ಸಿದ್ದರಾಮಯ್ಯಗೆ ವಿಶ್ವನಾಥ್ ಟಾಂಗ್: ಸೋಮನಹಳ್ಳಿ ಮುದುಕಿ ನನ್ನ ಹುಂಜದಿಂದಲೇ ಬೆಳಗಾಗೋದು ಅಂದ್ಕೊಂಡ್ರೆ ಮೂರ್ಖತನ!
ಬೆಂಗಳೂರು, ಡಿ, 11: ಸೋಮನಹಳ್ಳಿ ಮುದುಕಿ ಹುಂಜ ಇಟ್ಕೊಂಡು ನನ್ನ ಕೋಳಿಯಿಂದಲೇ ಬೆಳಗಾಗೋದು ಅಂದ್ಕೊಂಡ್ರೆ ಮೂರ್ಖತನ ಎಂದು ಎಂದು ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ಮಾಜಿ ಸಚಿವ ಎಚ್. ವಿಶ್ವನಾಥ್ ಅವರು ಲೇವಡಿ ಮಾಡಿದ್ದಾರೆ. ಬೆಳಗ್ಗೆಯಷ್ಟೇ ಸುದ್ದಿಗೋಷ್ಠಿ ನಡೆಸಿ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಸಮುದಾಯದ ನಾಯಕ ಎಂದಿದ್ದ ಕುರುಬ ಜನಾಂಗದ ನಾಯಕರಿಗೆ ಮಾಜಿ ಸಚಿವ, ವಿಧಾನದ ಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಅವರು ಟಾಂಗ್ ಕೊಟ್ಟಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೋರಾಟ ಇಲ್ಲದೆ ಏನೂ ನಡೆಯೋದೇ ಇಲ್ಲ. ಹೋರಾಟದ ಬಗ್ಗೆ ಗೊತ್ತಿಲ್ಲದವರು ಹೀಗೆ ಮಾತನಾಡುತ್ತಾರೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರು ಕುರುಬ ಸಮಾಜದವರು. ಅವರು ವಿಶ್ವಾಸದಿಂದ ಹೋರಾಟಕ್ಕೆ ಇಳಿದಿದ್ದಾರೆ. ಸರ್ಕಾರದ ವಿರುದ್ಧ ಈಶ್ವರಪ್ಪ ಅವರು ಹೋರಾಟ ಮಾಡುತ್ತಿಲ್ಲ ಎಂದು ವಿಶ್ವನಾಥ್ ಅವರು ಸಿದ್ದರಾಮಯ್ಯ ಆ್ಯಂಡ್ ಟೀಂಗೆ ಟಾಂಗ್ ಕೊಟ್ಟಿದ್ದಾರೆ.
ಇದು ಜನರನ್ನು ದಿಕ್ಕು ತಪ್ಪಿಸಲು ಹೀಗೆ ಈಶ್ವರಪ್ಪ ಅವರ ವಿರುದ್ಧ ಹೇಳಿಕೆ ಕೊಡಿಸುತ್ತಿದ್ದಾರೆ. ಯಾರ ಪ್ರಭಾವವನ್ನು ಯಾರೂ ತಗ್ಗಿಸಲು ಆಗುವುದಿಲ್ಲ. ಯಾರಾದರೂ ನಾನು ಇಲ್ಲದೆ ಈ ಸಮಾಜ ಇಲ್ಲ ಅಂದು ಕೊಂಡಿದ್ದರೆ ಅವರಂತಹ ಮೂರ್ಖರು ಬೇರೆ ಯಾರೂ ಇಲ್ಲ. ಪ್ರತಿ ವ್ಯಕ್ತಿಗೆ ಸಮಾಜ ಅನಿವಾರ್ಯವೇ ಹೊರತು ಸಮಾಜಕ್ಕೆ ಯಾರೋಬ್ಬರೂ ಅನಿವಾರ್ಯ ಅಲ್ಲ. ಸೋಮನಹಳ್ಳಿ ಮುದುಕಿ ಹುಂಜ ಇಟ್ಕೊಂಡು ನನ್ನ ಕೋಳಿಯಿಂದಲೇ ಬೆಳಗಾಗೋದು ಅಂದ್ಕೊಂಡ್ರೆ ಮೂರ್ಖತನ ಎಂದು ಎಂದು ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ಲೇವಡಿ ಮಾಡಿದ್ದಾರೆ.

ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸುವ ಹೋರಾಟ ನಮ್ಮದು, ಇದು ಯಾರ ಪ್ರಭಾವನ್ನು ಕುಗ್ಗಿಸಲು ಅಲ್ಲ. ನಮ್ಮ ಹೋರಾಟಕ್ಕೆ ಆರ್ಎಸ್ಎಸ್ ಬೆಂಬಲ ಕೊಟ್ಟರೆ ತಪ್ಪೇನಿದೆ? ಆರ್ಎಸ್ಎಸ್ ಸಮಾಜ ಒಡೆಯುತ್ತದೆ ಅನ್ನೋ ಹೇಳಿಕೆ ದಿಕ್ಕಿತಪ್ಪಿಸುವ ಹೇಳಿಕೆ
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications