತ ಸಂಭವಿಸಿ ಜೀವಹಾನಿಯಾಗಿರುವುದರ ಕುರಿತು ದೂರುಗಳು ವರದಿಯಾಗಿವೆ.
ಈ ಹಿನ್ನೆಲೆಯಲ್ಲಿ ಪೊಲೀಸರ ಕರ್ಯ ನಿರ್ವಹಣೆ ಬಗ್ಗೆ ಮಾರ್ಗಸೂಚಿ ಹೊರಡಿಸಿ, ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಬೆಂಗಳೂರು ಚಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ 400 ಚೆಕ್ ಪೋಸ್ಟ್: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 3ರಂತೆ ಬೆಂಗಳೂರು ವ್ಯಾಪ್ತಿಯಲ್ಲಿ ಒಟ್ಟು 400 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಗಡಿ ಭಾಗದಲ್ಲಿ 20 ಚೆಕ್ ಪೋಸ್ಟ್ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಅನುಮಾನಾಸ್ಪದ ವಾಹನಗಳು ಹಾಗೂ ವ್ಯಕ್ತಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಹೊರಗಿನಿಂದ ನಗರಕ್ಕೆ ಬರುವ ಪ್ರತಿಯೊಂದು ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ಮಾಡಲಾಗುತ್ತದೆ. ಪ್ರತಿ ಕ್ಷೇತ್ರಕ್ಕೂ ಒಬ್ಬ ಎಸಿಪಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ.
ಏನು ಮಾಡಬೇಕು: ವಾಹನ ಚೆಕಿಂಗ್ ಪಾಯಿಂಟ್ ನಲ್ಲಿ ಉತ್ತಮ ಬೆಳಕಿನ ವ್ಯವಸ್ಥೆ ಮಾಡಬೇಕು, ತಪಾಸಣೆ ವೇಳೆ ಸಿಬ್ಬಂದಿಗೆ ಗೊಂದಲವಾದರೆ ಅವರಿಗೆ ಹಿರಿಯ ಅಧಿಕಾರಿಗಳ ನೆರವು ನೀಡಬೇಕು, ವಾಹನ ನಿಧಾನಗತಿ ಚಾಲನೆಗಾಗಿ ಜಿಗ್ ಜಾಗ್ ಬ್ಯಾರಿಕೇಡ್ ವ್ಯವಸ್ಥೆ ಅಳವಡಿಸಬೇಕು.
ಏನು ಮಾಡಬಾರದು: ಬೆಳಕಿನ ವ್ಯವಸ್ಥೆ ಇಲ್ಲದ ಕಡೆ ವಾಹನ ತಪಾಸಣೆ ಸ್ಥಳಗಳನ್ನು ಗುರುತಿಸಬಾರದು, ಹಿರಿಯ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಕಾನ್ ಸ್ಟೆಬಲ್ ಗಳು ವಾಹನ ತಪಾಸಣೆ ಮಾಡುವಂತಿಲ್ಲ, ತಪಾಸಣೆ ಮುಗಿದ ಬಳಿಕ ಬ್ಯಾರಿಕೇಡ್ ಗಳನ್ನು ರಸ್ತೆಯ ಎಡಭಾಗದಲ್ಲೇ ಜೋಡಿಸಬಾರದು.
-
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications