ಯಡಿಯೂರಪ್ಪ ಮೇಲೆ ಎಚ್ಡಿಕೆ ಆರೋಪ ಭಾವನಾತ್ಮಕ ಎಂದ ದಿನೇಶ್
ಬೆಂಗಳೂರು,ಸೆ,20: ಮೈತ್ರಿ ಸರ್ಕಾರ ವಿರುದ್ಧ ಇದೇ ಧೋರಣೆ ಮುಂದುವರೆಸಿದರೆ ಬಿಜೆಪಿ ವಿರುದ್ಧ ದಂಗೆ ಏಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಸರ್ಕಾರದ ವಿರುದ್ಧ ಕೆಲಸ ಮಾಡುತ್ತಿದ್ದಾರೆ.
ಅಸ್ಥಿರಗೊಳಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿಂದೆ ಆಪರೇಷನ್ ಕಮಲ ಕಾರ್ಯಾಚರಣೆ ಮಾಡಿದ ಕೆಟ್ಟ ಉದಾಹರಣೆ ಇದೆ. ಇಂತಹ ಸಂದರ್ಭದಲ್ಲಿ ಕುಮಾರ ಸ್ವಾಮಿ ಅವರು ಭಾವನಾತ್ಮಕವಾಗಿ ಹೀಗೆ ಹೇಳಿರಬಹುದು. ಇದರಲ್ಲಿ ತಪ್ಪು ಹುಡುಕುವ ಅಗತ್ಯವಿಲ್ಲ ಎಂದರು.
ಮೈತ್ರಿ ಸರ್ಕಾರದ ವಿರುದ್ಧ ರಾಜಕೀಯ ಬೆಳವಣಿಗೆಗಳನ್ನಿಟ್ಟುಕೊಂಡು ಹಾಗೂ ಬಿಜೆಪಿ ವಕ್ತಾರರಂತೆ ಕೆಲವು ಸುದ್ದಿವಾಹಿಗಳು ವರ್ತಿಸುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭಿರ ಆರೋಪ ಮಾಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪರವಾಗಿ ಹಾಗೂ ಕಾಂಗ್ರೆಸ್ ವಿರುದ್ಧ ತೇಜೋವಧೆ ಮಾಡುತ್ತಿರುವ ವಾಹಿನಿಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಬೇಕಾದೀತು ಎಂದು ಅವರು ನೇರವಾಗಿ ಎಚ್ಚರಿಕೆ ನೀಡಿದ್ದಾರೆ.
ಕೆಲವು ಸುದ್ದಿ ವಾಹಿನಿಗಳು ಪತ್ರಿಕೋದ್ಯಮದ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿವೆ. ಊಹಾಪೋಹದ ಸುದ್ದಿಗಳನ್ನು ಹರಡುವ ಕೆಲಸ ಮಾಡುತ್ತಿವೆ. ಬಿಜೆಪಿಯ ಅಣತಿಯಂತೆ ಕಾರ್ಯನಿರ್ವಹಿಸುತ್ತಿವೆ. ಮೈತ್ರಿ ಸರ್ಕಾರವನ್ನು ಹತ್ತಿಕ್ಕಲು ಬಿಜೆಪಿ ಜತೆ ಕೈಜೋಡಿಸಿವೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರುವುದಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಯಡಿಯೂರಪ್ಪ ಮನೆ ಮುಂದೆ ಪ್ರತಿಭಟನೆ ಸರಿಯಲ್ಲ
ಯುವ ಕಾಂಗ್ರೆಸ್ ಕಾರ್ಯಕರ್ತರು ಯಡಿಯೂರಪ್ಪ ಮನೆ ಮುಂದೆ ಪ್ರತಿಭಟನೆ ನಡೆಸಿದ್ದು ಸರಿಯಲ್ಲ. ಇದನ್ನು ಪಕ್ಷ ಒಪ್ಪುವುದಿಲ್ಲ. ಯಾರದೇ ಮನೆಯ ಮುಂದೆ ಪ್ರತಿಭಟನೆ ಮಾಡುವುದನ್ನು ಪಕ್ಷ ಒಪ್ಪುವುದಿಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರ ಮೇಲೆ ಎಚ್ಡಿಕೆ ಹೇಳಿಕೆ ಭಾವನಾತ್ಮಕವಾದದ್ದು
ಮೈತ್ರಿ ಸರ್ಕಾರ ವಿರುದ್ಧ ಇದೇ ಧೋರಣೆ ಮುಂದುವರೆಸಿದರೆ ಬಿಜೆಪಿ ವಿರುದ್ಧ ದಂಗೆ ಏಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಸರ್ಕಾರದ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅಸ್ಥಿರಗೊಳಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿಂದೆ ಆಪರೇಷನ್ ಕಮಲ ಕಾರ್ಯಾಚರಣೆ ಮಾಡಿದ ಕೆಟ್ಟ ಉದಾಹರಣೆ ಇದೆ. ಇಂತಹ ಸಂದರ್ಭದಲ್ಲಿ ಕುಮಾರ ಸ್ವಾಮಿ ಅವರು ಭಾವನಾತ್ಮಕವಾಗಿ ಹೀಗೆ ಹೇಳಿರಬಹುದು. ಇದರಲ್ಲಿ ತಪ್ಪು ಹುಡುಕುವ ಅಗತ್ಯವಿಲ್ಲ ಎಂದರು.

ರೆಸಾರ್ಟ್ ರಾಜಕಾರಣ ನಡೆದೇ ಇಲ್ಲ ಎಂದು ದಿನೇಶ್
ಮುಖ್ಯಾಂಶಗಳಲ್ಲಿ ಸರ್ಕಾರ ಅಪಾಯದಲ್ಲಿದೆ. ಇಂತಿಷ್ಟು ಶಾಸಕರು ರಾಜೀನಾಮೆ ನೀಡಲಿದ್ದಾರೆ. ಮುಂಬೈ ತೆರಳಲಿದ್ದಾರೆ. ರೆಸಾರ್ಟ್ಸ್ ರಾಜಕಾರಣದಲ್ಲಿ ತೊಡಗಿದ್ದಾರೆ ಎಂಬ ಸುದ್ದಿಗಳನ್ನು ಮುಖ್ಯಾಂಶದಲ್ಲಿ ಬಿತ್ತರಿಸುತ್ತವೆ. ಆದರೆ ಸುದ್ದಿಯ ತಿರುಳಿನಲ್ಲಿ ಯಾವುದೇ ಮಾಹಿತಿ ಇರುವುದಿಲ್ಲ. ಹೀಗೆ ಜನರನ್ನು ದಾರಿ ತಪ್ಪಿಸಿ, ಆಡಳಿತ ವೈಖರಿಯ ಮೇಲೆ ಪರಿಣಾಮ ಬೀರುವಂತೆ ವರದಿ ಮಾಡುತ್ತಿವೆ ಎಂದರು.

ಅಸ್ಥಿರ ಪರಿಸ್ಥಿತಿ ನಿರ್ಮಾಣದಿಂದ ಆಡಳಿಯಂತ್ರ ಹಳಿ ತಪ್ಪುತ್ತದೆ
ಅಸ್ಥಿರ ಪರಿಸ್ಥಿತಿ ನಿರ್ಮಿಸುವುದರಿಂದ ಆಡಳಿತ ಯಂತ್ರ ಹಳಿ ತಪ್ಪುತ್ತದೆ. ಸಾಕಷ್ಟು ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಇದರಿಂದ ಆಗುವ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆಯೇ ಇಲ್ಲದೇ ವರದಿ ಮಾಡುತ್ತಿವೆ. ಇಂತಹ ವಾಹಿನಿಗಳ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಲಾಗಿದೆ ಎಂದು ಆಪಾದಿಸಿದರು.

ಸತ್ಯ ಸಂಗತಿ ವರದಿಗೆ ಯಾವುದೇ ಅಭ್ಯಂತರವಿಲ್ಲ
ಸತ್ಯ ಸಂಗತಿ ವರದಿ ಮಾಡಿದರೆ ನಮ್ಮ ಯಾವುದೇ ಅಭ್ಯಂತರವಿಲ್ಲ. ತಪ್ಪು ಮಾಡಿದಾಗ ಎಚ್ಚರಿಸಿ, ನಮ್ಮ ಜಾತಕವನ್ನು ಬಯಲಿಗೆ ತನ್ನಿ. ಆದರೆ ಏನೂ ಇಲ್ಲದೇ ಸುಖಾ ಸುಮ್ಮನೆ ವರದಿಗಳನ್ನು ಮಾಡುವುದು ಸರಿಯಲ್ಲ. ಆದರೆ ಇಪ್ಪತ್ತು ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡುತ್ತಾರೆ ಎಂದು ಇಂದು ವರದಿ ಮಾಡಲಾಗಿದೆ. ಯಾವ ಶಾಸಕರು, ಯಾವಾಗ ಭೇಟಿ ಮಾಡುತ್ತಾರೆ ಎನ್ನುವ ವಿವರಗಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇದೆ ಎಂದು ಹೇಳುವುದಿಲ್ಲ
ಹಾಗೆಂದು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿದೆ ಎಂದು ನಾನು ಹೇಳುವುದಿಲ್ಲ. ನಮ್ಮಲ್ಲೂ ಸಣ್ಣಪುಟ್ಟ ಸಮಸ್ಯೆಗಳಿವೆ. ಅವುಗಳಿಗೆ ಪರಿಹಾರ ಕಂಡುಕೊಂಡಿದ್ದೇವೆ. ಇನ್ನೂ ಸಣ್ಣ ಪುಟ್ಟ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತೇವೆ. ಆದರೆ ನಮ್ಮ ಸಮಸ್ಯೆಗಳು ಹತ್ತಿಪ್ಪತ್ತು ಶಾಸಕರು ರಾಜೀನಾಮೆ ನೀಡುವ ಮಟ್ಟದಲ್ಲಿಲ್ಲ. ಸರ್ಕಾರ ಪತನವಾಗುಷ್ಟು ಗಂಭೀರವಾಗಿಲ್ಲ. ಜಾರಕಿಹೊಳಿ ಸಹೋದರರು ತಾವು ಪಕ್ಷ ತೊರೆಯುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
-
2nd PUC 'ವಾಣಿಜ್ಯ' ವಿಭಾಗದಲ್ಲಿ ಶೇ.88.4ರಷ್ಟು ಸಾಧನೆ: ಇಬ್ಬರಿಗೆ 600ಕ್ಕೆ 600 ಅಂಕ, ಇವರೇ ಟಾಪರ್ಸ್ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ












Click it and Unblock the Notifications