Gym Trainer: ಹೆಚ್ಚು ಸಮಯ ಕೊಡುತ್ತಿಲ್ಲವೆಂದು ಮನೆ ತೊರೆದ ಪತ್ನಿಗೆ ಹೆದರಿಸಲು ಹೋಗಿ ಸಾವನ್ನಪ್ಪಿದ ಜಿಮ್ ಟ್ರೈನರ್!
ಬೆಂಗಳೂರು ಮೇ 16: ಜಿಮ್ ಟ್ರೈನರ್ರೊಬ್ಬರು ಪತ್ನಿಗೆ ಹೆದರಿಸಲು ಹೋಗಿ ನಿಜವಾಗಲೂ ಸಾವು ತಂದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ.
ಅಮಿತ್ ಕುಮಾರ್ (28) ಎಂಬಾತ ಸಾವನ್ನಪ್ಪಿದ ದುರ್ದೈವಿ. ಅಮಿತ್ ಮೂಲತ: ಬಿಹಾರ್ ಮೂಲದವರು. ಈ ಸಾವು ಕೌಟುಂಬಿಕ ಕಲಹದಿಂದ ಆಗಿದೆ ಎಂದು ಹೇಳಲಾಗುತ್ತಿದೆ. ಕಳೆದ ಒಂದು ವರ್ಷದ ಹಿಂದೆ ಜಿಮ್ ಟ್ರೈನರ್ ತಾವು ಪ್ರೀತಿಸಿದ ಪ್ರೇಯಸಿಯೊಂದಿಗೆ ಮದುವೆಯಾಗಿ ಉತ್ತಮ ಜೀವನ ನಡೆಸುತ್ತಿದ್ದರು. ಆದರೆ ಇತ್ತೀಚೆಗೆ ಸಂಸಾರದ ಹಳಿ ತಪ್ಪಿತ್ತು.

ಅಮಿತ್ ಕುಮಾರ್ ಪತ್ನಿಯೊಂದಿಗೆ ಗಲಾಟೆ ನಡೆದಿತ್ತು. ಹೀಗಾಗಿ ಪತ್ನಿ ಮನೆ ಬಿಟ್ಟು ಹೋಗಿರುತ್ತಾಳೆ. ಇದರಿಂದಾಗಿ ಅಮಿತ್ ಮಾನಸಿಕವಾಗಿ ಕುಗ್ಗಿ ಹೋಗಿರುತ್ತಾರೆ. ಇತ್ತೀಚೆಗೆ ತನ್ನ ಪತ್ನಿ ಹೆಚ್ಚು ಸಮಯವನ್ನು ಮೊಬೈಲ್ನಲ್ಲಿ ಕಳೆಯುವುದು ಅಮಿತ್ಗೆ ಬೇಸರ ತಂದಿತ್ತು.
ಇದರಿಂದಾಗಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಗಲಾಟೆ ಬಳಿಕ ಪತ್ನಿ ಮನೆ ಬಿಟ್ಟು ಹೋಗಿದ್ದಳು. ಆಕೆಗೆ ವಾಪಸ್ ಮನೆಗೆ ಬರುವಂತೆ ಅಮಿತ್ ಕರೆ ಮಾಡಿ ಹೇಳಿದ್ದಾನೆ. ಆದರೆ ಪತ್ನಿ ಕೇಳಿಲ್ಲ.

ನರ್ಸಿಂಗ್ ಮಾಡುತ್ತಿದ್ದ ಪತ್ನಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದಳು. ಜೊತೆಗೆ ಬೇರೆ ಹುಡುಗನೊಂದಿಗೆ ಹೆಚ್ಚು ಫೋನ್ನಲ್ಲಿ ಮಾತನಾಡುತ್ತಿದ್ದಳು. ಇದರಿಂದಾಗಿ ಅಮಿತ್ ವಿಡಿಯೋ ಕಾಲ್ ಮಾಡಿ ಮನೆಗೆ ಬರುವಂತೆ ಪತ್ನಿಗೆ ಹೆದರಿಸಲು ಹೋಗಿದ್ದಾನೆ. ವಿಡಿಯೋ ಕಾಲ್ ಆನ್ ಇರುವಾಗಲೇ ನೇಣು ಬಿಗಿದುಕೊಳ್ಳುವಂತೆ ನಟಿಸಲು ಹೋಗಿ ನಿಜವಾಗಲೂ ನೇಣಿಗೆ ಶರಣಾಗಿದ್ದಾನೆ.
ಮತ್ತೊಂದು ಘಟನೆ
ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕತ್ತು ಕೊಯಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮನೆಯಲ್ಲಿ ಶವ ಪತ್ತೆಯಾಗಿದ್ದು ಪ್ರಕರಣ ದಾಖಲಾಗಿದೆ. ದ್ವೀತಿಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ(21) ಮೃತ ಯುವತಿ. ಯುಡಿಆರ್ ದಾಖಲಿಸಿಕೊಂಡು ಪೊಲೀಸರಿಂದ ತನಿಖೆ ಆರಂಭಿಸಲಾಗಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ












Click it and Unblock the Notifications