ಕರೆ ಮಾಡಿ ಟ್ರಾಫಿಕ್ ಪೊಲೀಸರಿಗೆ ಮತ ನೀಡಿ
ಬೆಂಗಳೂರು: ಸೆ. 18: ಟ್ರಾಫಿಕ್ ಪೊಲೀಸರ ಕಾರ್ಯ ವೈಖರಿ ಬಗ್ಗೆ ನಿಮ್ಮ ದೂರನ್ನು ಅಥವಾ ಮೆಚ್ಚುಗೆಯನ್ನು ಇನ್ನು ಮುಕ್ತವಾಗಿ ವ್ಯಕ್ತಪಡಿಸಬಹುದು. ಟ್ರಾಫಿಕ್ ಪೊಲೀಸರ ಮೇಲೆ ಜನರು ಇಟ್ಟಿರುವ ಭಾವನೆಗಳೇನು? ಇಲಾಖೆ ಮಟ್ಟದಲ್ಲಿ ಯಾವ ಸುಧಾರಣೆ ಮಾಡಿಕೊಳ್ಳಬಹುದು ಎಂಬ ಅಂಶಗಳನ್ನು ಲೆಕ್ಕಹಾಕಲು ವಿನೂತನ ವ್ಯವಸ್ಥೆ ಜಾರಿಗೆ ಬಂದಿದೆ.
ಟ್ರಾಫಿಕ್ ಪೊಲೀಸರ ಕೆಲಸ ತೃಪ್ತಿದಾಯಕವಾಗಿದೆ ಅಥವಾ ಇಲ್ಲ ಎಂದು ನೀವೇ ವೋಟ್ ಮಾಡಬಹುದು. ನಿಮ್ಮ ಪ್ರತಿಕ್ರಿಯೆ ಆಧರಿಸಿ ಉತ್ತಮ ಪೊಲೀಸರಿಗೆ ಇಲಾಖೆಯಿಂದ ಸನ್ಮಾನವೂ ದೊರೆಯಲಿದೆ.(ಶನಿವಾರ ರಾತ್ರಿ ಕುಡಿದು ಗಾಡಿ ಓಡಿಸಿದವರ ಲೆಕ್ಕ)

ಅಕ್ಟೋಬರ್ 1 ರಿಂದ ಬೆಂಗಳೂರಿನ 5 ಪ್ರಮುಖ ವೃತ್ತಗಳಲ್ಲಿ ಯೋಜನೆ ಜಾರಿಗೆ ಬರಲಿದೆ. ಪೊಲೀಸ್ ಇಲಾಖೆ ಮತ್ತು ಬೆಂಗಳೂರು ಟ್ರಾಫಿಕ್ ಪೊಲೀಸರ ನೆರವಿನಲ್ಲಿ ಎನ್ಜಿಒವೊಂದು ಈ ಯೋಜನೆಯನ್ನು ರೂಪಿಸಿದೆ.
ಹೇಗೆ ಕಾರ್ಯನಿರ್ವಹಿಸುತ್ತೆ?
ನಿರ್ದಿಷ್ಟ ಪಡಿಸಿದ ಜಂಕ್ಷನ್ ನಲ್ಲಿ ಡಿಸ್ಪ್ಲೇ ಬೋರ್ಡ್ ಅಳವಡಿಸಿ ಮೊಬೈಲ್ ನಂಬರ್ ವೊಂದನ್ನು ಬಿತ್ತರಿಸಲಾಗುವುದು. ಜನರಿಗೆ ಈ ನಂಬರ್ಗೆ ಕರೆ ಮಾಡುವಂತೆ ತಿಳಿಸಲಾಗುವುದು. ನಾಗರಿಕರು ಈ ನಂಬರ್ಗೆ ಕರೆ ಮಾಡಿದರೆ ಅದು ತನ್ನಿಂದ ತಾನೇ ಕೊನೆಗೊಳ್ಳುವುದು. ಆದರೆ ಕರೆ ಮಾಡಿದವರಿಗೆ ಒಂದು(ಅಂತರ್ಜಾಲ ತಾಣದ) ಲಿಂಕ್ ಇರುವ ಎಸ್ಎಂಎಸ್ ತಲುಪುತ್ತದೆ. ಈ ಲಿಂಕ್ ಕ್ಲಿಕ್ ಮಾಡಿ www.ourtpc.com ಕ್ಕೆ ಭೇಟಿ ನೀಡಿ ನಿಮ್ಮ ಅಭಿಪ್ರಾಯ ದಾಖಲಿಸಬಹುದು ಎಂದು ಕಾರ್ಯಕ್ರಮದ ನೇತೃತ್ವ ವಹಿಸಿರುವ ಟಿಪಿಸಿ ಸಂಸ್ಥೆಯ ಸಿಇಒ ಸಂತೋಷ್ ಕುಮಾರ್ ತಿಳಿಸಿದರು.('ಸಾರ್ವಜನಿಕ ಕಣ್ಣು' ಅಂದ್ರೇನು ಗೊತ್ತಾ ನಿಮಗೆ?)
ಎಲ್ಲೆಲ್ಲಿ ಡಿಸ್ಪ್ಲೇ ಬೋರ್ಡ್ ಅಳವಡಿಕೆ?
ನಗರದ ಅತ್ಯಧಿಕ ಟ್ರಾಫಿಕ್ ಸಮಸ್ಯೆ ಅನುಭವಿಸುವ ಸಿಎಂಎಚ್ ರಸ್ತೆ ಬಿಎಂಶ್ರೀ ವೃತ್ತ, ಜಯನಗರ ಸೌತ್ ಎಂಡ್ ವೃತ್ತ, ಕೋರಮಂಗಲ ಸೋನಿ ಜಂಕ್ಷನ್, ಸಿಲ್ಕ್ ಬೋರ್ಡ್ ಮತ್ತು ಮಾನ್ಯತಾ ಟೆಕ್ ಪಾರ್ಕ್ ಗಳಲ್ಲಿ ಪೋನ್ ನಂಬರ್ ಬಿತ್ತರಿಸಲಾಗುವುದು ಎಂದು ಟ್ರಾಫಿಕ್ ವಿಭಾಗದ ಎಸಿಪಿ ಬಿ.ದಯಾನಂದ್ ತಿಳಿಸಿದರು. ನಂತರ ಪ್ರತಿಕ್ರಿಯೆ ಆಧರಿಸಿ ಇತರ ಕಡೆ ವಿಸ್ತರಿಸುವ ಯೋಜನೆಯಿದೆ ಎಂದು ತಿಳಿಸಿದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications