ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳಿಂದ ಅಲಂಕಾರ
ಬೆಂಗಳೂರು ಜುಲೈ 22: ಕೊರೊನಾ ಸಾಂಕ್ರಾಮಿಕ ರೋಗ ಎಲ್ಲರನ್ನು ಹೈರಾಣಾಗಿಸಿದೆ. ಮೂರನೇ ಅಲೆಗೆ ಜನರನ್ನು ಸಿದ್ದಗೊಳಿಸಬೇಕು ಹಾಗೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಬೇಕು ಎನ್ನುವ ಹಿನ್ನಲೆಯಲ್ಲಿ, ಜೆ.ಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳನ್ನು ಬಳಸಿ ವಿಶೇಷ ಅಲಂಕಾರವನ್ನು ಮಾಡಲಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಟದಲ್ಲಿ ಪ್ರಮುಖವಾಗಿ ಬಳಕೆ ಆಗಿರುವಂತಹ ವಸ್ತುಗಳಾದ ಮಾಸ್ಕ್, ಪ್ಯಾರಾಸಿಟಮಾಲ್, ವಿಟಮಿನ್ ಸಿ, ಆಲ್ಕಾಫ್, ಬಿ ಕಾಂಫ್ಲೆಕ್ಸ್ ನಂತಹ ಮಾತ್ರೆಗಳನ್ನೇ ಬಳಸಿಕೊಂಡು ಬೇರೆ ಯಾರೂ ಮಾಡದಂತಹ ವಿಶಿಷ್ಟವಾದ ಆಲಂಕಾರವನ್ನು ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ ಮಾಡಲಾಗಿದೆ.

ದೇವಸ್ಥಾನದಲ್ಲಿ ಫಲ ಪುಷ್ಪಗಳನ್ನು ಬಳಸಿಕೊಂಡು ವಿಶೇಷ ಅಲಂಕಾರ ಮಾಡುವುದು ಸಾಮಾನ್ಯ. ಅಂತಹ ಸಾಮಗ್ರಿಗಳನ್ನು ಬಳಸಿಕೊಂಡು ಮಾಡುವ ಆಲಂಕಾರದಲ್ಲಿ ಬಳಸಲಾಗಿರುವ ವಸ್ತುಗಳನ್ನು ಮತ್ತೊಮ್ಮೆ ಉಪಯೋಗಿಸಲು ಸಾಧ್ಯವಿಲ್ಲ.
ಅಪಾರ ವೆಚ್ಚ ಮಾಡಿ ಮಾಡುವ ಆಲಂಕಾರ ಜನರಿಗೆ ಉಪಯೋಗವಾಗುವಂತಿರಬೇಕು ಹಾಗೂ ವಿಭಿನ್ನವಾಗಿರಬೇಕು ಎನ್ನುವ ಉದ್ದೇಶದಿಂದ ಕರೋನಾ ವಿರುದ್ದದ ಹೋರಾಟದಲ್ಲಿ ಪ್ರಮುಖವಾಗಿ ಬಳಸಲಾಗುತ್ತಿರುವ ವಸ್ತುಗಳನ್ನು ಬಳಸಿಕೊಂಡು ಆಲಂಕಾರ ಮಾಡಲಾಗಿದೆ. ಈ ಆಲಂಕಾರದಲ್ಲಿ ಬಳಸಿಕೊಂಡಿರುವ ಎಲ್ಲಾ ಔಷದ ಹಾಗೂ ರೇಷನ್ ಕಿಟ್ ನ ಪದಾರ್ಥಗಳನ್ನು ಮಾನವರು, ಹಸುಗಳು ಹಾಗೂ ನಾಯಿಗಳಿಗೆ ದಾನದ ರೂಪದಲ್ಲಿ ನೀಡಲಾಗುತ್ತದೆ.

ಆಲಂಕಾರದಲ್ಲಿ ಬಳಸಲಾಗಿರುವ ವಸ್ತುಗಳು:
ಮಾತ್ರೆಗಳು ಒಟ್ಟು 3,00,000 (3 ಲಕ್ಷ ಮಾತ್ರೆಗಳು)
- ಡೋಲೋ 650
- ವಿಟಮಿನ್ ಸಿ ಮಾತ್ರೆಗಳು
- ಕಾಫ್ಸಿಲ್ ಮಾತ್ರೆಗಳು
- ಬಿ ಕಾಂಪ್ಲೆಕ್ಸ್ ಮಾತ್ರೆಗಳು
- ಪ್ಯಾರಸಿಟಮಾಲ್
- ಈಸಿಬ್ರೀಥ್
2 ಸಾವಿರ ಕ್ಕೂ ಹೆಚ್ಚು ಸ್ಯಾನಿಟೈಸರ್ ಮಾತ್ರೆಗಳು
10 ಸಾವಿರ 8 ವಿವಿಧ ಬಣ್ಣದ ಮಾಸ್ಕ್ಗಳು
3 ಸಾವಿರಕ್ಕೂ ಹೆಚ್ಚು ಮೆಡಿಮಿಕ್ಸ್ ಹಾಗೂ ಡೆಟಾಲ್ ಸೋಪುಗಳು
500 ಕ್ಕೂ ಹೆಚ್ಚು ಟೆನ್ನಿಸ್ ಬಾಲ್

ರೇಷನ್ ಕಿಟ್ ವಸ್ತುಗಳಾದ ಅಕ್ಕಿ, ಬೇಳೆ ಗೋಧಿ ಹಿಟ್ಟು, ಮೈದಾ ಹಿಟ್ಟು, ಸಕ್ಕರೆ, ಉಪ್ಪು, ರವೆ, ಎಣ್ಣೆ, ಈರುಳ್ಳಿ, ಮೆಕ್ಕೆ ಜೋಳ, ಬಿಸ್ಕತ್, ತೆಂಗಿನಕಾಯಿ.

ಈ ಎಲ್ಲಾ ಸಾಮಗ್ರಿಗಳನ್ನು ಪ್ರಸಾದದ ರೂಪದಲ್ಲಿ ಅಗತ್ಯವಿರುವ ಜನರಿಗೆ ಹಂಚಲಾಗುವುದು. ಜುಲೈ 24 ರಿಂದ ಒಂದು ವಾರಗಳ ಕಾಲ ಈ ಆಲಂಕಾರ ವಿರಲಿದ್ದು ನಂತರ ಇದನ್ನು ಬಡಜನರಿಗೆ ಉಚಿತವಾಗಿ ಹಂಚಲಾಗುವುದು ಎಂದು ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಟ್ರಸ್ಟಿ ರಾಮ್ ಮೋಹನ ರಾಜ್ ತಿಳಿಸಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications