ಕಿದ್ವಾಯಿ ಮಹಿಳಾ ಕ್ಯಾನ್ಸರ್ ರೋಗಿಗಳಿಗೆ ಉಚಿತ ವಿಗ್
ಬೆಂಗಳೂರು, ಮಾರ್ಚ್ 10: ಮಹಿಳಾ ದಿನಾಚರಣೆಯನ್ನು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. ಆದರೆ ಈ ಸಂಭ್ರಮದ ನಡುವೆ ಸಂಭ್ರಮಿಸಲು ಕಾರಣಗಳೇ ಇಲ್ಲದ ಕೆಲವು ಮಹಿಳೆಯರೂ ಇರುತ್ತಾರೆ. ಕೆಲವು ರೋಗಗಳು ಮನುಷ್ಯನ ಆತ್ಮಸ್ಥೆರ್ಯವನ್ನೇ ಉಡುಗಿಸುತ್ತವೆ. ಇಂತಹ ರೋಗಗಳಲ್ಲಿ ಕ್ಯಾನ್ಸರ್ ಕೂಡಾ ಒಂದು. ಕ್ಯಾನ್ಸರ್ ಮನುಷ್ಯನ ದೇಹ ಮತ್ತು ಮನಸ್ಸು ಮಾತ್ರವಲ್ಲ, ಆತ್ಮಸ್ಥೈರ್ಯವನ್ನೂ ಅಳಿಸಿ ಬಿಡುತ್ತದೆ.
ಮಾರ್ಚ್ 8ರಂದು ವಿಶ್ವ ಮಹಿಳಾ ದಿನಾಚರಣೆ ವೇಳೆ ಹೇರ್ ಲೈನ್ ಇಂಟರ್ ನ್ಯಾಷನಲ್ ಹೇರ್ ಆಂಡ್ ಸ್ಕಿನ್ ಕ್ಲಿನಿಕ್ ಮತ್ತು ಕಿದ್ವಾಯಿ ಮೆಮೋರಿಯಲ್ ಇನ್ಸ್ ಟಿಟ್ಯೂಟ್ ಆಫ್ ಆನ್ಕಾಲಜಿ ಜಂಟಿಯಾಗಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿರುವ ಮಹಿಳಾ ರೋಗಿಗಳಿಗೆ ಕಿದ್ವಾಯಿ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ವಿಗ್ ಹಾಗೂ ಕೂಲಿಂಗ್ ಕ್ಯಾಪ್ ವಿತರಿಸಲಾಯಿತು. ವಿಗ್ ಗಳು ನೈಸರ್ಗಿಕ ಕೂದಲಿನಂತೆಯೇ ಕಾಣಿಸುತ್ತದೆ ಎನ್ನುವುದೂ ಇದರ ವಿಶೇಷ.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಹೇರ್ ಲೈನ್ ಇಂಟರ್ ನ್ಯಾಷನಲ್ ಸಂಸ್ಥಾಪಕಿ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಬಾನಿ ಆನಂದ್, ಕೀಮೋಥೆರಪಿಯಿಂದಾಗಿ ಕ್ಯಾನ್ಸರ್ ರೋಗಿಯ ಕೂದಲು ಉದುರಲು ಆರಂಭವಾಗುತ್ತದೆ. ಮಹಿಳೆಯರಿಗೆ ಕೂದಲು ಉದುರುವುದೆಂದರೆ ಅವರ ಸ್ವಾಭಿಮಾನಕ್ಕೆ ಧಕ್ಕೆಯಾದಂತೆ. ಈ ಹಿನ್ನೆಲೆಯಲ್ಲಿ ನಾವು ಅವರಿಗೆ ಉತ್ಸಾಹ ತುಂಬಲು ವಿಗ್ ನೀಡುತ್ತಿದ್ದೇವೆ ಎಂದರು.
ಕ್ಯಾನ್ಸರ್ ನಿಂದ ಕೂದಲು ಉದುರುವ ಆರಂಭಿಕ ಹಂತದಲ್ಲಿರುವವರಿಗೆ ಆಮದು ಮಾಡಿಕೊಂಡ ಕೂಲಿಂಗ್ ಕ್ಯಾಪ್ ದಾನ ನೀಡುತ್ತೇವೆ. ಕೂಲಿಂಗ್ ಕ್ಯಾಪ್ ಕೂದಲು ಉದುರುವುದನ್ನು ತಡೆಯುತ್ತದೆ. ಕೀಮೋಥೆರಪಿ ಮಾಡುವ ವೇಳೆ ಈ ಕ್ಯಾಪ್ ಬಳಸುತ್ತಾರೆ. ಈ ವಿಧಾನವನ್ನು ಅನುಸರಿಸುವಾಗ ಪ್ರತಿ 2 ಗಂಟೆಗೊಮ್ಮೆ ಕೂಲಿಂಗ್ ಕ್ಯಾಪ್ ಬದಲಾಯಿಸಬೇಕಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಕಿದ್ವಾಯಿ ಮೆಮೋರಿಯಲ್ ಇನ್ಸ್ ಟಿಟ್ಯೂಟ್ ಆಫ್ ಆನ್ಕಾಲಜಿ ನಿರ್ದೇಶಕ ಡಾ.ಎಂ. ವಿಜಯ್ ಕುಮಾರ್, ಕ್ಯಾನ್ಸರ್ ಮನುಷ್ಯನನ್ನು ವ್ಯವಸ್ಥಿತವಾಗಿ ನಾಶ ಮಾಡುವ ರೋಗ. ಸ್ತ್ರೀಯರಿಗೆ ಕೂದಲು ಎನ್ನುವುದೇ ಮಹಿಳೆ ಎಂಬುದರ ಸಂಕೇವಾಗಿದ್ದು, ಕೂದಲು ಉದುರಲು ಆರಂಭವಾದಾಗ ಭಾವನಾತ್ಮಕವಾಗಿ ತುಂಬಾ ನೋವನುಭವಿಸುತ್ತಾರೆ. ಈ ವಿಗ್ ಗಳು ಇಂತಹ ಮಹಿಳೆಯರಿಗೆ ತುಂಬಾ ಸಹಾಯಕ ಎಂದರು.

ಕಿದ್ವಾಯಿ ಮೆಮೋರಿಯಲ್ ಇನ್ಸ್ ಟಿಟ್ಯೂಟ್ ಆಫ್ ಆನ್ಕಾಲಜಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿದ್ವಾಯಿ ನಿರ್ದೇಶಕ ಡಾ.ಎಂ.ವಿಜಯ್ ಕುಮಾರ್ ಅವರಿಗೆ ವಿಗ್ ಗಳನ್ನು ಹಸ್ತಾಂತರಿಸಲಾಯಿತು. ಶೇ.50 ರಿಯಾಯಿತಿ: ಹೇರ್ ಲೈನ್ ನಲ್ಲಿ ಚಿಕಿತ್ಸೆ ಪಡೆಯುವ ಎಲ್ಲಾ ಮಹಿಳಾ ಕ್ಯಾನ್ಸರ್ ರೋಗಿಗಳಿಗೆ ಕೂದಲಿನ ಚಿಕಿತ್ಸೆಯಲ್ಲಿ ಶೇ.50ರಷ್ಟು ರಿಯಾಯಿತಿ ಘೋಷಿಸಲಾಗಿದೆ.
ಬೆಂಗಳೂರಿನ ಇಂದಿರಾನಗರದಲ್ಲಿ ಕೇಂದ್ರ ಕಚೇರಿ ಹೊಂದಿರುವ ಹೇರ್ ಲೈನ್ ಇಂಟರ್ ನ್ಯಾಷನಲ್ ಹೇರ್ ಆಂಡ್ ಸ್ಕಿನ್ ಕ್ಲಿನಿಕ್ ಬಾನಿ ಆನಂದ್ ನೇತೃತ್ವದಲ್ಲಿ ನಡೆಯುತ್ತಿದೆ. ಕೂದಲು, ಚರ್ಮ ಹಾಗೂ ಸೌಂದರ್ಯವರ್ಧನೆಗಾಗಿ ಹೇರ್ ಲೈನ್ ಕ್ಲಿನಿಕ್ ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. (ಒನ್ಇಂಡಿಯಾ ಕನ್ನಡ)
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications