ಹಜ್ ಯಾತ್ರಿಗಳು ಶಾಂತಿಯುತ ಸಮಾಜಕ್ಕಾಗಿ ಪ್ರಾರ್ಥಿಸಿ
ಬೆಂಗಳೂರು, ಸೆ. 13 : ಯಲಹಂಕ ಹೋಬಳಿಯ ತಿರುಮೇನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಹಜ್ಘರ್ಗೆ ಈ ವರ್ಷದ ಬಜೆಟ್ನಲ್ಲಿ 17 ಕೋಟಿ ಅನುದಾನ ನೀಡಲಾಗಿದೆ. ಮುಂದಿನ ವರ್ಷದ ಹಜ್ ಶಿಬಿರ ಈ ಹಜ್ಘರ್ನಲ್ಲಿಯೇ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ನಗರದ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ 2014ರ ಹಜ್ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಗುಲ್ಬರ್ಗ ಹಾಗೂ ಮಂಗಳೂರಿನಲ್ಲಿ ತಲಾ ಎರಡು ಎಕರೆ ಜಾಗದಲ್ಲಿ ನಿರ್ಮಿಸಲಾಗುತ್ತಿರುವ ಹಜ್ಘರ್ಗಳಿಗೂ ತಲಾ ಒಂದು ಕೋಟಿ ಅನುದಾನ ಪ್ರಕಟಿಸಲಾಗಿದೆ ಎಂದರು. ಹಜ್ಯಾತ್ರಿಗಳು ಶಾಂತಿ ಮತ್ತು ಭದ್ರತೆಗಾಗಿ ಪ್ರಾರ್ಥನೆ ಮಾಡಿ ಎಂದು ಸಿಎಂ ಕರೆ ನೀಡಿದರು.

ಮಕ್ಕಾ ಪಟ್ಟಣದ ಪವಿತ್ರ ಕಾಬಾ ಮಸೀದಿ ವಿಸ್ತರಣಾ ಕಾರ್ಯವು ನಡೆಯತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ಸರ್ಕಾರ ವಿಶ್ವದ ಎಲ್ಲಾ ದೇಶಗಳಿಂದ ಹಜ್ ಯಾತ್ರೆಗೆ ಆಗಮಿಸುವ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಶೇಕಡಾ 20 ರಷ್ಟು ಕಡಿತಗೊಳಿಸಿದೆ. ಅಂತೆಯೇ ಭಾರತದ ಯಾತ್ರಿಗಳ ಸಂಖ್ಯೆಯೂ ಕಡಿಮೆಯಾಗಿದ್ದು, ರಾಜ್ಯದಿಂದ 5,193 ಯಾತ್ರಿಗಳು ತೆರಳಲಿದ್ದಾರೆ ಎಂದು ತಿಳಿಸಿದರು. [ಮಂಗಳೂರಿನಲ್ಲಿ ಹಜ್ ಯಾತ್ರೆಗೆ ಬೇಗ್ ಚಾಲನೆ]
ಮಂಗಳೂರಿನಿಂದ ಈಗಾಗಲೇ 731 ಮಂದಿ ಯಾತ್ರೆಗೆ ತೆರಳಿದ್ದಾರೆ. ಅಲ್ಲದೆ ರಾಜ್ಯದ ಯಾತ್ರಿಗಳು ಗೋವಾ ವಿಮಾನ ನಿಲ್ದಾಣದ ಮೂಲಕ, ಹೈದರಾಬಾದ್ ವಿಮಾನ ನಿಲ್ದಾಣದ ಮೂಲಕವೂ ಯಾತ್ರೆಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಜ್ ಸಚಿವ ಆರ್. ರೋಷನ್ ಬೇಗ್ ಅವರು, ತಿರುಮೇನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಹಜ್ಘರ್ನಲ್ಲಿ ಪರಸ್ಥಳದ ಮುಸ್ಲಿವ್ಮರಿಗೆ ವಾಸ್ತವ್ಯದ ಸೌಲಭ್ಯ ಹಾಗೂ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ವರ್ಷವಿಡಿ ಹಮ್ಮಿಕೊಳ್ಳಾಗುವುದು ಎಂದರು. [ಹಜ್ ಯಾತ್ರೆಗೆ 5ಸಾವಿರ ಯಾತ್ರಿಕರು]
ಶುಕ್ರವಾರ ಬೆಂಗಳೂರಿನಿಂದ ಹೊರಟ ಮೊದಲ ತಂಡದಲ್ಲಿ 231 ಮಂದಿ ಯಾತ್ರೆಗೆ ತೆರಳಿದರು. ಸಮಾರಂಭದಲ್ಲಿ ಗೃಹ ಸಚಿವ ಕೆ.ಜೆ. ಜಾರ್ಜ್, ಆರೋಗ್ಯ ಸಚಿವ ಯು.ಟಿ. ಖಾದರ್, ಪೌರಾಡಳಿತ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಖಮರುಲ್ ಇಸ್ಲಾಂ ಮುಂತಾದವರು ಪಾಲ್ಗೊಂಡಿದ್ದರು.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ












Click it and Unblock the Notifications