ಯಡಿಯೂರಪ್ಪ ಮೇಲೆ ಎಚ್ಡಿಕೆ ಆರೋಪ ಭಾವನಾತ್ಮಕ ಎಂದ ದಿನೇಶ್
ಬೆಂಗಳೂರು,ಸೆ,20: ಮೈತ್ರಿ ಸರ್ಕಾರ ವಿರುದ್ಧ ಇದೇ ಧೋರಣೆ ಮುಂದುವರೆಸಿದರೆ ಬಿಜೆಪಿ ವಿರುದ್ಧ ದಂಗೆ ಏಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಸರ್ಕಾರದ ವಿರುದ್ಧ ಕೆಲಸ ಮಾಡುತ್ತಿದ್ದಾರೆ.
ಅಸ್ಥಿರಗೊಳಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿಂದೆ ಆಪರೇಷನ್ ಕಮಲ ಕಾರ್ಯಾಚರಣೆ ಮಾಡಿದ ಕೆಟ್ಟ ಉದಾಹರಣೆ ಇದೆ. ಇಂತಹ ಸಂದರ್ಭದಲ್ಲಿ ಕುಮಾರ ಸ್ವಾಮಿ ಅವರು ಭಾವನಾತ್ಮಕವಾಗಿ ಹೀಗೆ ಹೇಳಿರಬಹುದು. ಇದರಲ್ಲಿ ತಪ್ಪು ಹುಡುಕುವ ಅಗತ್ಯವಿಲ್ಲ ಎಂದರು.
ಮೈತ್ರಿ ಸರ್ಕಾರದ ವಿರುದ್ಧ ರಾಜಕೀಯ ಬೆಳವಣಿಗೆಗಳನ್ನಿಟ್ಟುಕೊಂಡು ಹಾಗೂ ಬಿಜೆಪಿ ವಕ್ತಾರರಂತೆ ಕೆಲವು ಸುದ್ದಿವಾಹಿಗಳು ವರ್ತಿಸುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭಿರ ಆರೋಪ ಮಾಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪರವಾಗಿ ಹಾಗೂ ಕಾಂಗ್ರೆಸ್ ವಿರುದ್ಧ ತೇಜೋವಧೆ ಮಾಡುತ್ತಿರುವ ವಾಹಿನಿಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಬೇಕಾದೀತು ಎಂದು ಅವರು ನೇರವಾಗಿ ಎಚ್ಚರಿಕೆ ನೀಡಿದ್ದಾರೆ.
ಕೆಲವು ಸುದ್ದಿ ವಾಹಿನಿಗಳು ಪತ್ರಿಕೋದ್ಯಮದ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿವೆ. ಊಹಾಪೋಹದ ಸುದ್ದಿಗಳನ್ನು ಹರಡುವ ಕೆಲಸ ಮಾಡುತ್ತಿವೆ. ಬಿಜೆಪಿಯ ಅಣತಿಯಂತೆ ಕಾರ್ಯನಿರ್ವಹಿಸುತ್ತಿವೆ. ಮೈತ್ರಿ ಸರ್ಕಾರವನ್ನು ಹತ್ತಿಕ್ಕಲು ಬಿಜೆಪಿ ಜತೆ ಕೈಜೋಡಿಸಿವೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರುವುದಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಯಡಿಯೂರಪ್ಪ ಮನೆ ಮುಂದೆ ಪ್ರತಿಭಟನೆ ಸರಿಯಲ್ಲ
ಯುವ ಕಾಂಗ್ರೆಸ್ ಕಾರ್ಯಕರ್ತರು ಯಡಿಯೂರಪ್ಪ ಮನೆ ಮುಂದೆ ಪ್ರತಿಭಟನೆ ನಡೆಸಿದ್ದು ಸರಿಯಲ್ಲ. ಇದನ್ನು ಪಕ್ಷ ಒಪ್ಪುವುದಿಲ್ಲ. ಯಾರದೇ ಮನೆಯ ಮುಂದೆ ಪ್ರತಿಭಟನೆ ಮಾಡುವುದನ್ನು ಪಕ್ಷ ಒಪ್ಪುವುದಿಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರ ಮೇಲೆ ಎಚ್ಡಿಕೆ ಹೇಳಿಕೆ ಭಾವನಾತ್ಮಕವಾದದ್ದು
ಮೈತ್ರಿ ಸರ್ಕಾರ ವಿರುದ್ಧ ಇದೇ ಧೋರಣೆ ಮುಂದುವರೆಸಿದರೆ ಬಿಜೆಪಿ ವಿರುದ್ಧ ದಂಗೆ ಏಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಸರ್ಕಾರದ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅಸ್ಥಿರಗೊಳಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿಂದೆ ಆಪರೇಷನ್ ಕಮಲ ಕಾರ್ಯಾಚರಣೆ ಮಾಡಿದ ಕೆಟ್ಟ ಉದಾಹರಣೆ ಇದೆ. ಇಂತಹ ಸಂದರ್ಭದಲ್ಲಿ ಕುಮಾರ ಸ್ವಾಮಿ ಅವರು ಭಾವನಾತ್ಮಕವಾಗಿ ಹೀಗೆ ಹೇಳಿರಬಹುದು. ಇದರಲ್ಲಿ ತಪ್ಪು ಹುಡುಕುವ ಅಗತ್ಯವಿಲ್ಲ ಎಂದರು.

ರೆಸಾರ್ಟ್ ರಾಜಕಾರಣ ನಡೆದೇ ಇಲ್ಲ ಎಂದು ದಿನೇಶ್
ಮುಖ್ಯಾಂಶಗಳಲ್ಲಿ ಸರ್ಕಾರ ಅಪಾಯದಲ್ಲಿದೆ. ಇಂತಿಷ್ಟು ಶಾಸಕರು ರಾಜೀನಾಮೆ ನೀಡಲಿದ್ದಾರೆ. ಮುಂಬೈ ತೆರಳಲಿದ್ದಾರೆ. ರೆಸಾರ್ಟ್ಸ್ ರಾಜಕಾರಣದಲ್ಲಿ ತೊಡಗಿದ್ದಾರೆ ಎಂಬ ಸುದ್ದಿಗಳನ್ನು ಮುಖ್ಯಾಂಶದಲ್ಲಿ ಬಿತ್ತರಿಸುತ್ತವೆ. ಆದರೆ ಸುದ್ದಿಯ ತಿರುಳಿನಲ್ಲಿ ಯಾವುದೇ ಮಾಹಿತಿ ಇರುವುದಿಲ್ಲ. ಹೀಗೆ ಜನರನ್ನು ದಾರಿ ತಪ್ಪಿಸಿ, ಆಡಳಿತ ವೈಖರಿಯ ಮೇಲೆ ಪರಿಣಾಮ ಬೀರುವಂತೆ ವರದಿ ಮಾಡುತ್ತಿವೆ ಎಂದರು.

ಅಸ್ಥಿರ ಪರಿಸ್ಥಿತಿ ನಿರ್ಮಾಣದಿಂದ ಆಡಳಿಯಂತ್ರ ಹಳಿ ತಪ್ಪುತ್ತದೆ
ಅಸ್ಥಿರ ಪರಿಸ್ಥಿತಿ ನಿರ್ಮಿಸುವುದರಿಂದ ಆಡಳಿತ ಯಂತ್ರ ಹಳಿ ತಪ್ಪುತ್ತದೆ. ಸಾಕಷ್ಟು ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಇದರಿಂದ ಆಗುವ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆಯೇ ಇಲ್ಲದೇ ವರದಿ ಮಾಡುತ್ತಿವೆ. ಇಂತಹ ವಾಹಿನಿಗಳ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಲಾಗಿದೆ ಎಂದು ಆಪಾದಿಸಿದರು.

ಸತ್ಯ ಸಂಗತಿ ವರದಿಗೆ ಯಾವುದೇ ಅಭ್ಯಂತರವಿಲ್ಲ
ಸತ್ಯ ಸಂಗತಿ ವರದಿ ಮಾಡಿದರೆ ನಮ್ಮ ಯಾವುದೇ ಅಭ್ಯಂತರವಿಲ್ಲ. ತಪ್ಪು ಮಾಡಿದಾಗ ಎಚ್ಚರಿಸಿ, ನಮ್ಮ ಜಾತಕವನ್ನು ಬಯಲಿಗೆ ತನ್ನಿ. ಆದರೆ ಏನೂ ಇಲ್ಲದೇ ಸುಖಾ ಸುಮ್ಮನೆ ವರದಿಗಳನ್ನು ಮಾಡುವುದು ಸರಿಯಲ್ಲ. ಆದರೆ ಇಪ್ಪತ್ತು ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡುತ್ತಾರೆ ಎಂದು ಇಂದು ವರದಿ ಮಾಡಲಾಗಿದೆ. ಯಾವ ಶಾಸಕರು, ಯಾವಾಗ ಭೇಟಿ ಮಾಡುತ್ತಾರೆ ಎನ್ನುವ ವಿವರಗಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇದೆ ಎಂದು ಹೇಳುವುದಿಲ್ಲ
ಹಾಗೆಂದು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿದೆ ಎಂದು ನಾನು ಹೇಳುವುದಿಲ್ಲ. ನಮ್ಮಲ್ಲೂ ಸಣ್ಣಪುಟ್ಟ ಸಮಸ್ಯೆಗಳಿವೆ. ಅವುಗಳಿಗೆ ಪರಿಹಾರ ಕಂಡುಕೊಂಡಿದ್ದೇವೆ. ಇನ್ನೂ ಸಣ್ಣ ಪುಟ್ಟ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತೇವೆ. ಆದರೆ ನಮ್ಮ ಸಮಸ್ಯೆಗಳು ಹತ್ತಿಪ್ಪತ್ತು ಶಾಸಕರು ರಾಜೀನಾಮೆ ನೀಡುವ ಮಟ್ಟದಲ್ಲಿಲ್ಲ. ಸರ್ಕಾರ ಪತನವಾಗುಷ್ಟು ಗಂಭೀರವಾಗಿಲ್ಲ. ಜಾರಕಿಹೊಳಿ ಸಹೋದರರು ತಾವು ಪಕ್ಷ ತೊರೆಯುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications