ವಿಕಲಚೇತನರಿಗೆ ನೀಡುವ ಬೈಕ್ ಗಳು ತುಕ್ಕುಹಿಡಿಯುತ್ತಿದೆ
ದೊಡ್ಡಬಳ್ಳಾಪುರ, ಫೆಬ್ರವರಿ 2: ವಿಕಲಾಂಗ ಚೇತನರ ಕೈ ಸೇರಿ ಅವರ ಜೀವನಕ್ಕೆ ಅನುಕೂಲವಾಗುವಾಗಬೇಕಿದ್ದ ದ್ವಿಚಕ್ರವಾಹನಗಳು ಇದೀಗ ಸೂಕ್ತ ರಕ್ಷಣೆ ಇಲ್ಲದೆ ತುಕ್ಕುಹಿಡಿದಿವೆ.
ಶಾಸಕರ ರಾಜಕೀಯ ಕಾರಣಗಳಿಗಾಗಿ ಮಳೆ ಗಾಳಿ ಎನ್ನದೆ ಸೂಕ್ತ ರಕ್ಷಣೆ ಇಲ್ಲದೆ ತುಕ್ಕುಹಿಡಿಯುವ ಹಂತಕ್ಕೆ ಬರುತ್ತಿವೆ. ಅದಕ್ಕೆ ರಕ್ಷಣೆ ಇಲ್ಲದಿರುವುದರಿಂದ ಈಗಾಗಲೇ ಕೆಲ ಬೈಕ್ ಗಳ ಮಿರರ್ಗಳು ಕಳ್ಳರ ಪಾಲಾಗಿವೆ. ಸೀಟ್ಗಳನ್ನೂ ಕೂಡ ಕಿಡಿಗೇಡಿಗಳು ಹರಿದುಹಾಕಿದ್ದಾರೆ. ಹಾಗಾದರೆ ರಾಜಕೀಯ ಪ್ರತಿಷ್ಟೆಯಿಂದಾಗಿ ಯೂಸ್ಲೇಸ್ ಆಗಿರುವ ಬೈಕ್ ಗಳ ಸ್ಟೋರಿ ಒಮ್ಮೆ ಓದಿ.
ಬಡ ವಿಕಲಚೇತನರು ಜೀವನ ರೂಪಿಸಿಕೊಳ್ಳಲು ಸಹಾಯವಾಗಲಿ ಎಂದು ರಾಜ್ಯ ಸರ್ಕಾರ ಅಂಗವೈಕಲ್ಯವುಳ್ಳವರಿಗೆ ಬೈಕ್ ಗಳನ್ನು ನೀಡುವ ಯೋಜನೆ ಜಾರಿಗೆ ತಂದಿದೆ. ಅಂತೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಫುರ ತಾಲೂಕಿಗೂ ಕೂಡ ೩೮ ಫಲಾನುಭವಿಗಳಿಗೆ ಬೈಕ್ ಗಳು ಬಂದಿದ್ದವು.

ಆದರೆ ಬೈಕ್ ಗಳ ವಿತರಣೆಗೆ ಸ್ಥಳೀಯ ಶಾಸಕ ವೆಂಕಟರಮಣಯ್ಯರ ಸಮಯಾಭವದಿಂದ ಹಾಗೂ ಸೂಕ್ತ ರಾಜಕೀಯ ವೇದಿಕೆ ಇಲ್ಲದೆ ಈ ಬೈಕ್ ಗಳು ಕಳೆದ ೩ ತಿಂಗಳಿಂದ ನಿಂತಲ್ಲಿಯೇ ನಿಂತಿವೆ. ಮಳೆ ಗಾಳಿಗೆ ರಕ್ಷಣೆ ಇಲ್ಲದಂತಾಗಿ ಕಬ್ಬಿಣಗಳು ತುಕ್ಕು ಹಿಡಿಯುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಕೂಡಲೇ ಶಾಸಕರು ಫಲಾನುಭವಿಗಳಿಗೆ ವಿತರಣೆ ಮಾಡಿದರೇ ನಮ್ಮ ಜೀವನಕ್ಕೆ ಅನುಕೂಲವಾಗಲಿದೆ ಅಂತಿದ್ದಾರೆ ಇಲ್ಲಿನ ಸ್ಥಳೀಯರು.
ಇನ್ನೂ ಬಗ್ಗೆ ಶಾಸಕ ವೆಂಕಟರಮಣ್ಯರನ್ನು ಪ್ರಶ್ನೆ ಮಾಡಿದರೆ ಇನ್ನೂ ಫಲಾನುಭವಿಗಳ ಆಯ್ಕೆ ನಡೆಯಬೇಕಿದೆ. ಅಲ್ಲದೆ ಸಂಬಂಧ ಪಟ್ಟ ಇಲಾಖೆಯಿಂದ ನನಗೆ ಯಾವುದೇ ಮಾಹಿತಿ ಬಂದಿಲ್ಲ. ಬಂದ ಕೂಡಲೇ ವಿತರಣೆ ಮಾಡುತ್ತೇನೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಅಂತಾ ಜಾರಿಕೆ ಉತ್ತರ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ತಾಲೂಕಿಗೆ ಬರಲಿದ್ದಾರೆ ಆ ವೇಳೆ ಹಂಚಿಕೆಗೆ ಸಿದ್ಧ ಮಾಡಿಕೊಳ್ಳುತ್ತಿದ್ದೇವೆ ಅಂತಾ ಪರೋಕ್ಷವಾಗಿ ತಮ್ಮ ರಾಜಕೀಯ ನಡೆಯನ್ನೂ ಕೂಡ ಸಮರ್ಥಿಸಿಕೊಂಡಿದ್ದಾರೆ.
ಒಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತಮ ಯೋಜನೆ ಜಾರಿಗೆ ತಂದರೆ ಇತ್ತ ಅವರೇ ಸರ್ಕಾರದ ಶಾಸಕರ ನಿರ್ಲಕ್ಷ್ಯ ಹಾಗೂ ರಾಜಕೀಯ ನಡೆಯಿಂದಾಗಿ ಈ ಬೈಕ್ ಗಳ ಅನಾಥವಾಗಿ ಕೊಳೆಯುವ ಪರಿಸ್ಥಿತಿಗೆ ಬಂದಿವೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications