Get Updates
Get notified of breaking news, exclusive insights, and must-see stories!

ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳಿಂದ ಅಲಂಕಾರ

ಬೆಂಗಳೂರು ಜುಲೈ 22: ಕೊರೊನಾ ಸಾಂಕ್ರಾಮಿಕ ರೋಗ ಎಲ್ಲರನ್ನು ಹೈರಾಣಾಗಿಸಿದೆ. ಮೂರನೇ ಅಲೆಗೆ ಜನರನ್ನು ಸಿದ್ದಗೊಳಿಸಬೇಕು ಹಾಗೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಬೇಕು ಎನ್ನುವ ಹಿನ್ನಲೆಯಲ್ಲಿ, ಜೆ.ಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳನ್ನು ಬಳಸಿ ವಿಶೇಷ ಅಲಂಕಾರವನ್ನು ಮಾಡಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಟದಲ್ಲಿ ಪ್ರಮುಖವಾಗಿ ಬಳಕೆ ಆಗಿರುವಂತಹ ವಸ್ತುಗಳಾದ ಮಾಸ್ಕ್‌, ಪ್ಯಾರಾಸಿಟಮಾಲ್‌, ವಿಟಮಿನ್‌ ಸಿ, ಆಲ್ಕಾಫ್‌, ಬಿ ಕಾಂಫ್ಲೆಕ್ಸ್‌ ನಂತಹ ಮಾತ್ರೆಗಳನ್ನೇ ಬಳಸಿಕೊಂಡು ಬೇರೆ ಯಾರೂ ಮಾಡದಂತಹ ವಿಶಿಷ್ಟವಾದ ಆಲಂಕಾರವನ್ನು ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ ಮಾಡಲಾಗಿದೆ.

Guru Poornima: Ganesha with 3 lakh medicine decoration

ದೇವಸ್ಥಾನದಲ್ಲಿ ಫಲ ಪುಷ್ಪಗಳನ್ನು ಬಳಸಿಕೊಂಡು ವಿಶೇಷ ಅಲಂಕಾರ ಮಾಡುವುದು ಸಾಮಾನ್ಯ. ಅಂತಹ ಸಾಮಗ್ರಿಗಳನ್ನು ಬಳಸಿಕೊಂಡು ಮಾಡುವ ಆಲಂಕಾರದಲ್ಲಿ ಬಳಸಲಾಗಿರುವ ವಸ್ತುಗಳನ್ನು ಮತ್ತೊಮ್ಮೆ ಉಪಯೋಗಿಸಲು ಸಾಧ್ಯವಿಲ್ಲ.

ಅಪಾರ ವೆಚ್ಚ ಮಾಡಿ ಮಾಡುವ ಆಲಂಕಾರ ಜನರಿಗೆ ಉಪಯೋಗವಾಗುವಂತಿರಬೇಕು ಹಾಗೂ ವಿಭಿನ್ನವಾಗಿರಬೇಕು ಎನ್ನುವ ಉದ್ದೇಶದಿಂದ ಕರೋನಾ ವಿರುದ್ದದ ಹೋರಾಟದಲ್ಲಿ ಪ್ರಮುಖವಾಗಿ ಬಳಸಲಾಗುತ್ತಿರುವ ವಸ್ತುಗಳನ್ನು ಬಳಸಿಕೊಂಡು ಆಲಂಕಾರ ಮಾಡಲಾಗಿದೆ. ಈ ಆಲಂಕಾರದಲ್ಲಿ ಬಳಸಿಕೊಂಡಿರುವ ಎಲ್ಲಾ ಔಷದ ಹಾಗೂ ರೇಷನ್‌ ಕಿಟ್‌ ನ ಪದಾರ್ಥಗಳನ್ನು ಮಾನವರು, ಹಸುಗಳು ಹಾಗೂ ನಾಯಿಗಳಿಗೆ ದಾನದ ರೂಪದಲ್ಲಿ ನೀಡಲಾಗುತ್ತದೆ.

Guru Poornima: Ganesha with 3 lakh medicine decoration

ಆಲಂಕಾರದಲ್ಲಿ ಬಳಸಲಾಗಿರುವ ವಸ್ತುಗಳು:

ಮಾತ್ರೆಗಳು ಒಟ್ಟು 3,00,000 (3 ಲಕ್ಷ ಮಾತ್ರೆಗಳು)

- ಡೋಲೋ 650

- ವಿಟಮಿನ್‌ ಸಿ ಮಾತ್ರೆಗಳು

- ಕಾಫ್‌ಸಿಲ್‌ ಮಾತ್ರೆಗಳು

- ಬಿ ಕಾಂಪ್ಲೆಕ್ಸ್‌ ಮಾತ್ರೆಗಳು

- ಪ್ಯಾರಸಿಟಮಾಲ್‌

- ಈಸಿಬ್ರೀಥ್‌

2 ಸಾವಿರ ಕ್ಕೂ ಹೆಚ್ಚು ಸ್ಯಾನಿಟೈಸರ್‌ ಮಾತ್ರೆಗಳು

10 ಸಾವಿರ 8 ವಿವಿಧ ಬಣ್ಣದ ಮಾಸ್ಕ್‌ಗಳು

3 ಸಾವಿರಕ್ಕೂ ಹೆಚ್ಚು ಮೆಡಿಮಿಕ್ಸ್‌ ಹಾಗೂ ಡೆಟಾಲ್‌ ಸೋಪುಗಳು

500 ಕ್ಕೂ ಹೆಚ್ಚು ಟೆನ್ನಿಸ್‌ ಬಾಲ್‌

Guru Poornima: Ganesha with 3 lakh medicine decoration

ರೇಷನ್‌ ಕಿಟ್‌ ವಸ್ತುಗಳಾದ ಅಕ್ಕಿ, ಬೇಳೆ ಗೋಧಿ ಹಿಟ್ಟು, ಮೈದಾ ಹಿಟ್ಟು, ಸಕ್ಕರೆ, ಉಪ್ಪು, ರವೆ, ಎಣ್ಣೆ, ಈರುಳ್ಳಿ, ಮೆಕ್ಕೆ ಜೋಳ, ಬಿಸ್ಕತ್‌, ತೆಂಗಿನಕಾಯಿ.

Guru Poornima: Ganesha with 3 lakh medicine decoration

ಈ ಎಲ್ಲಾ ಸಾಮಗ್ರಿಗಳನ್ನು ಪ್ರಸಾದದ ರೂಪದಲ್ಲಿ ಅಗತ್ಯವಿರುವ ಜನರಿಗೆ ಹಂಚಲಾಗುವುದು. ಜುಲೈ 24 ರಿಂದ ಒಂದು ವಾರಗಳ ಕಾಲ ಈ ಆಲಂಕಾರ ವಿರಲಿದ್ದು ನಂತರ ಇದನ್ನು ಬಡಜನರಿಗೆ ಉಚಿತವಾಗಿ ಹಂಚಲಾಗುವುದು ಎಂದು ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಟ್ರಸ್ಟಿ ರಾಮ್‌ ಮೋಹನ ರಾಜ್‌ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+