ಬಿಎಸ್ ವೈ ವೈಶಂಪಾಯನ ಸರೋವರದ ದುರ್ಯೋಧನ: ವಿಶ್ವನಾಥ್ ಲೇವಡಿ

Recommended Video

      ಬಿ ಎಸ್. ಯಡಿಯೂರಪ್ಪ ಅವರಿಗೆ ಸವಾಲು ಹಾಕಿದ ಹೆಚ್ ವಿಶ್ವನಾಥ್ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 8: ವೈಶಂಪಾಯನ ಸರೋವರದಲ್ಲಿ ಅಡಗಿ ಕುಳಿತಿರುವ ದುರ್ಯೋದನನಂತೆ ಹೋರಾಟದಿಂದ ಹಿಂದೆ ಸರಿಯುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಜನಪರ ಕಾಳಜಿ ಇದ್ದರೆ ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಹೋರಾಟಕ್ಕಿಳಿಯಬೇಕು ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್‌ ವಿಶ್ವನಾಥ್ ಸವಾಲು ಹಾಕಿದ್ದಾರೆ.

      ಪಕ್ಷದ ಕಚೇರಿ ಜೆಪಿ ಭವನದಲ್ಲಿ ಶನಿವಾರ ಮಾತಾನಾಡಿದ ಅವರು, ಇತಿಹಾಸದಲ್ಲೇ ಗರಿಷ್ಠ ದರ ತಲುಪಿರುವ ಪಟ್ರೋಲ್ ಮತ್ತು ಡೀಸೆಲ್ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಅಡುಗೆ ಅನಿಲ ಇಂಧನದ ದರ ಒಂದು ತಿಂಗಳಿಗೆ ಸಾವಿರ ರೂ.ವನ್ನು ತಲುಪುತ್ತಿದೆ. ಇಂತಹ ಪರಿಸ್ಥಿಯಲ್ಲಿ ಜನಸಾಮಾನ್ಯರು ಬದುಕಲು ಸಾಧ್ಯವೇ ಎಂದು ಕಳವಳ ವ್ಯಕ್ತಪಡಿಸಿದರು.

      ಸೆಪ್ಟೆಂಬರ್ 10ರಂದು ಕಾಂಗ್ರೆಸ್ ಪಕ್ಷ ಕರೆ ನೀಡಿರುವ ಭಾರತ್ ಬಂದ್ ಗೆ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಲಿದೆ, ಕಾಂಗ್ರೆಸ್ ಕರೆ ನೀಡಿರುವ ಬಂದ್‌ಗೆ ಜನಪರ ಕಾಳಜಿ ಇರುವುದರಿಂದ ನಮ್ಮ ಪಕ್ಷ ಕೂಡ ಬೆಂಬಲಿಸಲಿದೆ. ಜೆಡಿಎಸ್ ನಿಂದ ಟೌನ್‌ಹಾಲ್‌ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

      H.Vishwanath challenges BSY to protest against fuel price

      ಇದೇ ವೇಳೆ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಸಚಿವರಾಗಿರುವ ಡಿಕೆ ಶಿವಕುಮಾರ್ ವಿರುದ್ಧ ಐಟಿ, ಸಿಐಡಿ ಮತ್ತು ಇಡಿಗಳು ದಾಳಿ ನಡೆಸುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು ಡಿಕೆ ಶಿವಕುಮಾರ್ ವಿರುದ್ಧ ಕೇಂದ್ರ ಸರ್ಕಾರ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ನಾವು ಡಿಕೆ ಶಿವಕುಮಾರ್ ಅವರನ್ನು ವಯಕ್ತಿಕವಾಗಿ ಬೆಂಬಲಿಸುತ್ತಿಲ್ಲ ಆದರೆ ಅವರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸುತ್ತೇವೆ ಎಂದು ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+