ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಹೆಚ್ ಡಿ ಕುಮಾರಸ್ವಾಮಿ ನೀಡಿದ ಸಂದೇಶವೇನು?

|
Google Oneindia Kannada News

ಬೆಂಗಳೂರು, ಜುಲೈ 27: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭಾಷಯ ಕೋರಿದ್ದಾರೆ.

"ಪ್ರಸ್ತುತ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ," ಎಂದು ಟ್ವೀಟ್ ಮಾಡಿದ್ದಾರೆ.

Breaking News: ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ Breaking News: ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ಬಸವರಾಯ ಬೊಮ್ಮಾಯಿರನ್ನು ರಾಜ್ಯದ ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಗಿಯಿತು. ಸಿಎಂ ಆಯ್ಕೆ ದಿನವೇ ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ. ಗೋವಿಂದ ಕಾರಜೋಳ, ಆರ್ ಅಶೋಕ್ ಹಾಗೂ ಶ್ರೀರಾಮುಲುರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ.

H D Kumaraswamy Reaction to Basavaraj Bommai Elected As CM Of Karnataka

ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ:

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಸವರಾಜ ಬೊಮ್ಮಾಯಿರನ್ನು ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಹ್ವಾನಿಸಿದ್ದಾರೆ. ಕರ್ನಾಟಕ ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಜುಲೈ 28ರ ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

English summary
H D Kumaraswamy Reaction to Basavaraj Bommai Elected As CM Of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X