ಪಂಡಿತ ಬಸವರಾಜ ರಾಜಗುರುವಿಗೆ ಸಂಗೀತ ವಂದನೆ
ಬೆಂಗಳೂರು, ಮಾ.23: ಪದ್ಮಭೂಷಣ ವಿಜೇತ, ಹಿಂದೂಸ್ತಾನಿ ಸಂಗೀತ ಕ್ಷೇತ್ರದ ದಿಗ್ಗಜ ಪಂಡಿತ ಬಸವರಾಜ ರಾಜಗುರು ಅವರ ಸ್ಮರಣಾರ್ಥ ಗೆಳೆಯರ ಬಳಗ ಸಂಸ್ಥೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಂಡಿದೆ.
ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದಲ್ಲಿ ಭಾನುವಾರ ಸಂಜೆ 5 ಗಂಟೆಗೆ ನಡೆಯುವ ಈ ಶಾಸ್ತ್ರೀಯ ಸಂಗೀತ ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಆಹ್ವಾನವಿದೆ.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ವಿದುಷಿ ಲಲಿತಾ ಜೆ.ರಾವ್ ಹಾಗೂ ಪಂಡಿತ್ ಎಂ.ಪಿ ಹೆಗ್ಡೆ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಗುತ್ತದೆ. ಧಾರವಾಡದ ಪಂಡಿತ್ ಶ್ರೀಪಾದ್ ಹೆಗ್ಡೆ ಕಂಪ್ಲಿ ಅವರ ಶಿಷ್ಯರಾದ ರಘುನಂದನ ಭಟ್, ಬೆಂಗಳೂರು ಅವರಿಗೆ ಶಾಸ್ತ್ರೀಯ ಗಾಯನವಿರಲಿದೆ. ಪಂಡಿತ್ ಚಂದ್ರಶೇಖರ್ ಪುರಾಣಿಕ್ ಮಠ್ ಹಾಗೂ ಪಂಡಿತ್ ಆರ್.ಟಿ ಹೆಗ್ಡೆ ಶಿಗೇಹಳ್ಳಿ ಅವರ ಶಿಷ್ಯರಾದ ಪಂಡಿತ್ ಪಿ. ಹೆಗ್ಡೆ ಶಿರಸಿ ಅವರು ಇವರಿಗೆ ಸಾಥ್ ನೀಡಲಿದ್ದಾರೆ.
ವಾದ್ಯ ವೃಂದರಲ್ಲಿ ಗುರುಮೂರ್ತಿ ವೈದ್ಯ, ಬೆಂಗಳೂರು, ಗುರುರಾಜ್ ಹೆಗ್ಡೆ ಹೊನ್ನಾವರ(ತಬಲ), ಭರತ್ ಹೆಗ್ಡೆ, ಶಿರಸಿ(ಹಾರ್ಮೋನಿಯಂ) ಕಾಣಿಸಿಕೊಳ್ಳಲಿದ್ದಾರೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ +9180953 04253

ಬಸವರಾಜ ಮಹಾಂತಸ್ವಾಮಿ ರಾಜಗುರು: ಸುರ ಕಾ ಬಾದಶಾಹ ಎಂದು ಖ್ಯಾತರಾದ ಬಸವರಾಜ ಮಹಾಂತಸ್ವಾಮಿ ರಾಜಗುರು ಧಾರವಾಡ ಜಿಲ್ಲೆಯ ಎಲಿವಾಳ ಗ್ರಾಮದಲ್ಲಿ ಜನಿಸಿದರು. 1917 ಆಗಸ್ಟ್ 24ರಂದು ಜನಿಸಿದರು. ಬಸವರಾಜ ರಾಜಗುರು ಅವರು ಆರಂಭದಲ್ಲಿ ರಂಗಗೀತೆಗಳನ್ನು ಕಲಿತು ಹಾಡಿದರೂ ಗದಗಿನ ಅಂಧ ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಸಂಪರ್ಕದಿಂದ ಶಾಸ್ತ್ರೀಯ ಗಾಯನ ವೃತ್ತಿಗೆ ಬಂದರು.
ಕಿರಾಣಾ, ಗ್ವಾಲಿಯರ ಹಾಗು ಪತಿಯಾಳಾ ಘರಾಣಾಗಳ ಆಳ ಜ್ಞಾನ ಉಳ್ಳವರಾಗಿದ್ದರು. ಈ ಮೂರೂ ಘರಾಣಾಗಳ ಶ್ರೇಷ್ಠ ಅಂಶಗಳನ್ನು ಒಳಗೊಂಡ ಸಂಗೀತ ಅವರದಾಗಿತ್ತು. ಬಸವರಾಜ ರಾಜಗುರು ತಮ್ಮ ಗುರು ಪಂಚಾಕ್ಷರಿ ಗವಾಯಿಗಳಿಗೆ ಕೊಟ್ಟ ಮಾತಿನಂತೆ, ತಮ್ಮ ಸಂಗೀತ ವಿದ್ಯೆಯನ್ನು ನಿರ್ವಂಚನೆಯಿಂದ ಅನೇಕ ವಿದ್ಯಾರ್ಥಿಗಳಿಗೆ ಧಾರೆಯರೆದರು.
ಸಂಗೀತ ಕ್ಷೇತ್ರದಲ್ಲಿ ಈಗ ಪ್ರಸಿದ್ಧರಾದ ಗಣಪತಿ ಭಟ್ಟ, ಪರಮೇಶ್ವರ ಹೆಗಡೆ, ಶಾಂತಾರಾಮ ಹೆಗಡೆ ಹಾಗು ನಚಿಕೇತ ಶರ್ಮಾ ಮೊದಲಾದವರು ರಾಜಗುರುಗಳ ಶಿಷ್ಯಂದಿರು. ಬಸವರಾಜ ರಾಜಗುರುಗಳಿಗೆ 1975ರಲ್ಲಿ ಪದ್ಮಶ್ರೀ ಪ್ರಶಸ್ತಿ ಹಾಗು 1991ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿದವು. ಅಲ್ಲದೆ ಕರ್ನಾಟಕ ರಾಜ್ಯ ಹಾಗು ಕೇಂದ್ರದ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ ಸಹ ಲಭಿಸಿದ್ದವು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications