ಬೆಂಗಳೂರಿಗರೇ ಗಮನಿಸಿ, ಹೊಸ ಕಾಯ್ದೆ ಜಾರಿಗೊಳಿಸಿದ ಬಿಬಿಎಂಪಿ
ಬೆಂಗಳೂರು,ಜನವರಿ 11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇಂದಿನಿಂದ ಹೊಸ ಕಾಯ್ದೆ ಜಾರಿಯಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ಎರಡೂ ಸದನಗಳಲ್ಲಿ ಒಪ್ಪಿಗೆ ನೀಡಿ ಕಾಯ್ದೆಗೆ ಅನುಮೋದನೆ ಪಡೆಯಲಾಗಿದ್ದು, ಈಗ ಹೊಸ ಕಾಯ್ದೆ ಬಂದಿದೆ. ವಾರ್ಡ್ಗಳ ಸಂಖ್ಯೆ ಹೆಚ್ಚಳವಾಗಬೇಕಿದೆ. ಹೊಸ ಪ್ರದೇಶಗಳ ಸೇರ್ಪಡೆಗೆ ಅವಕಾಶವಿದೆ. ಹೀಗಾಗಿ ನಗರದ ಹೊರವಲಯಗಳಿಗೆ ಗುಡ್ ನ್ಯೂಸ್ ಸಿಗಲಿದೆ.
ನಗರದಲ್ಲಿ 8 ವಲಯಗಳಿದ್ದು ಅದನ್ನು 15 ವಲಯಗಳನ್ನಾಗಿ ಮಾಡಬಹುದು. ವಲಯ ಡಿ ಮಾರ್ಕೆಷನ್ ಕಮೀಷನ್ ರಚನೆಗೆ ಅವಕಾಶವಿದೆ. ವಲಯ ವ್ಯಾಪ್ತಿಯ ವಾರ್ಡ್ಗಳ ಸಂಖ್ಯೆಯನ್ನು ಸಮಿತಿಯ ಸದಸ್ಯರು ನಿರ್ಧಾರ ಮಾಡಲಿದ್ದಾರೆ.

ಜಂಟಿ ಆಯುಕ್ತರು ಆಗ ವಲಯ ಆಯುಕ್ತರಾಗಲಿದ್ದಾರೆ. ರಾಜ್ಯ ಸರ್ಕಾರದ ಕಾರ್ಯದರ್ಶಿ ಅಧೀನದಲ್ಲಿ ಜೋನಲ್ ಕಮೀಷನರ್ ಕಾರ್ಯ ನಿರ್ವಹಿಸಲಿದ್ದಾರೆ. ಸೆಕ್ರೆಟರಿ ಲೆವಲ್ ಅಧಿಕಾರಿಗಳ ನೇಮಕ, ವಾರ್ಡ್ ಸಂಖ್ಯೆಗಳಹೆಚ್ಚಳ ಆಗಬೇಕಿದೆ, ಯಾವ ಆಧಾರದಲ್ಲಿ ಪ್ರದೇಶಗಳ ಸೇರ್ಪಡೆ ಮಾಡಬೇಕೆಂಬ ಅಂತಿಮ ತೀರ್ಮಾನ ಸರ್ಕಾರ ಕೈಗೊಳ್ಳಲಿದೆ ಎಂದರು.
ಯಾವ ಆಧಾರದಲ್ಲಿ ಪ್ರದೇಶಗಳನ್ನು ಬಿಬಿಎಂಪಿಗೆ ಸೇರ್ಪಡೆ ಮಾಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಬೇಕಿದ್ದು, ವಾರ್ಡ್ಗಳ ಸೇರ್ಪಡೆ ಅಂತಿಮ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಿದರು.
ವಾರ್ಡ್ ಸಂಖ್ಯೆ ಹೆಚ್ಚಳ ವಿಚಾರಕ್ಕೆ ಸರ್ಕಾರ ಅನುಮೋದನೆ ನೀಡಬೇಕು. ಕರಡು ಪ್ರತಿ ರಚನೆ ಮಾಡಿ ಸಾರ್ವಜನಿಕರ ಅಭಿಪ್ರಾಯ ಪಡೆದ ನಂತರ ಅಧಿಸೂಚನೆ ಹೊರಬೀಳಲಿದೆ ಎಂದು ತಿಳಿಸಿದರು.
ಸದ್ಯ ಈ ಸಂಬಂಧಿತ ಬೈಲಾ-ಆ್ಯಕ್ಟ್ ಎರಡೂ ಪಾಲಿಕೆಯ ಮುಂದಿದೆ. ಎರಡನ್ನೂ ಪರಾಮರ್ಶಿಸಿದಾಗ ಕಾಯ್ದೆ ಅಂತಿಮವಾಗಲಿದೆ. ತಾಜಾ ನಿದರ್ಶನವೆಂದರೆ ಆಯುಕ್ತರ ಅನುಮತಿ ಪಡೆದು ಜಾಹಿರಾತು ಹಾಕಲು ಅವಕಾಶವಿದೆ ಎಂದು ಹೇಳಿದರು. ಮಾಡಲ್ ಬಿಲ್ಡಿಂಗ್ ಬೈಲಾ ಕೇಂದ್ರ ಸರ್ಕಾರ ನೀಡಿದ್ದು, ಇದನ್ನು ಅಳವಡಿಸಿಕೊಳ್ಳಲಾಗುತ್ತಿದೆ.
1976ರಿಂದ ಕೆಎಂಸಿ ಆ್ಯಕ್ಟ್ ಬಂದಿತ್ತು. ಇದರಡಿ ಎಲ್ಲ ಮಹಾನಗರ ಪಾಲಿಕೆಗಳು ನಡೆಯುತ್ತಿತ್ತು. ಆದರೆ ಈಗ ಹೊಸ ಕಾಯ್ದೆ ಬಂದಿದೆ ಎಂದರು.
ಹೊಸ ಕಾಯ್ದೆ ಪ್ರಕಾರ ಸಮಿತಿ ರಚನೆಯಾದ ಮೇಲೆ 198ರಿಂದ 243 ವಾರ್ಡ್ಗಳು ಆಗಲಿವೆ. ಒಂದು ಕಿ.ಮೀ ವ್ಯಾಪ್ತಿಯಲ್ಲಿ ನಗರದ ಹೊರವಲಯವನ್ನು ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ. ಪ್ರತಿ ವಾರ್ಡ್ ಕಮಿಟಿಯಲ್ಲಿ ಪರಿಶಿಷ್ಟ ಜಾತಿ/ ಪಂಗಡದವರು, ಮಹಿಳಾ ಸದಸ್ಯರು ಇರುತ್ತಾರೆ. ಮುಖ್ಯ ಆಯುಕ್ತರು ಈ ಸದಸ್ಯರನ್ನು ನೇಮಕ ಮಾಡಲಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications