CJ Roy: ಸಿಜೆ ರಾಯ್ ಸಾವಿಗೆ ಕುರಿಗಾಯಿ ಹನುಮಂತ ಲಮಾಣಿ ಸಂತಾಪ, ಉದ್ಯಮಿ ಸಹಾಯ ನೆನೆದು ಕಣ್ಣೀರು
ಬೆಂಗಳೂರು: ರಾಜಧಾನಿಯಲ್ಲಿ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಡಾ.ಸಿ.ಜೆ.ರಾಯ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಿಗೆ ಬಿಗ್ ಬಾಗ್ ಕನ್ನಡ 11ರ ವಿನ್ನರ್, ಉತ್ತರ ಕರ್ನಾಟಕದ ಪ್ರತಿಭೆ ಕುರಿಗಾಯಿ ಹನುಮಂತ ಲಮಾಣಿ ಅವರು ಸಂತಾಪ ಸೂಚಿಸಿದ್ದಾರೆ. ಹನುಮಂತ ಅವರು ಬಿಗ್ ಬಾಸ್ ವಿನ್ ಆಗಿದ್ದ ಸಂದರ್ಭದಲ್ಲಿ ಇದೇ ರಾಯ್ ಅವರು 50 ಲಕ್ಷ ರೂಪಾಯಿ ಹಣ ನೀಡಿದ್ದರು. ಅಂದಿನ ದಿನ ನೆನಪಿಸಿಕೊಂಡಿರುವ ಹನುಮಂತ ಅವರ ಸಂತಾಪ ಸೂಚಿಸಿದ್ದಾರೆ.
ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ಸಿ.ಜೆ. ರಾಯ್ ಅವರು ಸಿನಿಮಾ ರಂಗಕ್ಕೂ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದವರು. ಅಂತವರು ಆತ್ಮಹತ್ಯೆ ಮಾಡಿಕೊಂಡಿರುವುದು ಜನರಲ್ಲಿ 'ಕೋಟ್ಯಾಧಿಪತಿಗಳಾದರೂ ಸಹಿತ ನೆಮ್ಮದಿ ಇಲ್ಲದ ಜೀವನ ಶೂನ್ಯ' ಎಂಬ ಭಾವನೆ ಮೂಡಿಸಿದೆ. ಈ ಕೋಟ್ಯಾಧಿಪತಿ ಬಿಗ್ ಬಾಸ್ 11 ಕನ್ನಡ ರಿಯಾಲಿಟಿ ಶೋಗೆ 50 ಲಕ್ಷ ರೂಪಾಯಿ ನೀಡಿದ್ದರು.

ಹನುಮಂತ ಲಮಾಣಿ ಸಂತಾಪ, ಪೋಸ್ಟ್ನಲ್ಲಿ ಏನಿದೆ?
ಕನ್ನಡದ ಸರಿಗಮಪ 15ರ ಶೋನ ರನ್ನರ್ ಅಪ್ ಆಗಿದ್ದ ಗಾಯಕ ಹನುಮಂತ ಲಮಾಣಿ ಬಿಗ್ ಬಾಸ್ 11ಕನ್ನಡ ರಿಯಾಲಿಟಿ ಶೋನಲ್ಲಿ ಗೆದ್ದಿದ್ದರು. ಅವರ ಸರಳತೆ, ಗಾಯನದಲ್ಲಿನ ಪ್ರತಿಭೆ ಗುರುತಿಸಿದ್ದ ಡಾ.ರಾಯ್ ಅವರು ಆರ್ಥಿಕ ಸಹಾಯ ಮಾಡಿದ್ದರು. ಅಂದಿನ ವೇದಿಕೆಗೆ ಬಂದು 50 ಲಕ್ಷ ರೂಪಾಯಿ ಚೆಕ್ ನೀಡಿದ್ದರು. ಅದನ್ನು ನೆನೆದು ಹನುಮಂತ ಭಾವುಕ ಇನ್ಸ್ಟಾಗ್ರಾಮ್ನಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.
'ತುಂಬಾ ದುಃಖಕರ ಸಂಗತಿ. ಸರಿಗಮಪ ಸೀಸನ್ 15ರಲ್ಲಿ ರನ್ನರ್ ಅಪ್ ಅದ ನನಗೆ ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ದರು. ಬಿಗ್ ಬಾಸ್ ಸೀಸನ್ 11 ಗೆದ್ದಾಗಲೂ ಸಂಭ್ರಮಿಸಿ ಹಣ ನೀಡಿದ್ದರು. ನೀವು ಮತ್ತು ನಿಮ್ಮ ಋಣ ವನ್ನ ಯಾವತ್ತು ಮರಿಯೋಕೆ ಸಾಧ್ಯವಿಲ್ಲ. ನಿಮ್ಮ ಅಗಲಿಕೆ ಸುದ್ದಿ ಕೇಳಿ ಮನಸ್ಸು ಭಾರವಾಗಿದೆ' ಮಿಸ್ ಯೂ ಸರ್... ಎಂದು ಒಡೆದ ಹಾರ್ಟ್ ಎಮೋಜಿ ಹಾಕಿ ಸಂತಾಪ ಸೂಚಿಸಿ, ಭಾವುಕವಾಗಿ ಹನುಮಂತ ಬರೆದುಕೊಂಡಿದ್ದಾರೆ.
ಪ್ರತಿ ಅವಕಾಶ ಸಮರ್ಥ ಬಳಕೆ
ಹನುಮಂತ ಲಮಾಣಿ ಉತ್ತರ ಕರ್ನಾಟಕದ ಪ್ರತಿಭೆಯಾಗಿದ್ದು, ಕುರಿ ಮೇಯಿಸುತ್ತಲೇ ಜಾನಪದ ಹಾಡುಗಳನ್ನು ಅತ್ಯಂತ ಸೊಗಸಾಗಿ ಹಾಡಿದವರು. ಅದರಿಂದಲೇ ಅವರಿಗೆ ಸರಿಗಮಪ ಶೋ ನಲ್ಲಿ ಅವಕಾಶ ಸಿಕ್ಕಿತ್ತು. ಅಲ್ಲಿಂದ ಬಿಗ್ ಬಾಸ್ಗೆ ತೆರಳಿದರು. ಒಂದಷ್ಟು ಕಾಮಿಡಿ ಶೋಗಳಲ್ಲಿ ಸಹ ಕಾಣಿಸಿಕೊಂಡರು. ಸಿಕ್ಕ ಪ್ರತಿ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡರು. ಅವರ ಸರಳ ವ್ಯಕ್ತಿತ್ವ, ಮಾತುಗಳು, ಹಾಡುಗಳು ಸಿ.ಜೆ. ರಾಯ್ ಅವರಿಗೆ ತುಂಬ ಇಷ್ಟವಾಗಿದ್ದವು. ಹೀಗಾಗಿ ಅವರು ಆರ್ಥಿಕ ಸಹಾಯ ಮಾಡಿದ್ದರು. ಇಂದು ಅದೆಲ್ಲವನ್ನು ಹನುಮಂತ ನೆನಪಿಸಿಕೊಂಡಿದ್ದಾರೆ.
-
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ












Click it and Unblock the Notifications