ಕಳ್ಳನೆಂದು ಭಾವಿಸಿ ಬ್ಯಾಂಕ್ ಉದ್ಯೋಗಿಯನ್ನು ಕೊಲೆ ಮಾಡಿದ್ದ ಸೆಕ್ಯುರಿಟಿ ಗಾರ್ಡ್ ಸೆರೆ
ಬೆಂಗಳೂರು, ಜು. 10: ಕಳ್ಳನೆಂದು ಭಾವಿಸಿ ಬ್ಯಾಂಕ್ ಉದ್ಯೋಗಿಯ ತಲೆಗೆ ರಾಡ್ನಿಂದ ಹೊಡೆದು ಕೊಲೆ ಮಾಡಿದ್ದ ಸೆಕ್ಯುರಿಟಿ ಗಾರ್ಡ್ನನ್ನು ಎಚ್ಎಎಲ್ ಪೊಲೀಸರು ಬಂಧಿಸಿದ್ದಾರೆ.
ಶ್ಯಾಮನಾಥ ರೀ ಬಂಧಿತ ಸೆಕ್ಯುರಿಟಿ ಗಾರ್ಡ್. ಈತ ಇದೇ ಜು. 05 ರಂದು ರಾತ್ರಿ ಮಾರತಹಳ್ಳಿ ಸಮೀಪ ಸಿಟಾಟೆಲ್ ಅಪಾರ್ಟ್ ಮೆಂಟ್ನಲ್ಲಿ ಅಪರಿಚಿತ ವ್ಯಕ್ತಿಯ ತಲೆಗೆ ಹೊಡೆದು ಕೊಲೆ ಮಾಡಿದ್ದ. ಕೊಲೆಯಾದ ಬಳಿಕ ತಲೆ ಮರೆಸಿಕೊಂಡಿದ್ದ ಶ್ಯಾಮನಾಥ್ ರೀ ಎಂಬಾತನನ್ನು ಎಚ್ಎಎಲ್ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.
ಆಕಸ್ಮಿಕ ಕಗ್ಗೊಲೆ: ಛತ್ತೀಸಘಡ ಮೂಲದ ಬ್ಯಾಂಕ್ ಉದ್ಯೋಗಿ ಟ್ರೈನಿಂಗ್ ಸಲುವಾಗಿ ಬೆಂಗಳೂರಿಗೆ ಬಂದಿದ್ದ. ಜು. 05 ರಂದು ರಾತ್ರಿ ಸ್ನೇಹಿತರ ಪಾರ್ಟಿ ಮಾಡಿದ್ದ. ಆ ಬಳಿಕ ಒಬ್ಬನೇ ನಡೆದುಕೊಂಡು ಸ್ನೇಹಿತನ ಮನೆಗೆ ತೆರಳಿದ್ದ.

ಮೊಬೈಲ್ನಲ್ಲಿ ಅಡ್ರೆಸ್ ಕೇಳುತ್ತಾ ಹೋಗಿದ್ದ. ಇದ್ದಕ್ಕಿದ್ದಂತೆ ಮೊಬೈಲ್ ಸ್ವಿಚ್ ಆಫ್ ಆಗಿ ಗೊಂದಲ ಶುರುವಾಗಿತ್ತು. ದಾರಿ ತಪ್ಪಿ ಬೇರೆಯದ್ದೇ ಅಪಾರ್ಟ್ ಮೆಂಟ್ಗೆ ಹೋಗಿದ್ದ.
Recommended Video
ಅಪಾರ್ಟ್ ಮೆಂಟ್ ಒಳಗೆ ಅಪರಿಚಿತ ವ್ಯಕ್ತಿ ಬರುವುದನ್ನು ಗಮನಿಸಿದ ಸೆಕ್ಯುರಿಟಿ ಗಾರ್ಡ್, ಆತನನ್ನು ಪ್ರಶ್ನೆ ಮಾಡಿದ್ದಾನೆ. ಯಾರು ನೀನು? ಯಾಕೆ ಇಷ್ಟೊತ್ತಲ್ಲಿ ಬಂದಿದ್ಧೀಯ ಎಂದು ಎಷ್ಟೇ ಕೇಳಿದ್ರೂ ಛತ್ತೀಸ್ ಘಡ ಮೂಲದ ವ್ಯಕ್ತಿ ಬಾಯಿ ಬಿಟ್ಟಿಲ್ಲ. ಬದಲಿಗೆ ಅಪರಿಚಿತನ ಮನೆಗೆ ನುಗ್ಗಲು ಯತ್ನಿಸಿದ್ದಾನೆ. ಕಳ್ಳನಿರಬಹುದು ಎಂದು ಭಾವಿಸಿ ಸೆಕ್ಯುರಿಟಿ ಗಾರ್ಡ್ ಶ್ಯಾಮನಾಥ್ ತಲೆಗೆ ರಾಡ್ನಿಂದ ಹೊಡೆದಿದ್ದಾನೆ. ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಸಂಬಂಧ ಎಚ್ಎಎಲ್ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು. ತಲೆ ಮರೆಸಿಕೊಂಡಿದ್ದ ಶ್ಯಾಮನಾಥ್ ಎಂಬಾತನನ್ನು ಎಚ್ಎಎಲ್ ಪೊಲೀಸರು ಬಂಧಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications